AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತ ಪೊಲೀಸ್ ಅಧಿಕಾರಿ ಶಂಕರ್ ಬಿದರಿ ಬ್ಯಾಂಕ್ ಖಾತೆಯಿಂದಲೇ 89 ಸಾವಿರ ರೂ. ದೋಚಿದ ಸೈಬರ್ ಕಳ್ಳರು

Cyber Crime: ಒಟಿಪಿ ಪಡೆದು ಅಕೌಂಟ್​​ನಲ್ಲಿದ್ದ 89 ಸಾವಿರ ರೂಪಾಯಿ ವಂಚನೆ ಮಾಡಿದ್ದಾರೆ. ಆಗ್ನೇಯ ವಿಭಾಗದ CEN ಠಾಣೆಗೆ ಶಂಕರ್ ಬಿದರಿ ದೂರು‌ ನೀಡಿದ್ದಾರೆ. ಬಿದರಿ ದೂರಿನ ಮೇರೆಗೆ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ.

ನಿವೃತ್ತ ಪೊಲೀಸ್ ಅಧಿಕಾರಿ ಶಂಕರ್ ಬಿದರಿ ಬ್ಯಾಂಕ್ ಖಾತೆಯಿಂದಲೇ 89 ಸಾವಿರ ರೂ. ದೋಚಿದ ಸೈಬರ್ ಕಳ್ಳರು
ಶಂಕರ್​ ಬಿದರಿ
TV9 Web
| Edited By: |

Updated on:Oct 15, 2021 | 9:44 PM

Share

ಬೆಂಗಳೂರು: ನಿವೃತ್ತ ಡಿಜಿ & ಐಜಿಪಿ ಬ್ಯಾಂಕ್​​ ಖಾತೆಗೆ ಸೈಬರ್​ ಕಳ್ಳರು ಕನ್ನ ಹಾಕಿರುವ ಘಟನೆ ನಡೆದಿದೆ. ಬ್ಯಾಂಕ್ ಅಧಿಕಾರಿ ಸೋಗಿನಲ್ಲಿ ಕರೆಮಾಡಿ ಕಳ್ಳರು ವಂಚಿಸಿದ್ದಾರೆ. ನಿವೃತ್ತ ಡಿಜಿ & ಐಜಿಪಿ ಶಂಕರ್ ಬಿದರಿಗೆ ಕಳ್ಳರು ವಂಚನೆ ಮಾಡಿದ್ದಾರೆ. ನಿಮ್ಮ ಅಕೌಂಟ್​​ಗೆ ಪಾನ್​ ಕಾರ್ಡ್​ ಲಿಂಕ್​ ಮಾಡಬೇಕು. ಲಿಂಕ್ ಮಾಡದಿದ್ದರೆ ಖಾತೆ ಬಂದಾಗುತ್ತದೆ ಎಂದು ಹೇಳಿ ಒಟಿಪಿ ಪಡೆದು ಅಕೌಂಟ್​​ನಲ್ಲಿದ್ದ 89 ಸಾವಿರ ರೂಪಾಯಿ ವಂಚನೆ ಮಾಡಿದ್ದಾರೆ. ಆಗ್ನೇಯ ವಿಭಾಗದ CEN ಠಾಣೆಗೆ ಶಂಕರ್ ಬಿದರಿ ದೂರು‌ ನೀಡಿದ್ದಾರೆ. ಬಿದರಿ ದೂರಿನ ಮೇರೆಗೆ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ.

ಸೈಬರ್ ಹಾಗೂ ಇನ್ನಿತರ ವಿಧಾನ, ಆಮಿಷದ ಮೂಲಕ ವಂಚನೆ ನಡೆಸುವುದು ಇತ್ತೀಚೆಗೆ ತುಂಬಾ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ. ಮೊಬೈಲ್ ಫೋನ್, ಇಂಟರ್​ನೆಟ್​ನಲ್ಲಿ ಹಲವು ರೀತಿಯಿಂದ ಜನರನ್ನು ವಂಚನೆ ಮಾಡಲಾಗುತ್ತಿದೆ. ನಕಲಿ ಫೇಸ್​ಬುಕ್ ಖಾತೆಯಲ್ಲಿ ಹಣ ಕೇಳುವುದು, ಮೆಸೇಜ್ ಮೂಲಕ, ನಿಮಗೆ ಲಾಟರಿ ಬಂದಿದೆ, ನಿಮ್ಮ ಬ್ಯಾಂಕ್ ಖಾತೆ ಸಮಸ್ಯೆ ಆಗಿದೆ, ನಾವು ಇಂತಹ ಕಚೇರಿ ಸಿಬ್ಬಂದಿ.. ಹೀಗೆ ಹತ್ತಾರು ಬಗೆಯಲ್ಲಿ ಮಾತನಾಡಿ ಅಥವಾ ಮೆಸೇಜ್ ಮಾಡಿ ಜನರನ್ನು ಮೋಸದ ಜಾಲಕ್ಕೆ ಬೀಳಿಸಲಾಗುತ್ತಿದೆ. ಇದರಿಂದ ಸಾಕಷ್ಟು ಮಂದಿ ಹಣ ಕಳೆದುಕೊಂಡು ನೊಂದಿದ್ದಾರೆ.

ಭಾರತದಲ್ಲಿ ಅಥವಾ ಕರ್ನಾಟಕದಲ್ಲಿ ಸೈಬರ್ ಕ್ರೈಂ ಪ್ರಕರಣಗಳ ಪ್ರಮಾಣ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ, ಜನರು, ಇಂಟರ್​ನೆಟ್ ಬಳಕೆದಾರರು ಹೆಚ್ಚು ಎಚ್ಚರಿಕೆಯಿಂದ ಇರಬೇಕಾದ ಅನಿವಾರ್ಯತೆ ಇದೆ. ಯಾರೂ ಕೂಡ ಅನಗತ್ಯವಾಗಿ ನಿಮ್ಮ ಬ್ಯಾಂಕ್ ಅಕೌಂಟ್ ಡೀಟೇಲ್ಸ್ ಅಥವಾ ಯಾವುದೇ ಮಾಹಿತಿ ನೀಡಬಾರದು. ಏನೇ ವಿವರ ಪಡೆಯುವುದಿದ್ದರೂ ಅಥವಾ ಕೊಡುವುದು ಇದ್ದರೂ ಅದು ಅಧಿಕೃತ ಸಿಬ್ಬಂದಿ ಎಂದು ತಿಳಿದ ಬಳಿಕವೇ ಕಾರ್ಯೋನ್ಮುಖರಾಗಬೇಕು. ಲಾಟರಿ ಬಂತು, ಜಾಕ್​ಪಾಟ್ ಹೊಡೀತು ಎಂದು ಭ್ರಮೆಗೆ ಒಳಗಾಗಿ ನಿಮ್ಮ ಖಾತೆ ವಿವರಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ.

ಎಟಿಎಂ ಕಾರ್ಟ್, ಬ್ಯಾಂಕ್ ಖಾತೆ, ಕ್ರೆಡಿಟ್ ಕಾರ್ಡ್, ಶಾಪಿಂಗ್ ಕಾರ್ಡ್​ಗಳು ಅಥವಾ ಯುಪಿಐ ಐಡಿ, ಫೋನ್ ಪೇ, ಗೂಗಲ್ ಪೇ ಇತ್ಯಾದಿಗಳು ಮತ್ತು ಆನ್​ಲೈನ್ ಬ್ಯಾಂಕಿಂಗ್ ನಡೆಸುವಾಗಲೂ ಎಚ್ಚರದಿಂದಿರಿ. ನಿಮ್ಮ ಖಾತೆಯ ವಿವರಗಳು, ಪಾಸ್​ವರ್ಡ್ ನಿಮ್ಮ ಬಳಿ ಮಾತ್ರ ಇರಲಿ. ಯಾವುದೇ ಕಾರಣಕ್ಕೂ ಯಾರೋ ಕೇಳಿದರು ಎಂದು ನಿಮ್ಮ ಮೊಬೈಲ್​ಗೆ ಬರುವ ಒಟಿಪಿಯನ್ನು ಸುಮ್ಮನೆ ಹಂಚಿಕೊಳ್ಳಬೇಡಿ.

ಇದನ್ನೂ ಓದಿ: ಸರ್ಕಾರಿ ನೌಕರಿ ಕೊಡಿಸುವುದಾಗಿ ಹೇಳಿ ಜಾವೇದ್ ಅಖ್ತರ್ ಸಹಿ ನಕಲು ಮಾಡಿ ವಂಚನೆ, ವಿಧಾನಸೌಧ ಪೊಲೀಸರಿಂದ ಆರೋಪಿ ಅರೆಸ್ಟ್

ಇದನ್ನೂ ಓದಿ: ನಿರ್ದೇಶಕ ಎಸ್​. ನಾರಾಯಣ್​ ಹೆಸರಲ್ಲಿ ವಂಚನೆಗೆ ಯತ್ನ; ಹಣ ಕಳೆದುಕೊಳ್ಳಬೇಡಿ ಹುಷಾರ್​

Published On - 7:57 pm, Fri, 15 October 21

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ