AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕಾಲಿಕ ಮಳೆಯಿಂದ ಬೆಳೆ ಹಾನಿ: ತರಕಾರಿ ಬೆಲೆ ಏರಿಕೆ, ಗ್ರಾಹಕರಿಗೆ ಸಂಕಷ್ಟ

ಫೆಂಗಲ್ ಚಂಡಮಾರುತದಿಂದಾಗಿ ರಾಜ್ಯಾದ್ಯಂತ ಭಾರಿ ಮಳೆಯಾಗಿದ್ದು, ಕಟಾವಿಗೆ ಬಂದ ತರಕಾರಿಗಳು ಹಾನಿಗೀಡಾಗಿವೆ. ಇದರಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ತರಕಾರಿ ಬೆಲೆಗಳು ಗಗನಕ್ಕೇರಿವೆ. ಬೆಳ್ಳುಳ್ಳಿ, ಈರುಳ್ಳಿ, ನುಗ್ಗೆಕಾಯಿ ಮುಂತಾದ ತರಕಾರಿಗಳ ಬೆಲೆಗಳು ತೀವ್ರವಾಗಿ ಏರಿಕೆಯಾಗಿವೆ. ಅಕಾಲಿಕ ಮಳೆಯಿಂದಾಗಿ ಬೆಳೆಗಳು ಹಾನಿಗೊಳಗಾಗಿರುವುದು ಬೆಲೆ ಏರಿಕೆಗೆ ಕಾರಣವಾಗಿದೆ.

ಅಕಾಲಿಕ ಮಳೆಯಿಂದ ಬೆಳೆ ಹಾನಿ: ತರಕಾರಿ ಬೆಲೆ ಏರಿಕೆ, ಗ್ರಾಹಕರಿಗೆ ಸಂಕಷ್ಟ
ತರಕಾರಿ
ಕಿರಣ್​ ಸೂರ್ಯ
| Edited By: |

Updated on:Dec 08, 2024 | 9:35 AM

Share

ಬೆಂಗಳೂರು, ಡಿಸೆಂಬರ್​​ 08: ಫೆಂಗಲ್ ಚಂಡಮಾರುತದಿಂದ (Fengal Cyclone) ರಾಜ್ಯಾದ್ಯಂತ ಮಳೆಯಾಗಿದೆ. ಇದರಿಂದ ಕಟಾವಿಗೆ ಬಂದ ತರಕಾರಿ ಮಣ್ಣು ಪಾಲಾಗಿದೆ. ಹೀಗಾಗಿ, ತರಕಾರಿ (Vegetable) ಬೆಲೆ ಗಗನಕ್ಕೇರಿದೆ. ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಅಕಾಲಿಕ ಮಳೆಯಿಂದ ಬೆಳೆಗಳು ನೆಲಕಚ್ಚಿವೆ. ಇದರಿಂದ, ಅಗತ್ಯಕ್ಕೆ ತಕ್ಕಷ್ಟು ತರಕಾರಿ ಪೂರೈಕೆಯಾಗದ ಹಿನ್ನೆಲೆಯಲ್ಲಿ ಬೆಲೆ ಏರಿಕೆಯಾಗಿದೆ. ಬೆಳ್ಳುಳ್ಳಿ ಕೆಜಿಗೆ 600 ರೂಪಾಯಿ ಆಗಿದ್ದರೇ, ನುಗ್ಗೆಕಾಯಿ 500 ರೂ. ಗಡಿ ತಲುಪಿದೆ. ಒಂದು ನುಗ್ಗೆಕಾಯಿ 50 ರಿಂದ 60 ರೂಪಾಯಿಗೆ ಮಾರಾಟವಾಗುತ್ತಿದೆ.

ಬೆಂಗಳೂರಿನಲ್ಲಿ ತರಕಾರಿ ಬೆಲೆ

ಟೊಮೇಟೊ ಕೆಜಿಗೆ: 60-70 ರೂ., ಬೆಳ್ಳುಳ್ಳಿ: 550-600 ರೂ., ಈರುಳ್ಳಿ: 70-80 ರೂ., ನುಗ್ಗೆಕಾಯಿ: 500ರೂ., ಬಟಾಣಿ: 180-200 ರೂ., ಮೆಣಸಿನಕಾಯಿ: 40-80 ರೂ., ಆಲೂಗಡ್ಡೆ: 50-55 ರೂ., ಬೀನ್ಸ್: 60 ರೂ., ಗಜ್ಜರಿ: 60-80ರೂ., ದೊಡ್ಡ ಮೆಣಸಿನಕಾಯಿ ಹಸಿರು: 50 ರೂ., ದೊಡ್ಡ ಮೆಣಸಿನಕಾಯಿ ಹಳದಿ, ಕೆಂಪು: 150-180 ರೂ., ಬೀಟ್ರೂಟ್: 60 ರೂ., ರಿಟೇಲ್​ನಲ್ಲಿ ಬೆಳ್ಳುಳ್ಳಿ ಕೆಜಿಗೆ: 500-550 ರೂ., ಎಪಿಎಂಸಿ ಮಾರುಕಟ್ಟೆಯಲ್ಲಿ: 400-450 ರೂ. ಮಾರಾಟವಾಗುತ್ತಿದೆ.

ಇದನ್ನೂ ಓದಿ: ಮತ್ತೆ ಗಗನಕ್ಕೇರಿದ ಈರುಳ್ಳಿ, ಬೆಳ್ಳುಳ್ಳಿ ಬೆಲೆ: ದರ ಏರಿಕೆ ಕಂಡು ಗೃಹಿಣಿಯರು ಕಂಗಾಲು

ಹಾಪ್ ಕಾಮ್ಸ್​​ನಲ್ಲಿ ಇಂದಿನ ದರ

ಬೆಳ್ಳುಳ್ಳಿ ಕೆಜಿ: 530 ರೂ., ನುಗ್ಗೆಕಾಯಿ: 520 ರೂ., ಬಟಾಣಿ: 130-240 ರೂ., ಗಜ್ಜರಿ: 110 ರೂ., ನಿಂಬೆಹಣ್ಣು: 100 ರೂ., ಈರುಳ್ಳಿ: 94 ರೂ., ತೊಂಡೆಕಾಯಿ: 90 ರೂ., ಟೊಮೇಟೊ: 90 ರೂ., ಶುಂಠಿ: 80 ರೂ., ಬೀನ್ಸ್​: 75 ರೂ., ಬೆಂಡೆಕಾಯಿ: 75 ರೂ., ಬೀಟ್ರೂಟ್: 70 ರೂ., ದೊಡ್ಡ ಮೆಣಸಿನಕಾಯಿ: 62 ರೂ., ಸೋರೆಕಾಯಿ: 62 ರೂ., ಆಲೂಗಡ್ಡೆ: 60 ರೂ., ಹಸಿ ಮೆಣಸಿನಕಾಯಿ: 58 ರೂ., ಪಡವಲಕಾಯಿ: 50 ರೂ., ತೆಂಗಿನಕಾಯಿ (ದಪ್ಪ): 50 ರೂ., ತೆಂಗಿನಕಾಯಿ (ಮಧ್ಯಮ) 43 ರೂ., ಬಿಳಿ ಬದನೆ: 46 ರೂ., ಹೀರೇಕಾಯಿ: 44 ರೂ., ಎಲೆಕೋಸು: 43 ರೂ., ಗುಂಡು ಬದನೆ: 42 ರೂ., ಹೂಕೋಸು: 42 ರೂ., ಹಾಗಲಕಾಯಿ: 40 ರೂ., ಸೌತೆಕಾಯಿ: 36 ರೂ., ಸೀಮೆಬದನೆಕಾಯಿ: 29 ರೂ., ಬೂದುಕುಂಬಳಕಾಯಿ: 25 ರೂ., ಸಿಹಿ ಕುಂಬಳಕಾಯಿ: 25 ರೂ ಗೆ ಮಾರಾಟವಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:33 am, Sun, 8 December 24

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ