Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅಡುಗೆ ಅನಿಲ ಸಿಲಿಂಡರ್ ಸ್ಫೋಟ, ಐವರಿಗೆ ಗಾಯ

ಬೆಂಗಳೂರಿನಲ್ಲಿ ಅಗ್ನಿ ಅವಘಡಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಇತ್ತೀಚಿಗೆ ಮಕ್ಕಳ ಆಟದ ಸಾಮಾನು, ಎಲೆಕ್ಟ್ರಾನಿಕ್ಸ್ ವಸ್ತು ಮಾರಾಟದ ಮಳಿಗೆಯ ಮೂರನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಇದಾದ ಬೆನ್ನಲ್ಲೇ ಇದೀಗ ರಾಜಧಾನಿಯ ವೀವರ್ಸ್ ಕಾಲೋನಿ ಸಮೀಪದ ಮಾರುತಿ ಬಡಾವಣೆಯಲ್ಲಿ ಎಲ್​ಪಿಜಿ ಸಿಲಿಂಡರ್​​​ ಸ್ಫೋಟಗೊಂಡಿದೆ.

ಬೆಂಗಳೂರು: ಅಡುಗೆ ಅನಿಲ ಸಿಲಿಂಡರ್ ಸ್ಫೋಟ, ಐವರಿಗೆ ಗಾಯ
ಸಿಲಿಂಡರ್​ ಸ್ಫೋಟ
Follow us
ರಾಮು, ಆನೇಕಲ್​
| Updated By: ವಿವೇಕ ಬಿರಾದಾರ

Updated on: Nov 22, 2023 | 11:21 AM

ಬೆಂಗಳೂರು ನ.22: ಎಲ್​ಪಿಜಿ ಸಿಲಿಂಡರ್ (Cylinder) ಸ್ಫೋಟಗೊಂಡು ಐವರು ಗಾಯಗೊಂಡಿರವ ಘಟನೆ ನಗರದ ವೀವರ್ಸ್ ಕಾಲೋನಿ ಸಮೀಪದ ಮಾರುತಿ ಬಡಾವಣೆಯಲ್ಲಿ ನಡೆದಿದೆ. ಉತ್ತರ ಪ್ರದೇಶದ ಬನಾರಸ್ ಮೂಲದ ಜಮಾಲ್(32) ನಾಜಿಯಾ(22) ಇರ್ಫಾನ್ (21)ಗುಲಾಬ್(18) ಶಹಜಾದ್(9) ಗಾಯಗೊಂಡವರು. ಮಾರ್ಟಿನ್ ಎಂಬುವವರಿಗೆ ಸೇರಿದ ಮನೆಯಲ್ಲಿ ಕುಟುಂಬ ವಾಸವಾಗಿತ್ತು. ಆಡುಗೆ ಅನಿಲ ಸೋರಿಕೆಯಾಗಿರುವುದು ತಿಳಿಯದೆ ಇಂದು (ನ.22) ಮುಂಜಾನೆ 5:30 ರ ಸುಮಾರಿಗೆ ಲೈಟ್​ನ ಸ್ವಿಚ್ ಆನ್ ಮಾಡಿದಾಗ ಸಿಲಿಂಡರ್​ ಸ್ಫೋಟಗೊಂಡಿದೆ. (Cylinder explosion) ಸ್ಪೋಟದ ತೀವ್ರತೆಗೆ ಮನೆಯ ಕಿಡಕಿ ಬಾಗಿಲುಗಳು ಛಿದ್ರಗೊಂಡಿವೆ. ಮನೆಯ ಮುಂಭಾಗ ನಿಲ್ಲಿಸಿದ್ದ ಕಾರಿನ ಗಾಜುಗಳು ಪುಡಿ ಪುಡಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಕೋಣನಕುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಕಟ್ಟಡದ ಮೂರನೇ ಮಹಡಿಯಲ್ಲಿ ಅಗ್ನಿ ಅವಘಡ

ಮೂರು ದಿನಗಳ ಹಿಂದೆ (ನ.19) ರಂದು ಬೆಂಗಳೂರಿನ ಕುಂಬಾರಪೇಟೆಯಲ್ಲಿರುವ ಮಕ್ಕಳ ಆಟದ ಸಾಮಾನು, ಎಲೆಕ್ಟ್ರಾನಿಕ್ಸ್ ವಸ್ತು ಮಾರಾಟದ ಮಳಿಗೆಯ ಮೂರನೇ ಮಹಡಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿತ್ತು. ಅಗ್ನಿ ಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಲು ತಡವಾಗಿದ್ದರಿಂದ ಬೆಂಕಿಯು ಆರನೇ ಮಹಡಿಗೂ ಹಬ್ಬಿತ್ತು.

ಇದನ್ನೂ ಓದಿ: ಬೆಂಗಳೂರಿನ ಆನೇಕಲ್​ ಬಳಿ ಮತ್ತೊಂದು ಅಗ್ನಿ ಅವಘಡ: ಮನೆಯ ಸಿಲಿಂಡರ್​ ಸ್ಫೋಟ

ರವಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಪ್ಲಾಸ್ಟಿಕ್ ಗೋದಾಮಿನ 3, 4ನೇ ಮಹಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿತ್ತು. ಕೂಡಲೇ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದರೂ, ಸಿಬ್ಬಂದಿ ಒಂದು ಗಂಟೆ ತಡವಾಗಿ ಬಂದ ಹಿನ್ನೆಲೆಯಲ್ಲಿ ಬೆಂಕಿ ಮತ್ತಷ್ಟು ಹೆಚ್ಚಾಗಿತ್ತು.

ತಡವಾಗಿ ಐದು ವಾಹನಗಳಲ್ಲಿ ಬಂದ 30 ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ, ಬೆಂಕಿ ಧಗಧಗಿಸಿದ ಪರಿಣಾಮ ಮೂರನೇ ಮಹಡಿಯಿಂದ ಆರನೇ ಮಹಡಿಗೆ ಬೆಂಕಿ ಹಬ್ಬಿತ್ತು. ಘಟನೆಯಲ್ಲಿ ಯಾವುದೇ ಪ್ರಾಣಾಪಾಯದ ಸಂಭವಿಸಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ