AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ಕಲಾವಿದರ ಚೆಕ್‌ ಬೌನ್ಸ್‌: ಕಾಂಗ್ರೆಸ್​ಗೆ ಇನ್ನೂ ಬುದ್ಧಿ ಬಂದಿಲ್ಲ ಎಂದ ಬಿಜೆಪಿ​

ದಸರಾ ಕಲಾವಿದರಿಂದಲೇ ಕಮಿಷನ್‌ ಕೇಳಿ ರಾಜ್ಯದ ಜನತೆಯಿಂದ ಈಗಾಗಲೇ ಛೀಮಾರಿ ಹಾಕಿಸಿಕೊಂಡಿರುವ ಎಟಿಎಂ ಸರ್ಕಾರಕ್ಕೆ ಇನ್ನೂ ಬುದ್ಧಿ ಬಂದಿಲ್ಲ. ನಾಡಹಬ್ಬ ದಸರಾದಲ್ಲಿ ನೀಡಿದ ಬಹುಮಾನದ ಚೆಕ್‌ಗಳು ಬೌನ್ಸ್‌ ಆಗಲು ಆರಂಭಿಸಿವೆ ಎಂದರೆ ನಾಡಿಗೆ ಇದಕ್ಕಿಂತ ದೊಡ್ಡ ಅಪಮಾನ ಇನ್ನೇನಿದೆ ಎಂದು ಕಾಂಗ್ರೆಸ್​ ವಿರುದ್ಧ ಬಿಜೆಪಿ ಕಿಡಿಕಾರಿದೆ.

ದಸರಾ ಕಲಾವಿದರ ಚೆಕ್‌ ಬೌನ್ಸ್‌: ಕಾಂಗ್ರೆಸ್​ಗೆ ಇನ್ನೂ ಬುದ್ಧಿ ಬಂದಿಲ್ಲ ಎಂದ ಬಿಜೆಪಿ​
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Nov 03, 2023 | 3:39 PM

Share

ಬೆಂಗಳೂರು, ನವೆಂಬರ್​​​​ 03: ಲಲಿತಕಲೆ ಹಾಗೂ ಕರಕುಶಲ ಉಪಸಮಿತಿ ಮುಖ್ಯಸ್ಥರ ಎಡವಟ್ಟಿನಿಂದ  ದಸರಾ (Mysuru Dasara) ಕಲಾವಿದರಿಗೆ ನೀಡಿದ ಬಹುಮಾನದ ಚೆಕ್‌ಗಳು ಬೌನ್ಸ್‌ ಆಗಿವೆ. ಇದರಿಂದ ದಸರಾ ಕಲಾವಿದರು ಅಸಮಾಧಾನ ಕೂಡ ವ್ಯಕ್ತಪಡಿಸಿದ್ದರು. ಈ ವಿಚಾರವಾಗಿ ಟಿವಿ9 ಕನ್ನಡ ಡಿಜಿಟಲ್​ ವರದಿ ಕೂಡ ಬಿತ್ತರಿಸಿತ್ತು. ಇದನ್ನು ಮರುಟ್ವೀಟ್​ ಮಾಡುವ ಮೂಲಕ ಇದೀಗ ಕಾಂಗ್ರೆಸ್​​ ಸರ್ಕಾರ ವಿರುದ್ಧ ಬಿಜೆಪಿ ವಾಗ್ದಾಳಿ ಮಾಡಿದೆ.

ದಸರಾ ಕಲಾವಿದರಿಂದಲೇ ಕಮಿಷನ್‌ ಕೇಳಿ ರಾಜ್ಯದ ಜನತೆಯಿಂದ ಈಗಾಗಲೇ ಛೀಮಾರಿ ಹಾಕಿಸಿಕೊಂಡಿರುವ ಎಟಿಎಂ ಸರ್ಕಾರಕ್ಕೆ ಇನ್ನೂ ಬುದ್ಧಿ ಬಂದಿಲ್ಲ. ನಾಡಹಬ್ಬ ದಸರಾದಲ್ಲಿ ನೀಡಿದ ಬಹುಮಾನದ ಚೆಕ್‌ಗಳು ಬೌನ್ಸ್‌ ಆಗಲು ಆರಂಭಿಸಿವೆ ಎಂದರೆ ನಾಡಿಗೆ ಇದಕ್ಕಿಂತ ದೊಡ್ಡ ಅಪಮಾನ ಇನ್ನೇನಿದೆ ಎಂದು ಹರಿಹಾಯ್ದಿದೆ.

ಬಿಜೆಪಿ ಟ್ವೀಟ್​​

ರಾಜ್ಯ ಕಾಂಗ್ರೆಸ್​ ಸರ್ಕಾರದ ದುರಾಡಳಿತದ ಪರಿಣಾಮ ಬಹುಮಾನ ಪಡೆದವರ ಖಾತೆಯಿಂದಲೇ ಹಣ ಖೋತಾ ಆಗಿದೆ. ಜನರಿಂದಲೇ ದೋಚುವ ಸರ್ಕಾರವಿದು ಎಂಬುದು ನಾಡಹಬ್ಬದಲ್ಲೂ ಸಾಬೀತಾಗಿದೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಚಳ್ಳಕೆರೆ ಶಾಸಕ ರಘುಮೂರ್ತಿ ವಿರುದ್ಧ ಬಿಜೆಪಿ ಕಿಡಿ

ತಮ್ಮ ಅಹವಾಲು ನಿವೇದಿಸಿಕೊಳ್ಳಲು ಬಂದ ಸಾರ್ವಜನಿಕರನ್ನು ಎಫ್‌ಐಆರ್‌ ಹಾಕಿಸಿ ಜೈಲಿಗಟ್ಟುವ ದುರಹಂಕಾರವನ್ನು ಚಳ್ಳಕೆರೆ ಶಾಸಕ ರಘುಮೂರ್ತಿ ಮೆರೆದಿದ್ದಾರೆ. ಸುಳ್ಳು ದೂರು ದಾಖಲಿಸಿ ಕಾನೂನು ದುರ್ಬಳಕೆ ಮಾಡಿಕೊಳ್ಳುವ ನಿಮ್ಮ ಶಾಸಕರ ಮೇಲೆ ಕ್ರಮ ಯಾವಾಗ ಗೃಹ ಸಚಿವ ಡಾ. ಜಿ. ಪರಮೇಶ್ವರ್​ ಅವರೇ ಎಂದು ಪ್ರಶ್ನಿಸಿದೆ.

ಇದನ್ನೂ ಓದಿ: ಅಧಿಕಾರಿಗಳ ಎಡವಟ್ಟು: ದಸರಾ ಕಲಾವಿದರಿಗೆ ನೀಡಿದ ಬಹುಮಾನದ ಚೆಕ್ ವಾಪಸ್​​

ಸಿಎಂ ಸಿದ್ದರಾಮಯ್ಯ ಅವರೇ, ಕ್ಷೇತ್ರದ ಮತದಾರರನ್ನು ಈ ರೀತಿ ಕೀಳಾಗಿ ಕಾಣುವ ಶಾಸಕರನ್ನು ಮೊದಲು ನಿಮ್ಮ ಪಕ್ಷದಿಂದ ವಜಾ ಮಾಡಿ. ಇಂತಹ ಸರ್ವಾಧಿಕಾರಿ ಶಾಸಕರು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಕಿಡಿಕಾರಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ