AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ವಾನದ ಹಾದಿ ಹಿಡಿದ ಸಿಎಂ ಸಿದ್ಧರಾಮಯ್ಯ ಮನೆ ಬಳಿ ಇರುವ ಮಕ್ಕಳ ಪಾರ್ಕ್

ಗಾಂಧಿ ಭವನ್ ಎದುರಿಗೆ ಇರುವ ಶಿವಾನಂದ್ ಪಾರ್ಕ್​​ ಇದೀಗ ಸಂಪೂರ್ಣ ಹಾಳಾಗಿದ್ದು, ಚರಂಡಿ ನೀರಿನಿಂದ ಗಬ್ಬುನಾರುತ್ತಿದೆ. ಸ್ಥಳೀಯ ಎಂಎಲ್​ಎ ರಿಸ್ವಾನ್ ಹರ್ಷದ್ ಅವರಿಗೆ ದೂರು ನೀಡಿದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಹೀಗಾಗಿ ಪಾರ್ಕ್ ಸರಿಮಾಡಿ ಕೊಡಿ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Poornima Agali Nagaraj
| Edited By: |

Updated on: Jul 30, 2023 | 4:27 PM

Share

ಬೆಂಗಳೂರು, ಜುಲೈ 30: 40 ವರ್ಷದ ಮಕ್ಕಳ ಹಳೆಯ ಪಾರ್ಕ್ (park)​​ ಒಂದು ಸದ್ಯ ಚರಂಡಿ ನೀರಿನಿಂದ ಗಬ್ಬುನಾರುತ್ತಿದೆ. ಗಾಂಧಿ ಭವನ್ ಎದುರಿಗೆ ಇರುವ ಶಿವಾನಂದ್ ಪಾರ್ಕ್​​ ಇದೀಗ ಸಂಪೂರ್ಣ ಹಾಳಾಗಿದ್ದು, ಮಕ್ಕಳಿಗೆ ಆಟವಾಡಲು ಪಾರ್ಕ್ ಇಲ್ಲದೇ ಬೇಸತ್ತಿದ್ದಾರೆ. ಈ ಕುರಿತಾಗಿ ಸ್ಥಳೀಯ ಎಂಎಲ್​ಎ ರಿಸ್ವಾನ್ ಹರ್ಷದ್ ಅವರಿಗೆ ದೂರು ನೀಡಿದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಹೀಗಾಗಿ ಪಾರ್ಕ್ ಸರಿಮಾಡಿ ಕೊಡಿ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅದ್ವಾನ ಹಿಡಿದ ಮಕ್ಕಳ ಪಾರ್ಕ್

ಶಿವಾನಂದ್ ಪಾರ್ಕ್​​ನಲ್ಲಿ ಸಾರಾಯಿ ಬಾಟೆಲ್, ಬಿಯರ್ ಬಾಟೆಲ್, ಕಸ ಎಲ್ಲವನ್ನ ಎಸೆದಿದ್ದು, ಗಬ್ಬುನಾರುತ್ತಿದೆ. ಅಕ್ಕಪಕ್ಕದ ಸ್ಥಳೀಯರಿಗೆ ಇನ್ನಿಲ್ಲದ ಸಮಸ್ಯೆ ಕೂಡ ಉಂಟಾಗಿದೆ. ಇಷ್ಟೇಲ್ಲಾ ಅದ್ವಾನ ಹಿಡಿದಿರುವ ಮಕ್ಕಳ ಪಾರ್ಕ್​ಗೆ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ.

ಇದನ್ನೂ ಓದಿ: ದಾವಣಗೆರೆ: ಮದ್ಯವರ್ಜನ ಶಿಬಿರದಲ್ಲಿ ಜಗಳೂರು ಶಾಸಕ ಬಿ.ದೇವೇಂದ್ರಪ್ಪ ಭಜನೆ

ಪಾರ್ಕ್​ನಲ್ಲಿ ಮಕ್ಕಳಿಗೆ ಆಟವಾಡಲು ಜೋಕಾಲಿ, ಜಾರು ಬಂಡಿ ಎಲ್ಲವೂ ಇತ್ತು. ಆದರೆ ಪಾರ್ಕ್ ಹೈಟೆಕ್ ಮಾಡುತ್ತೇವೆ ಅಂತ ಹೇಳಿ ಅಲ್ಲಿದ್ದ ಎಲ್ಲಾ ಆಟದ ವಸ್ತುಗಳನ್ನು ತೆಗೆದುಕೊಂಡು ಹೋಗಿ ಮೂರು ವರ್ಷವಾದರೂ ಇಲ್ಲಿಯವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬೈಕ್ ವೀಲ್ಹಿಂಗ್, ಕಾರಿ​ಗೆ ಡಿಕ್ಕಿಯಾಗಿ ಆಸ್ಪತ್ರೆ ಸೇರಿದ ಸವಾರರು

 ಪಾರ್ಕ್ ಸರಿಮಾಡುವಂತೆ ಸ್ಥಳೀಯರ ಆಕ್ರೋಶ

ಇನ್ನೂ ಇದೇ ಪಾರ್ಕ್​​ನ 300 ಮೀಟರ್ಸ್ ಅಂತರದಲ್ಲೇ ಸಿಎಂ ಸಿದ್ಧರಾಮಯ್ಯ ಮನೆ ಇದೆ. ಪ್ರತಿದಿನ ಇದೇ ರಸ್ತೆಯಲ್ಲಿ ಎಂಎಲ್​ಎ ಹಾಗೂ ಎಂಪಿಗಳು ಓಡಾಡುತ್ತಾರೆ. ಈ ಪಾರ್ಕ್ ಎದುರಿಗೆ ಮಧು ಬಂಗಾರಪ್ಪ ಅವರ ಆಫೀಸ್ ಕೂಡ ಇದೆ. ಪಾರ್ಕ್​ನ ಅವ್ಯವಸ್ಥೆ ಕಂಡರೂ ಕಾಣದಂತಿರುವುದು ಏಕೆ ಎಂದು ಸ್ಥಳೀಯರು ಪ್ರಶ್ನಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ