AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ಹಬ್ಬಕ್ಕೆ ದುಬಾರಿಯಾದ ಹೂವು: ಕೆಜಿಗೆ 100 – 200 ರೂ. ವರೆಗೆ ಏರಿಕೆ

Flower Rate Increased in Bangalore: ಸೇವಂತಿಗೆ ಬಿಡಿ ಹೂವು 5 ರೂ.ನಿಂದ 10 ರೂ.ಗೆ ಮಾರಾಟವಾಗುತ್ತಿತ್ತು. ಆದರೆ ಮಂಗಳವಾರ 80 ರಿಂದ 100 ರೂ.ಗೆ ಮಾರಾಟವಾಗುತ್ತಿದೆ. ಬುಧವಾರದಿಂದ ಹೂವಿನ ದರ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ದಸರಾ ಹಬ್ಬಕ್ಕೆ ದುಬಾರಿಯಾದ ಹೂವು: ಕೆಜಿಗೆ 100 - 200 ರೂ. ವರೆಗೆ ಏರಿಕೆ
ಸಾಂದರ್ಭಿಕ ಚಿತ್ರ
Poornima Agali Nagaraj
| Edited By: |

Updated on: Oct 17, 2023 | 4:39 PM

Share

ಬೆಂಗಳೂರು, ಅಕ್ಟೋಬರ್ 17: ದಸರಾ ಹಬ್ಬ ಆರಂಭವಾಗುತ್ತಿದ್ದಂತೆಯೇ ಹೂವಿನ ದರದಲ್ಲಿ (Flower Rate) ಭಾರೀ ಏರಿಕೆ ಕಂಡುಬಂದಿದೆ. ಕಳೆದ ಕೆಲವು ತಿಂಗಳಿನಿಂದ ಪಾತಳಕ್ಕೆ ಇಳಿದಿದ್ದ ಹೂವಿನ ದರ ದಸರಾ ಹಬ್ಬಗೆ (Dasara Festival) ಏಕಾಏಕಿ ಏರಿಕೆಯಾಗಿದೆ. ಪ್ರತಿ ಕೆಜಿ ಹೂವಿನ ದರ ನೂರರಿಂದ ಇನ್ನೂರು ರೂಪಾಯಿ ವರೆಗೆ ಹೆಚ್ಚಳವಾಗಿದೆ. ಮಲ್ಲಿಗೆ ಮಗ್ಗು, ಸೇವಂತಿಗೆ, ಕನಕಾಂಬರ ಗ್ರಾಹಕರ ಜೇಬು ಸುಡುತ್ತಿದೆ. ಎರಡು ದಿನಗಳ ಹಿಂದೆ ಕೆಜಿ ಕನಕಾಂಬರ ಹೂವಿನ ದರ 600ರಿಂದ 700 ರೂ. ಇತ್ತು. ಮಂಗಳವಾರ ಏಕಾಏಕಿ ಸಾವಿರ ರೂಪಾಯಿ ಗಡಿ ದಾಟಿದೆ.

ಸೇವಂತಿಗೆ ಬಿಡಿ ಹೂವು 5 ರೂ.ನಿಂದ 10 ರೂ.ಗೆ ಮಾರಾಟವಾಗುತ್ತಿತ್ತು. ಆದರೆ ಮಂಗಳವಾರ 80 ರಿಂದ 100 ರೂ.ಗೆ ಮಾರಾಟವಾಗುತ್ತಿದೆ. ಬುಧವಾರದಿಂದ ಹೂವಿನ ದರ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ಮಲ್ಲಿಗೆ ಹೂವು ಕೆಜಿಗೆ 400 ರಿಂದ 500 ರೂ. ಇದ್ದುದು ಈಗ 600 ರಿಂದ 700 ರೂ. ಆಗಿದೆ. ನವರಾತ್ರಿ ಹಬ್ಬದ ಕಾರಣ ವ್ಯಾಪಾರಸ್ಥರು ಹೂವಿನ ಬೆಲೆ ಏರಿಕೆ ಮಾಡಿದ್ದಾರೆ.

ಯಾವ ಹೂವಿಗೆ ಎಷ್ಟಿದೆ ದರ?

ಸದ್ಯ ಕನಕಾಂಬರದ ಬೆಲೆ ಕೆಜಿಗೆ 600 – 700 ರೂ. ಇದ್ದರೆ, ಮಲ್ಲಿಗೆ ಕೆಜಿಗೆ 500 – 600 ರೂ, ಸೇವಂತಿಗೆ 80 ರಿಂದ 200 ರೂ, ಚಂಡೂ ಹೂ 40- 60 ರೂ, ಕಣಗಿಲೆ – 200 ರೂ, ದುಂಡು ಮಲ್ಲಿಗೆ – 500 ರೂ, ಕಾಕಾಡ – 400 ರೂ, ಆಮ್ರ ಮಲ್ಲಿಗೆ – 400 ರೂ (ಒಂದು ಮಾರಿಗೆ 100) ಇದೆ.

ಬಿಳಿ ಸೇವಂತಿಗೆ ಕೆಜಿಗೆ – 250 ರೂ, ಹಳದಿ ಸೇವಂತಿಗೆ 200 ರೂ, ಕೆಂಪು ಸೇವಂತಿಗೆ 200 ರೂ ಇದ್ದು, ಪರ್ಪಲ್ ಸೇವಂತಿಗೆ 200 ರೂ, ತುಳುಸಿ ಮಾರಿಗೆ 80 ರೂ, ದವನ ಒಂದು ಕಟ್ ಗೆ 100 ರೂ, ಮಾವಿನ ಎಲೆ ಒಂದು ಕಟ್​ಗೆ 80 ರೂ. ಇದೆ.

ಇದನ್ನೂ ಓದಿ: ಕಾರಿನಡಿಯಲ್ಲಿತ್ತು ಕಾಳಿಂಗ ಸರ್ಪ! 80 ಕಿಮೀ ಪ್ರಯಾಣಿಸಿ ಬೆಚ್ಚಿ ಬಿದ್ದ ಸವಾರರು ಆಮೇಲೆ ಮಾಡಿದ್ದೇನು?

ಪ್ರತಿ ವರ್ಷ ಹಬ್ಬದ ಸೀಸನ್​​ನಲ್ಲಿ ಹೂವಿನ ದರ ಹೆಚ್ಚಾಗುತ್ತದೆ. ಆದರೆ, ಈ ವರ್ಷ ನವರಾತ್ರಿ ಹಬ್ಬದ ಸಂದರ್ಭದಲ್ಲಿ ತುಸು ಹೆಚ್ಚೇ ದುಬಾರಿಯಾಗಿದೆ ಹೂವಿನ ದರ ಎಂದು ಗ್ರಾಹಕರು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!