AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ ಕೇಸ್​; ಕಾಲು ಮುರಿದರೂ ಪಿಎಸ್​ಐ ಗೆ ಡ್ಯೂಟಿಗೆ ಬರಲು ಹಿರಿಯ ಅಧಿಕಾರಿಗಳಿಂದ ಸೂಚನೆ

ನಟ ದರ್ಶನ್ ಟೀಂನಿಂದ ಕೊಲೆ ಕೇಸ್​ ಹಿನ್ನಲೆ ಕಾಲು ಮುರಿದರೂ ಪಿಎಸ್​ಐ(PSI)ಗೆ ಕೆಲಸಕ್ಕೆ ಬರುವುದಕ್ಕೆ ಹಿರಿಯ ಅಧಿಕಾರಿಗಳು ಸೂಚನೆ ನೀಡಿರುವ ಘಟನೆ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ನಡೆದಿದೆ. ಸಧ್ಯ ವಾಕಿಂಗ್​ ಸ್ಟಿಕ್ ಹಿಡಿದುಕೊಂಡೇ ಪಿಎಸ್ಐ ಕುಬೇರ ಎಂಬುವವರು ಡ್ಯೂಟಿಗೆ ಬಂದಿದ್ದಾರೆ.

ದರ್ಶನ್​ ಕೇಸ್​; ಕಾಲು ಮುರಿದರೂ ಪಿಎಸ್​ಐ ಗೆ ಡ್ಯೂಟಿಗೆ ಬರಲು ಹಿರಿಯ ಅಧಿಕಾರಿಗಳಿಂದ ಸೂಚನೆ
ಕಾಲು ಮುರಿದರೂ ಪಿಎಸ್​ಐ ಗೆ ಡ್ಯೂಟಿಗೆ ಬರಲು ಹಿರಿಯ ಅಧಿಕಾರಿಗಳಿಂದ ಸೂಚನೆ
ಕಿರಣ್ ಹನುಮಂತ್​ ಮಾದಾರ್
|

Updated on:Jun 13, 2024 | 3:21 PM

Share

ಬೆಂಗಳೂರು, ಜೂ.13: ಕಾಲು ಮುರಿದರೂ ಪಿಎಸ್​ಐ(PSI)ಗೆ ಕೆಲಸಕ್ಕೆ ಬರುವುದಕ್ಕೆ ಹಿರಿಯ ಅಧಿಕಾರಿಗಳು ಸೂಚನೆ ನೀಡಿರುವ ಘಟನೆ ನಡೆದಿದೆ. ಅನ್ನಪೂರ್ಣೇಶ್ವರಿ ನಗರ ಠಾಣೆ(Annapoorneshwari Nagar Police Station) ಪಿಎಸ್​ಐ ಆಗಿರುವ ಕುಬೇರ ಅವರು ಕರ್ತವ್ಯದ ವೇಳೆ ಬೈಕ್ ಅಪಘಾತದಲ್ಲಿ ಕಾಲು ಮುರಿದುಕೊಂಡಿದ್ದರು. ಕಳೆದ ಆರು ತಿಂಗಳಿಂದ ಬೆಡ್ ರೆಸ್ಟ್​ನಲ್ಲಿದ್ದರೂ ಇಲಾಖೆ ಸಂಬಳ ಹಾಕದೆ, ಕೆಲಸಕ್ಕೆ ಬಂದರೆ ಮಾತ್ರ ಸಂಬಳ ಕೊಡೋದಾಗಿ ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ.

ದರ್ಶನ್ ಟೀಂನಿಂದ ಕೊಲೆ ಕೇಸ್​ ಹಿನ್ನಲೆ ಡ್ಯೂಟಿಗೆ ಕರೆಸಿರೋ ಹಿರಿಯ ಅಧಿಕಾರಿಗಳು

ಆರು ತಿಂಗಳಿಂದ ಸಂಬಳ ಇಲ್ಲದೆ ಇದ್ದರೂ ತನ್ನ ಕುಟುಂಬ ಮತ್ತು ಚಿಕಿತ್ಸೆ ವೆಚ್ಚವನ್ನು ತಾವೇ ನೋಡಿಕೊಂಡಿದ್ದಾರೆ. ಈ ಮಧ್ಯೆ ನಟ ದರ್ಶನ್ ಟೀಂನಿಂದ ಕೊಲೆ ಕೇಸ್​ ಹಿನ್ನಲೆ ಕೆಲಸಕ್ಕೆ ಹಾಜರಾಗಲು ಹಿರಿಯ ಅಧಿಕಾರಿಗಳು ಕರೆಸಿದ್ದಾರೆ. ಸಧ್ಯ ವಾಕಿಂಗ್​ ಸ್ಟಿಕ್ ಹಿಡಿದುಕೊಂಡೇ ಪಿಎಸ್ಐ ಕುಬೇರ ಡ್ಯೂಟಿಗೆ ಬಂದಿದ್ದಾರೆ. ಈ ಮೂಲಕ ಹಿರಿಯ ಪೊಲೀಸ್​ ಅಧಿಕಾರಿಗಳು ಮಾನವೀಯತೆ ಮರೆತರಾ? ಎಂಬ ಪ್ರಶ್ನೆ ಮೂಡಿದೆ.

ಇದನ್ನೂ ಓದಿ:ದರ್ಶನ್‌ ನೋಡಲು ಕಿಕ್ಕಿರಿದ ಫ್ಯಾನ್ಸ್; ಜೀಪ್‌ ಹಿಂದೆ ಪೊಲೀಸರ ಓಟ

ನಟ ದರ್ಶನ್ ಮತ್ತು ಗ್ಯಾಂಗ್​ನಿಂದ ಅಭಿಮಾನಿ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ತೀವ್ರ ಸ್ವರೂಪ ಪಡೆದಿದೆ. ಈ ಹಿನ್ನಲೆ ಆರೋಪಿ ದರ್ಶನ್​ ಹಾಗೂ ಪವಿತ್ರಾ ಸೇರಿ ಎಲ್ಲಾ ಆರೋಪಿಗಳನ್ನು ಕರೆದುಕೊಂಡು ಹೋಗಿ ಕೊಲೆ ನಡೆದ ಪಟ್ಟಣಗೆರೆ ಶೆಡ್‌ನಲ್ಲಿ ನಿನ್ನೆ ಸ್ಥಳ ಮಹಜರು ನಡೆಸಿದ್ದರು. ಬಳಿಕ ಅನ್ನಪೂರ್ಣೇಶ್ವರಿನಗರ ಠಾಣೆಗೆ ವಾಪಸ್‌ ಕರೆತಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:14 pm, Thu, 13 June 24

Follow Us
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ