AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕಾಲಿಕ ಮಳೆಯಿಂದ ಬೆಳೆ ಹಾನಿ: ತರಕಾರಿ ಬೆಲೆ ಏರಿಕೆ, ಗ್ರಾಹಕರಿಗೆ ಸಂಕಷ್ಟ

ಫೆಂಗಲ್ ಚಂಡಮಾರುತದಿಂದಾಗಿ ರಾಜ್ಯಾದ್ಯಂತ ಭಾರಿ ಮಳೆಯಾಗಿದ್ದು, ಕಟಾವಿಗೆ ಬಂದ ತರಕಾರಿಗಳು ಹಾನಿಗೀಡಾಗಿವೆ. ಇದರಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ತರಕಾರಿ ಬೆಲೆಗಳು ಗಗನಕ್ಕೇರಿವೆ. ಬೆಳ್ಳುಳ್ಳಿ, ಈರುಳ್ಳಿ, ನುಗ್ಗೆಕಾಯಿ ಮುಂತಾದ ತರಕಾರಿಗಳ ಬೆಲೆಗಳು ತೀವ್ರವಾಗಿ ಏರಿಕೆಯಾಗಿವೆ. ಅಕಾಲಿಕ ಮಳೆಯಿಂದಾಗಿ ಬೆಳೆಗಳು ಹಾನಿಗೊಳಗಾಗಿರುವುದು ಬೆಲೆ ಏರಿಕೆಗೆ ಕಾರಣವಾಗಿದೆ.

ಅಕಾಲಿಕ ಮಳೆಯಿಂದ ಬೆಳೆ ಹಾನಿ: ತರಕಾರಿ ಬೆಲೆ ಏರಿಕೆ, ಗ್ರಾಹಕರಿಗೆ ಸಂಕಷ್ಟ
ತರಕಾರಿ
Kiran Surya
| Edited By: |

Updated on:Dec 08, 2024 | 9:35 AM

Share

ಬೆಂಗಳೂರು, ಡಿಸೆಂಬರ್​​ 08: ಫೆಂಗಲ್ ಚಂಡಮಾರುತದಿಂದ (Fengal Cyclone) ರಾಜ್ಯಾದ್ಯಂತ ಮಳೆಯಾಗಿದೆ. ಇದರಿಂದ ಕಟಾವಿಗೆ ಬಂದ ತರಕಾರಿ ಮಣ್ಣು ಪಾಲಾಗಿದೆ. ಹೀಗಾಗಿ, ತರಕಾರಿ (Vegetable) ಬೆಲೆ ಗಗನಕ್ಕೇರಿದೆ. ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಅಕಾಲಿಕ ಮಳೆಯಿಂದ ಬೆಳೆಗಳು ನೆಲಕಚ್ಚಿವೆ. ಇದರಿಂದ, ಅಗತ್ಯಕ್ಕೆ ತಕ್ಕಷ್ಟು ತರಕಾರಿ ಪೂರೈಕೆಯಾಗದ ಹಿನ್ನೆಲೆಯಲ್ಲಿ ಬೆಲೆ ಏರಿಕೆಯಾಗಿದೆ. ಬೆಳ್ಳುಳ್ಳಿ ಕೆಜಿಗೆ 600 ರೂಪಾಯಿ ಆಗಿದ್ದರೇ, ನುಗ್ಗೆಕಾಯಿ 500 ರೂ. ಗಡಿ ತಲುಪಿದೆ. ಒಂದು ನುಗ್ಗೆಕಾಯಿ 50 ರಿಂದ 60 ರೂಪಾಯಿಗೆ ಮಾರಾಟವಾಗುತ್ತಿದೆ.

ಬೆಂಗಳೂರಿನಲ್ಲಿ ತರಕಾರಿ ಬೆಲೆ

ಟೊಮೇಟೊ ಕೆಜಿಗೆ: 60-70 ರೂ., ಬೆಳ್ಳುಳ್ಳಿ: 550-600 ರೂ., ಈರುಳ್ಳಿ: 70-80 ರೂ., ನುಗ್ಗೆಕಾಯಿ: 500ರೂ., ಬಟಾಣಿ: 180-200 ರೂ., ಮೆಣಸಿನಕಾಯಿ: 40-80 ರೂ., ಆಲೂಗಡ್ಡೆ: 50-55 ರೂ., ಬೀನ್ಸ್: 60 ರೂ., ಗಜ್ಜರಿ: 60-80ರೂ., ದೊಡ್ಡ ಮೆಣಸಿನಕಾಯಿ ಹಸಿರು: 50 ರೂ., ದೊಡ್ಡ ಮೆಣಸಿನಕಾಯಿ ಹಳದಿ, ಕೆಂಪು: 150-180 ರೂ., ಬೀಟ್ರೂಟ್: 60 ರೂ., ರಿಟೇಲ್​ನಲ್ಲಿ ಬೆಳ್ಳುಳ್ಳಿ ಕೆಜಿಗೆ: 500-550 ರೂ., ಎಪಿಎಂಸಿ ಮಾರುಕಟ್ಟೆಯಲ್ಲಿ: 400-450 ರೂ. ಮಾರಾಟವಾಗುತ್ತಿದೆ.

ಇದನ್ನೂ ಓದಿ: ಮತ್ತೆ ಗಗನಕ್ಕೇರಿದ ಈರುಳ್ಳಿ, ಬೆಳ್ಳುಳ್ಳಿ ಬೆಲೆ: ದರ ಏರಿಕೆ ಕಂಡು ಗೃಹಿಣಿಯರು ಕಂಗಾಲು

ಹಾಪ್ ಕಾಮ್ಸ್​​ನಲ್ಲಿ ಇಂದಿನ ದರ

ಬೆಳ್ಳುಳ್ಳಿ ಕೆಜಿ: 530 ರೂ., ನುಗ್ಗೆಕಾಯಿ: 520 ರೂ., ಬಟಾಣಿ: 130-240 ರೂ., ಗಜ್ಜರಿ: 110 ರೂ., ನಿಂಬೆಹಣ್ಣು: 100 ರೂ., ಈರುಳ್ಳಿ: 94 ರೂ., ತೊಂಡೆಕಾಯಿ: 90 ರೂ., ಟೊಮೇಟೊ: 90 ರೂ., ಶುಂಠಿ: 80 ರೂ., ಬೀನ್ಸ್​: 75 ರೂ., ಬೆಂಡೆಕಾಯಿ: 75 ರೂ., ಬೀಟ್ರೂಟ್: 70 ರೂ., ದೊಡ್ಡ ಮೆಣಸಿನಕಾಯಿ: 62 ರೂ., ಸೋರೆಕಾಯಿ: 62 ರೂ., ಆಲೂಗಡ್ಡೆ: 60 ರೂ., ಹಸಿ ಮೆಣಸಿನಕಾಯಿ: 58 ರೂ., ಪಡವಲಕಾಯಿ: 50 ರೂ., ತೆಂಗಿನಕಾಯಿ (ದಪ್ಪ): 50 ರೂ., ತೆಂಗಿನಕಾಯಿ (ಮಧ್ಯಮ) 43 ರೂ., ಬಿಳಿ ಬದನೆ: 46 ರೂ., ಹೀರೇಕಾಯಿ: 44 ರೂ., ಎಲೆಕೋಸು: 43 ರೂ., ಗುಂಡು ಬದನೆ: 42 ರೂ., ಹೂಕೋಸು: 42 ರೂ., ಹಾಗಲಕಾಯಿ: 40 ರೂ., ಸೌತೆಕಾಯಿ: 36 ರೂ., ಸೀಮೆಬದನೆಕಾಯಿ: 29 ರೂ., ಬೂದುಕುಂಬಳಕಾಯಿ: 25 ರೂ., ಸಿಹಿ ಕುಂಬಳಕಾಯಿ: 25 ರೂ ಗೆ ಮಾರಾಟವಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:33 am, Sun, 8 December 24

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ