AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ ಕೇಸ್​; ಕಾಲು ಮುರಿದರೂ ಪಿಎಸ್​ಐ ಗೆ ಡ್ಯೂಟಿಗೆ ಬರಲು ಹಿರಿಯ ಅಧಿಕಾರಿಗಳಿಂದ ಸೂಚನೆ

ನಟ ದರ್ಶನ್ ಟೀಂನಿಂದ ಕೊಲೆ ಕೇಸ್​ ಹಿನ್ನಲೆ ಕಾಲು ಮುರಿದರೂ ಪಿಎಸ್​ಐ(PSI)ಗೆ ಕೆಲಸಕ್ಕೆ ಬರುವುದಕ್ಕೆ ಹಿರಿಯ ಅಧಿಕಾರಿಗಳು ಸೂಚನೆ ನೀಡಿರುವ ಘಟನೆ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ನಡೆದಿದೆ. ಸಧ್ಯ ವಾಕಿಂಗ್​ ಸ್ಟಿಕ್ ಹಿಡಿದುಕೊಂಡೇ ಪಿಎಸ್ಐ ಕುಬೇರ ಎಂಬುವವರು ಡ್ಯೂಟಿಗೆ ಬಂದಿದ್ದಾರೆ.

ದರ್ಶನ್​ ಕೇಸ್​; ಕಾಲು ಮುರಿದರೂ ಪಿಎಸ್​ಐ ಗೆ ಡ್ಯೂಟಿಗೆ ಬರಲು ಹಿರಿಯ ಅಧಿಕಾರಿಗಳಿಂದ ಸೂಚನೆ
ಕಾಲು ಮುರಿದರೂ ಪಿಎಸ್​ಐ ಗೆ ಡ್ಯೂಟಿಗೆ ಬರಲು ಹಿರಿಯ ಅಧಿಕಾರಿಗಳಿಂದ ಸೂಚನೆ
ಕಿರಣ್ ಹನುಮಂತ್​ ಮಾದಾರ್
|

Updated on:Jun 13, 2024 | 3:21 PM

Share

ಬೆಂಗಳೂರು, ಜೂ.13: ಕಾಲು ಮುರಿದರೂ ಪಿಎಸ್​ಐ(PSI)ಗೆ ಕೆಲಸಕ್ಕೆ ಬರುವುದಕ್ಕೆ ಹಿರಿಯ ಅಧಿಕಾರಿಗಳು ಸೂಚನೆ ನೀಡಿರುವ ಘಟನೆ ನಡೆದಿದೆ. ಅನ್ನಪೂರ್ಣೇಶ್ವರಿ ನಗರ ಠಾಣೆ(Annapoorneshwari Nagar Police Station) ಪಿಎಸ್​ಐ ಆಗಿರುವ ಕುಬೇರ ಅವರು ಕರ್ತವ್ಯದ ವೇಳೆ ಬೈಕ್ ಅಪಘಾತದಲ್ಲಿ ಕಾಲು ಮುರಿದುಕೊಂಡಿದ್ದರು. ಕಳೆದ ಆರು ತಿಂಗಳಿಂದ ಬೆಡ್ ರೆಸ್ಟ್​ನಲ್ಲಿದ್ದರೂ ಇಲಾಖೆ ಸಂಬಳ ಹಾಕದೆ, ಕೆಲಸಕ್ಕೆ ಬಂದರೆ ಮಾತ್ರ ಸಂಬಳ ಕೊಡೋದಾಗಿ ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ.

ದರ್ಶನ್ ಟೀಂನಿಂದ ಕೊಲೆ ಕೇಸ್​ ಹಿನ್ನಲೆ ಡ್ಯೂಟಿಗೆ ಕರೆಸಿರೋ ಹಿರಿಯ ಅಧಿಕಾರಿಗಳು

ಆರು ತಿಂಗಳಿಂದ ಸಂಬಳ ಇಲ್ಲದೆ ಇದ್ದರೂ ತನ್ನ ಕುಟುಂಬ ಮತ್ತು ಚಿಕಿತ್ಸೆ ವೆಚ್ಚವನ್ನು ತಾವೇ ನೋಡಿಕೊಂಡಿದ್ದಾರೆ. ಈ ಮಧ್ಯೆ ನಟ ದರ್ಶನ್ ಟೀಂನಿಂದ ಕೊಲೆ ಕೇಸ್​ ಹಿನ್ನಲೆ ಕೆಲಸಕ್ಕೆ ಹಾಜರಾಗಲು ಹಿರಿಯ ಅಧಿಕಾರಿಗಳು ಕರೆಸಿದ್ದಾರೆ. ಸಧ್ಯ ವಾಕಿಂಗ್​ ಸ್ಟಿಕ್ ಹಿಡಿದುಕೊಂಡೇ ಪಿಎಸ್ಐ ಕುಬೇರ ಡ್ಯೂಟಿಗೆ ಬಂದಿದ್ದಾರೆ. ಈ ಮೂಲಕ ಹಿರಿಯ ಪೊಲೀಸ್​ ಅಧಿಕಾರಿಗಳು ಮಾನವೀಯತೆ ಮರೆತರಾ? ಎಂಬ ಪ್ರಶ್ನೆ ಮೂಡಿದೆ.

ಇದನ್ನೂ ಓದಿ:ದರ್ಶನ್‌ ನೋಡಲು ಕಿಕ್ಕಿರಿದ ಫ್ಯಾನ್ಸ್; ಜೀಪ್‌ ಹಿಂದೆ ಪೊಲೀಸರ ಓಟ

ನಟ ದರ್ಶನ್ ಮತ್ತು ಗ್ಯಾಂಗ್​ನಿಂದ ಅಭಿಮಾನಿ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ತೀವ್ರ ಸ್ವರೂಪ ಪಡೆದಿದೆ. ಈ ಹಿನ್ನಲೆ ಆರೋಪಿ ದರ್ಶನ್​ ಹಾಗೂ ಪವಿತ್ರಾ ಸೇರಿ ಎಲ್ಲಾ ಆರೋಪಿಗಳನ್ನು ಕರೆದುಕೊಂಡು ಹೋಗಿ ಕೊಲೆ ನಡೆದ ಪಟ್ಟಣಗೆರೆ ಶೆಡ್‌ನಲ್ಲಿ ನಿನ್ನೆ ಸ್ಥಳ ಮಹಜರು ನಡೆಸಿದ್ದರು. ಬಳಿಕ ಅನ್ನಪೂರ್ಣೇಶ್ವರಿನಗರ ಠಾಣೆಗೆ ವಾಪಸ್‌ ಕರೆತಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:14 pm, Thu, 13 June 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!