AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದತ್ತ ಪೀಠದಲ್ಲಿ ಪೂಜಾ ಕೈಂಕರ್ಯ ವಿಚಾರ: ಸಚಿವ ಸಂಪುಟ ಉಪಸಮಿತಿ ವರದಿಗೆ ಸಂಪುಟ ಸಭೆ ಅಸ್ತು, ಶಿಫಾರಸುಗಳು ಹೈಕೋರ್ಟ್​ಗೆ

ದತ್ತ ಪೀಠದಲ್ಲಿ ಪೂಜಾ ಕೈಂಕರ್ಯ ನೆರವೇರಿಸುವ ವಿಚಾರವಾಗಿ ಜೆ.ಸಿ.ಮಾಧುಸ್ವಾಮಿ ನೇತೃತ್ವದ ಸಚಿವ ಸಂಪುಟ ಉಪಸಮಿತಿ ವರದಿಗೆ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದ್ದು, ವರದಿಯಲ್ಲಿನ ಶಿಫಾರಸುಗಳನ್ನು ಹೈಕೋರ್ಟ್​ಗೆ ಸಲ್ಲಿಸಲು ನಿರ್ಧರಿಸಲಾಗಿದೆ.

ದತ್ತ ಪೀಠದಲ್ಲಿ ಪೂಜಾ ಕೈಂಕರ್ಯ ವಿಚಾರ: ಸಚಿವ ಸಂಪುಟ ಉಪಸಮಿತಿ ವರದಿಗೆ ಸಂಪುಟ ಸಭೆ ಅಸ್ತು, ಶಿಫಾರಸುಗಳು ಹೈಕೋರ್ಟ್​ಗೆ
ದತ್ತ ಪೀಠ
TV9 Web
| Edited By: |

Updated on:Jul 01, 2022 | 8:16 PM

Share

ಬೆಂಗಳೂರು: ದತ್ತ ಪೀಠದಲ್ಲಿ (Datta peetha) ಪೂಜಾ ಕೈಂಕರ್ಯ ನೆರವೇರಿಸುವ ವಿಚಾರವಾಗಿ ಜೆ.ಸಿ.ಮಾಧುಸ್ವಾಮಿ (JC Madhuswamy) ನೇತೃತ್ವದ ಸಚಿವ ಸಂಪುಟ ಉಪಸಮಿತಿ ವರದಿಗೆ ಸಂಪುಟ ಸಭೆಯಲ್ಲಿ (Cabinet Meeting) ಅನುಮೋದನೆ ದೊರೆತಿದ್ದು, ವರದಿಯಲ್ಲಿನ ಶಿಫಾರಸುಗಳನ್ನು ಹೈಕೋರ್ಟ್​ಗೆ  (High Court) ಸಲ್ಲಿಸಲು ನಿರ್ಧರಿಸಲಾಗಿದೆ. ಬಾಬಾಬುಡನ್​ಗಿರಿ ಇನಾಂ ದತ್ತಾತ್ರೇಯ ಪೀಠದಲ್ಲಿ ಹಿಂದೂ ಸಂಪ್ರದಾಯದ ಪೂಜಾ ಕೈಂಕರ್ಯಗಳನ್ನು ನೆರವೇರಿಸಬೇಕು ಎಂದು ಹೇಳಿದೆ. ರಾಜ್ಯ ಸರ್ಕಾರ 2018ರ ಮಾರ್ಚ್ 19ರಂದು ಮುಸ್ಲಿಂ (Muslim) ಸಮುದಾಯದ ಮುಜಾವರ್ ನೇಮಿಸಿತ್ತು. ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್​ಗೆ ಶ್ರೀಗುರು ದತ್ತಾತ್ರೇಯ ದೇವಸ್ಥಾನ ಸಂವರ್ಧನಾ ಸಮಿತಿ ಅರ್ಜಿ ಸಲ್ಲಿಸಿತ್ತು.

ಇದನ್ನು ಓದಿ:  ಅಕ್ರಮ ಆಸ್ತಿಗಳಿಕೆ: ಪೊಲೀಸ್ ಅಧೀಕ್ಷಕ ಶ್ರೀನಿವಾಸ್ ಐಯ್ಯರ್‌ಗೆ 4 ವರ್ಷ ಜೈಲುಶಿಕ್ಷೆ, ಜೊತೆಗೆ 1 ಕೋಟಿ ರೂಪಾಯಿ ದಂಡ

ಈ ಸಂಬಂಧ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪಾಲಿಸಲು ಸಚಿವರ ಸಮಿತಿ ರಚನೆ ಮಾಡುವಂತೆ ಸರ್ಕಾರಕ್ಕೆ ಸೂಚನೆ ನೀಡಿತ್ತು. ಹೀಗಾಗಿ ಸರ್ಕಾರ ಮೂವರು ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿ ರಚಿಸಿತ್ತು. ಈಗ ಉಪಸಮಿತಿ ಸಲ್ಲಿಸಿದ ವರದಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ.

ಇದನ್ನು ಓದಿ:  ಆಗಸ್ಟ್ 10 -22 ರವರೆಗೆ ಹಾಸನದಲ್ಲಿ ನಡೆಯಲಿದೆ ಅಗ್ನಿಪಥ್ ನೇಮಕಾತಿ: ಇದು 14 ಜಿಲ್ಲೆಗಳಿಗೆ ಅನ್ವಯ

ವರದಿಯಲ್ಲಿನ ಶಿಫಾರಸುಗಳು: – ವಾರ್ಷಿಕ ಧಾರ್ಮಿಕ ಕಾರ್ಯಕ್ರಮಗಳ ದಿನಚರಿ ರೂಪಿಸಲು ವ್ಯವಸ್ಥಾಪನಾ ಸಮಿತಿಗೆ ಜವಾಬ್ದಾರಿ – ದರ್ಗಾ ಪೂಜೆ ಹಾಗೂ ದತ್ತಪೀಠದಲ್ಲಿ ಪೂಜೆ ಸಲ್ಲಿಸಲು ಎರಡು ಸಮುದಾಯಕ್ಕೆ ಅವಕಾಶ – ವ್ಯವಸ್ಥಾಪನಾ ಸಮಿತಿಗೆ ಅರ್ಚಕ ಹಾಗೂ ಮುಜಾವರ ನೇಮಕಾತಿ ಜವಾಬ್ದಾರಿ – ವ್ಯವಸ್ಥಾಪನಾ ಸಮಿತಿಯಿಂದ ಊರೂಸ್ ಹಾಗೂ ಪೂಜಾ ಪುನಸ್ಕಾರಗಳ ಮೇಲ್ವಿಚಾರಣೆ – ಪೂಜೆ ಮಾಡಲು ಅರ್ಚಕರು ಹಾಗೂ ಮುಜಾವರರಿಗೆ ಅವಕಾಶ

Published On - 8:14 pm, Fri, 1 July 22

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್