AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ಹಬ್ಬಕ್ಕೆ ದುಬಾರಿಯಾದ ಹೂವು: ಕೆಜಿಗೆ 100 – 200 ರೂ. ವರೆಗೆ ಏರಿಕೆ

Flower Rate Increased in Bangalore: ಸೇವಂತಿಗೆ ಬಿಡಿ ಹೂವು 5 ರೂ.ನಿಂದ 10 ರೂ.ಗೆ ಮಾರಾಟವಾಗುತ್ತಿತ್ತು. ಆದರೆ ಮಂಗಳವಾರ 80 ರಿಂದ 100 ರೂ.ಗೆ ಮಾರಾಟವಾಗುತ್ತಿದೆ. ಬುಧವಾರದಿಂದ ಹೂವಿನ ದರ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ದಸರಾ ಹಬ್ಬಕ್ಕೆ ದುಬಾರಿಯಾದ ಹೂವು: ಕೆಜಿಗೆ 100 - 200 ರೂ. ವರೆಗೆ ಏರಿಕೆ
ಸಾಂದರ್ಭಿಕ ಚಿತ್ರ
Poornima Agali Nagaraj
| Edited By: |

Updated on: Oct 17, 2023 | 4:39 PM

Share

ಬೆಂಗಳೂರು, ಅಕ್ಟೋಬರ್ 17: ದಸರಾ ಹಬ್ಬ ಆರಂಭವಾಗುತ್ತಿದ್ದಂತೆಯೇ ಹೂವಿನ ದರದಲ್ಲಿ (Flower Rate) ಭಾರೀ ಏರಿಕೆ ಕಂಡುಬಂದಿದೆ. ಕಳೆದ ಕೆಲವು ತಿಂಗಳಿನಿಂದ ಪಾತಳಕ್ಕೆ ಇಳಿದಿದ್ದ ಹೂವಿನ ದರ ದಸರಾ ಹಬ್ಬಗೆ (Dasara Festival) ಏಕಾಏಕಿ ಏರಿಕೆಯಾಗಿದೆ. ಪ್ರತಿ ಕೆಜಿ ಹೂವಿನ ದರ ನೂರರಿಂದ ಇನ್ನೂರು ರೂಪಾಯಿ ವರೆಗೆ ಹೆಚ್ಚಳವಾಗಿದೆ. ಮಲ್ಲಿಗೆ ಮಗ್ಗು, ಸೇವಂತಿಗೆ, ಕನಕಾಂಬರ ಗ್ರಾಹಕರ ಜೇಬು ಸುಡುತ್ತಿದೆ. ಎರಡು ದಿನಗಳ ಹಿಂದೆ ಕೆಜಿ ಕನಕಾಂಬರ ಹೂವಿನ ದರ 600ರಿಂದ 700 ರೂ. ಇತ್ತು. ಮಂಗಳವಾರ ಏಕಾಏಕಿ ಸಾವಿರ ರೂಪಾಯಿ ಗಡಿ ದಾಟಿದೆ.

ಸೇವಂತಿಗೆ ಬಿಡಿ ಹೂವು 5 ರೂ.ನಿಂದ 10 ರೂ.ಗೆ ಮಾರಾಟವಾಗುತ್ತಿತ್ತು. ಆದರೆ ಮಂಗಳವಾರ 80 ರಿಂದ 100 ರೂ.ಗೆ ಮಾರಾಟವಾಗುತ್ತಿದೆ. ಬುಧವಾರದಿಂದ ಹೂವಿನ ದರ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ಮಲ್ಲಿಗೆ ಹೂವು ಕೆಜಿಗೆ 400 ರಿಂದ 500 ರೂ. ಇದ್ದುದು ಈಗ 600 ರಿಂದ 700 ರೂ. ಆಗಿದೆ. ನವರಾತ್ರಿ ಹಬ್ಬದ ಕಾರಣ ವ್ಯಾಪಾರಸ್ಥರು ಹೂವಿನ ಬೆಲೆ ಏರಿಕೆ ಮಾಡಿದ್ದಾರೆ.

ಯಾವ ಹೂವಿಗೆ ಎಷ್ಟಿದೆ ದರ?

ಸದ್ಯ ಕನಕಾಂಬರದ ಬೆಲೆ ಕೆಜಿಗೆ 600 – 700 ರೂ. ಇದ್ದರೆ, ಮಲ್ಲಿಗೆ ಕೆಜಿಗೆ 500 – 600 ರೂ, ಸೇವಂತಿಗೆ 80 ರಿಂದ 200 ರೂ, ಚಂಡೂ ಹೂ 40- 60 ರೂ, ಕಣಗಿಲೆ – 200 ರೂ, ದುಂಡು ಮಲ್ಲಿಗೆ – 500 ರೂ, ಕಾಕಾಡ – 400 ರೂ, ಆಮ್ರ ಮಲ್ಲಿಗೆ – 400 ರೂ (ಒಂದು ಮಾರಿಗೆ 100) ಇದೆ.

ಬಿಳಿ ಸೇವಂತಿಗೆ ಕೆಜಿಗೆ – 250 ರೂ, ಹಳದಿ ಸೇವಂತಿಗೆ 200 ರೂ, ಕೆಂಪು ಸೇವಂತಿಗೆ 200 ರೂ ಇದ್ದು, ಪರ್ಪಲ್ ಸೇವಂತಿಗೆ 200 ರೂ, ತುಳುಸಿ ಮಾರಿಗೆ 80 ರೂ, ದವನ ಒಂದು ಕಟ್ ಗೆ 100 ರೂ, ಮಾವಿನ ಎಲೆ ಒಂದು ಕಟ್​ಗೆ 80 ರೂ. ಇದೆ.

ಇದನ್ನೂ ಓದಿ: ಕಾರಿನಡಿಯಲ್ಲಿತ್ತು ಕಾಳಿಂಗ ಸರ್ಪ! 80 ಕಿಮೀ ಪ್ರಯಾಣಿಸಿ ಬೆಚ್ಚಿ ಬಿದ್ದ ಸವಾರರು ಆಮೇಲೆ ಮಾಡಿದ್ದೇನು?

ಪ್ರತಿ ವರ್ಷ ಹಬ್ಬದ ಸೀಸನ್​​ನಲ್ಲಿ ಹೂವಿನ ದರ ಹೆಚ್ಚಾಗುತ್ತದೆ. ಆದರೆ, ಈ ವರ್ಷ ನವರಾತ್ರಿ ಹಬ್ಬದ ಸಂದರ್ಭದಲ್ಲಿ ತುಸು ಹೆಚ್ಚೇ ದುಬಾರಿಯಾಗಿದೆ ಹೂವಿನ ದರ ಎಂದು ಗ್ರಾಹಕರು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!