AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕಾಲಿಕ ಮಳೆಯಿಂದ ಬೆಳೆ ಹಾನಿ: ತರಕಾರಿ ಬೆಲೆ ಏರಿಕೆ, ಗ್ರಾಹಕರಿಗೆ ಸಂಕಷ್ಟ

ಫೆಂಗಲ್ ಚಂಡಮಾರುತದಿಂದಾಗಿ ರಾಜ್ಯಾದ್ಯಂತ ಭಾರಿ ಮಳೆಯಾಗಿದ್ದು, ಕಟಾವಿಗೆ ಬಂದ ತರಕಾರಿಗಳು ಹಾನಿಗೀಡಾಗಿವೆ. ಇದರಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ತರಕಾರಿ ಬೆಲೆಗಳು ಗಗನಕ್ಕೇರಿವೆ. ಬೆಳ್ಳುಳ್ಳಿ, ಈರುಳ್ಳಿ, ನುಗ್ಗೆಕಾಯಿ ಮುಂತಾದ ತರಕಾರಿಗಳ ಬೆಲೆಗಳು ತೀವ್ರವಾಗಿ ಏರಿಕೆಯಾಗಿವೆ. ಅಕಾಲಿಕ ಮಳೆಯಿಂದಾಗಿ ಬೆಳೆಗಳು ಹಾನಿಗೊಳಗಾಗಿರುವುದು ಬೆಲೆ ಏರಿಕೆಗೆ ಕಾರಣವಾಗಿದೆ.

ಅಕಾಲಿಕ ಮಳೆಯಿಂದ ಬೆಳೆ ಹಾನಿ: ತರಕಾರಿ ಬೆಲೆ ಏರಿಕೆ, ಗ್ರಾಹಕರಿಗೆ ಸಂಕಷ್ಟ
ತರಕಾರಿ
Kiran Surya
| Edited By: |

Updated on:Dec 08, 2024 | 9:35 AM

Share

ಬೆಂಗಳೂರು, ಡಿಸೆಂಬರ್​​ 08: ಫೆಂಗಲ್ ಚಂಡಮಾರುತದಿಂದ (Fengal Cyclone) ರಾಜ್ಯಾದ್ಯಂತ ಮಳೆಯಾಗಿದೆ. ಇದರಿಂದ ಕಟಾವಿಗೆ ಬಂದ ತರಕಾರಿ ಮಣ್ಣು ಪಾಲಾಗಿದೆ. ಹೀಗಾಗಿ, ತರಕಾರಿ (Vegetable) ಬೆಲೆ ಗಗನಕ್ಕೇರಿದೆ. ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಅಕಾಲಿಕ ಮಳೆಯಿಂದ ಬೆಳೆಗಳು ನೆಲಕಚ್ಚಿವೆ. ಇದರಿಂದ, ಅಗತ್ಯಕ್ಕೆ ತಕ್ಕಷ್ಟು ತರಕಾರಿ ಪೂರೈಕೆಯಾಗದ ಹಿನ್ನೆಲೆಯಲ್ಲಿ ಬೆಲೆ ಏರಿಕೆಯಾಗಿದೆ. ಬೆಳ್ಳುಳ್ಳಿ ಕೆಜಿಗೆ 600 ರೂಪಾಯಿ ಆಗಿದ್ದರೇ, ನುಗ್ಗೆಕಾಯಿ 500 ರೂ. ಗಡಿ ತಲುಪಿದೆ. ಒಂದು ನುಗ್ಗೆಕಾಯಿ 50 ರಿಂದ 60 ರೂಪಾಯಿಗೆ ಮಾರಾಟವಾಗುತ್ತಿದೆ.

ಬೆಂಗಳೂರಿನಲ್ಲಿ ತರಕಾರಿ ಬೆಲೆ

ಟೊಮೇಟೊ ಕೆಜಿಗೆ: 60-70 ರೂ., ಬೆಳ್ಳುಳ್ಳಿ: 550-600 ರೂ., ಈರುಳ್ಳಿ: 70-80 ರೂ., ನುಗ್ಗೆಕಾಯಿ: 500ರೂ., ಬಟಾಣಿ: 180-200 ರೂ., ಮೆಣಸಿನಕಾಯಿ: 40-80 ರೂ., ಆಲೂಗಡ್ಡೆ: 50-55 ರೂ., ಬೀನ್ಸ್: 60 ರೂ., ಗಜ್ಜರಿ: 60-80ರೂ., ದೊಡ್ಡ ಮೆಣಸಿನಕಾಯಿ ಹಸಿರು: 50 ರೂ., ದೊಡ್ಡ ಮೆಣಸಿನಕಾಯಿ ಹಳದಿ, ಕೆಂಪು: 150-180 ರೂ., ಬೀಟ್ರೂಟ್: 60 ರೂ., ರಿಟೇಲ್​ನಲ್ಲಿ ಬೆಳ್ಳುಳ್ಳಿ ಕೆಜಿಗೆ: 500-550 ರೂ., ಎಪಿಎಂಸಿ ಮಾರುಕಟ್ಟೆಯಲ್ಲಿ: 400-450 ರೂ. ಮಾರಾಟವಾಗುತ್ತಿದೆ.

ಇದನ್ನೂ ಓದಿ: ಮತ್ತೆ ಗಗನಕ್ಕೇರಿದ ಈರುಳ್ಳಿ, ಬೆಳ್ಳುಳ್ಳಿ ಬೆಲೆ: ದರ ಏರಿಕೆ ಕಂಡು ಗೃಹಿಣಿಯರು ಕಂಗಾಲು

ಹಾಪ್ ಕಾಮ್ಸ್​​ನಲ್ಲಿ ಇಂದಿನ ದರ

ಬೆಳ್ಳುಳ್ಳಿ ಕೆಜಿ: 530 ರೂ., ನುಗ್ಗೆಕಾಯಿ: 520 ರೂ., ಬಟಾಣಿ: 130-240 ರೂ., ಗಜ್ಜರಿ: 110 ರೂ., ನಿಂಬೆಹಣ್ಣು: 100 ರೂ., ಈರುಳ್ಳಿ: 94 ರೂ., ತೊಂಡೆಕಾಯಿ: 90 ರೂ., ಟೊಮೇಟೊ: 90 ರೂ., ಶುಂಠಿ: 80 ರೂ., ಬೀನ್ಸ್​: 75 ರೂ., ಬೆಂಡೆಕಾಯಿ: 75 ರೂ., ಬೀಟ್ರೂಟ್: 70 ರೂ., ದೊಡ್ಡ ಮೆಣಸಿನಕಾಯಿ: 62 ರೂ., ಸೋರೆಕಾಯಿ: 62 ರೂ., ಆಲೂಗಡ್ಡೆ: 60 ರೂ., ಹಸಿ ಮೆಣಸಿನಕಾಯಿ: 58 ರೂ., ಪಡವಲಕಾಯಿ: 50 ರೂ., ತೆಂಗಿನಕಾಯಿ (ದಪ್ಪ): 50 ರೂ., ತೆಂಗಿನಕಾಯಿ (ಮಧ್ಯಮ) 43 ರೂ., ಬಿಳಿ ಬದನೆ: 46 ರೂ., ಹೀರೇಕಾಯಿ: 44 ರೂ., ಎಲೆಕೋಸು: 43 ರೂ., ಗುಂಡು ಬದನೆ: 42 ರೂ., ಹೂಕೋಸು: 42 ರೂ., ಹಾಗಲಕಾಯಿ: 40 ರೂ., ಸೌತೆಕಾಯಿ: 36 ರೂ., ಸೀಮೆಬದನೆಕಾಯಿ: 29 ರೂ., ಬೂದುಕುಂಬಳಕಾಯಿ: 25 ರೂ., ಸಿಹಿ ಕುಂಬಳಕಾಯಿ: 25 ರೂ ಗೆ ಮಾರಾಟವಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:33 am, Sun, 8 December 24

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ