AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ ಕೇಸ್​; ಕಾಲು ಮುರಿದರೂ ಪಿಎಸ್​ಐ ಗೆ ಡ್ಯೂಟಿಗೆ ಬರಲು ಹಿರಿಯ ಅಧಿಕಾರಿಗಳಿಂದ ಸೂಚನೆ

ನಟ ದರ್ಶನ್ ಟೀಂನಿಂದ ಕೊಲೆ ಕೇಸ್​ ಹಿನ್ನಲೆ ಕಾಲು ಮುರಿದರೂ ಪಿಎಸ್​ಐ(PSI)ಗೆ ಕೆಲಸಕ್ಕೆ ಬರುವುದಕ್ಕೆ ಹಿರಿಯ ಅಧಿಕಾರಿಗಳು ಸೂಚನೆ ನೀಡಿರುವ ಘಟನೆ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ನಡೆದಿದೆ. ಸಧ್ಯ ವಾಕಿಂಗ್​ ಸ್ಟಿಕ್ ಹಿಡಿದುಕೊಂಡೇ ಪಿಎಸ್ಐ ಕುಬೇರ ಎಂಬುವವರು ಡ್ಯೂಟಿಗೆ ಬಂದಿದ್ದಾರೆ.

ದರ್ಶನ್​ ಕೇಸ್​; ಕಾಲು ಮುರಿದರೂ ಪಿಎಸ್​ಐ ಗೆ ಡ್ಯೂಟಿಗೆ ಬರಲು ಹಿರಿಯ ಅಧಿಕಾರಿಗಳಿಂದ ಸೂಚನೆ
ಕಾಲು ಮುರಿದರೂ ಪಿಎಸ್​ಐ ಗೆ ಡ್ಯೂಟಿಗೆ ಬರಲು ಹಿರಿಯ ಅಧಿಕಾರಿಗಳಿಂದ ಸೂಚನೆ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on:Jun 13, 2024 | 3:21 PM

Share

ಬೆಂಗಳೂರು, ಜೂ.13: ಕಾಲು ಮುರಿದರೂ ಪಿಎಸ್​ಐ(PSI)ಗೆ ಕೆಲಸಕ್ಕೆ ಬರುವುದಕ್ಕೆ ಹಿರಿಯ ಅಧಿಕಾರಿಗಳು ಸೂಚನೆ ನೀಡಿರುವ ಘಟನೆ ನಡೆದಿದೆ. ಅನ್ನಪೂರ್ಣೇಶ್ವರಿ ನಗರ ಠಾಣೆ(Annapoorneshwari Nagar Police Station) ಪಿಎಸ್​ಐ ಆಗಿರುವ ಕುಬೇರ ಅವರು ಕರ್ತವ್ಯದ ವೇಳೆ ಬೈಕ್ ಅಪಘಾತದಲ್ಲಿ ಕಾಲು ಮುರಿದುಕೊಂಡಿದ್ದರು. ಕಳೆದ ಆರು ತಿಂಗಳಿಂದ ಬೆಡ್ ರೆಸ್ಟ್​ನಲ್ಲಿದ್ದರೂ ಇಲಾಖೆ ಸಂಬಳ ಹಾಕದೆ, ಕೆಲಸಕ್ಕೆ ಬಂದರೆ ಮಾತ್ರ ಸಂಬಳ ಕೊಡೋದಾಗಿ ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ.

ದರ್ಶನ್ ಟೀಂನಿಂದ ಕೊಲೆ ಕೇಸ್​ ಹಿನ್ನಲೆ ಡ್ಯೂಟಿಗೆ ಕರೆಸಿರೋ ಹಿರಿಯ ಅಧಿಕಾರಿಗಳು

ಆರು ತಿಂಗಳಿಂದ ಸಂಬಳ ಇಲ್ಲದೆ ಇದ್ದರೂ ತನ್ನ ಕುಟುಂಬ ಮತ್ತು ಚಿಕಿತ್ಸೆ ವೆಚ್ಚವನ್ನು ತಾವೇ ನೋಡಿಕೊಂಡಿದ್ದಾರೆ. ಈ ಮಧ್ಯೆ ನಟ ದರ್ಶನ್ ಟೀಂನಿಂದ ಕೊಲೆ ಕೇಸ್​ ಹಿನ್ನಲೆ ಕೆಲಸಕ್ಕೆ ಹಾಜರಾಗಲು ಹಿರಿಯ ಅಧಿಕಾರಿಗಳು ಕರೆಸಿದ್ದಾರೆ. ಸಧ್ಯ ವಾಕಿಂಗ್​ ಸ್ಟಿಕ್ ಹಿಡಿದುಕೊಂಡೇ ಪಿಎಸ್ಐ ಕುಬೇರ ಡ್ಯೂಟಿಗೆ ಬಂದಿದ್ದಾರೆ. ಈ ಮೂಲಕ ಹಿರಿಯ ಪೊಲೀಸ್​ ಅಧಿಕಾರಿಗಳು ಮಾನವೀಯತೆ ಮರೆತರಾ? ಎಂಬ ಪ್ರಶ್ನೆ ಮೂಡಿದೆ.

ಇದನ್ನೂ ಓದಿ:ದರ್ಶನ್‌ ನೋಡಲು ಕಿಕ್ಕಿರಿದ ಫ್ಯಾನ್ಸ್; ಜೀಪ್‌ ಹಿಂದೆ ಪೊಲೀಸರ ಓಟ

ನಟ ದರ್ಶನ್ ಮತ್ತು ಗ್ಯಾಂಗ್​ನಿಂದ ಅಭಿಮಾನಿ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ತೀವ್ರ ಸ್ವರೂಪ ಪಡೆದಿದೆ. ಈ ಹಿನ್ನಲೆ ಆರೋಪಿ ದರ್ಶನ್​ ಹಾಗೂ ಪವಿತ್ರಾ ಸೇರಿ ಎಲ್ಲಾ ಆರೋಪಿಗಳನ್ನು ಕರೆದುಕೊಂಡು ಹೋಗಿ ಕೊಲೆ ನಡೆದ ಪಟ್ಟಣಗೆರೆ ಶೆಡ್‌ನಲ್ಲಿ ನಿನ್ನೆ ಸ್ಥಳ ಮಹಜರು ನಡೆಸಿದ್ದರು. ಬಳಿಕ ಅನ್ನಪೂರ್ಣೇಶ್ವರಿನಗರ ಠಾಣೆಗೆ ವಾಪಸ್‌ ಕರೆತಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:14 pm, Thu, 13 June 24

Follow Us
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ