AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕು, ಡೆತ್ ರೇಟ್ ಹೆಚ್ಚಳ; ರೂಲ್ಸ್ ಸಡಿಲಿಕೆ ಮಾಡದಂತೆ ತಜ್ಞರ ಸಲಹೆ

SARI, ILI ಸೋಂಕಿತರು ಅತಿ ಹೆಚ್ಚು ಕೋವಿಡ್ ಗೆ ಬಲಿಯಾಗುತ್ತಿದ್ದಾರೆ. ಸಕ್ಕರೆ ಖಾಯಿಲೆ, ಹೈಪರ್ ಟೆನ್ಷನ್ ಬಿಪಿ, ಲಂಗ್ ಡಿಸೀಸ್ ಗೆ ಒಳಗಾದ ಸೋಂಕಿತರು ಹೆಚ್ಚಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.

ಸೋಂಕು, ಡೆತ್ ರೇಟ್ ಹೆಚ್ಚಳ; ರೂಲ್ಸ್ ಸಡಿಲಿಕೆ ಮಾಡದಂತೆ ತಜ್ಞರ ಸಲಹೆ
ಪ್ರಾತಿನಿಧಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on: Jan 27, 2022 | 11:58 AM

Share

ಬೆಂಗಳೂರು: ಮಹಾಮಾರಿ ಕೊರೊನಾ ಕೇಸ್ ಅಬ್ಬರದ ಮಧ್ಯೆ ಕೋವಿಡ್ ಡೆತ್ ಸಂಖ್ಯೆ ಹೆಚ್ಚಳದ ಆತಂಕ ಶುರುವಾಗಿದೆ. ದಿನೇ ದಿನೇ ಕೊರೊನಾದಿಂದ ಬಲಿಯಾಗುವವರ ಹಾಗೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕರ್ನಾಟಕದಲ್ಲಿ ಬುಧವಾರ (ಜ.26) 48,905 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 39 ಜನರು ಸಾವನ್ನಪ್ಪಿದ್ದಾರು. ಈಗ ಸದ್ಯದ ವರದಿಯಂತೆ ಕೊರೊನಾ ತನ್ನ ಅಟ್ಟಹಾಸ ಹೆಚ್ಚು ಮಾಡಿದೆ. ಹೀಗಾಗಿ ಸದ್ಯದ ರೂಲ್ಸ್ ಸಡಿಲಿಕೆ ಮಾಡದಂತೆ ತಜ್ಞರ ತಂಡ ಸಲಹೆ ನೀಡಲು ಮುಂದಾಗಿದೆ.

ಕಳೆದ 10 ದಿನಗಳಿಂದ ಕೋವಿಡ್ ಮರಣ ಸಂಖ್ಯೆ ಏರಿಕೆಯಾಗುತ್ತಿದೆ ಜ.16 ರಂದು 34047 ಕೇಸ್ ಹಾಗೂ 13 ಸಾವು ಸಂಭವಿಸಿತ್ತು. ಜ.17ರಂದು 27156 ಕೇಸ್, 14- ಸಾವು, ಜ.18 ರಂದು 41457ಕೇಸ್, 20-ಸಾವು, ಜ.19ರಂದು 40499 ಕೇಸ್, 21-ಸಾವು, ಜ.20ರಂದು 47754 ಕೇಸ್, 29 ಸಾವು, ಜ.21 ರಂದು 48049 ಕೇಸ್, 22 ಸಾವು. ಜ.22 ರಂದು 42470 ಕೇಸ್, 26 ಸಾವು. ಜ.23 ರಂದು 50210 ಕೇಸ್, 19 ಸಾವು. ಜ.24 ರಂದು 46426 ಕೇಸ್, 32 ಸಾವು. ಜ.25 ರಂದು 41400 ಕೇಸ್, 52 ಸಾವು. ಜ.26 ರಂದು 48905 ಕೇಸ್, 39 ಸಾವು ಸಂಭವಿಸಿವೆ.

SARI, ILI ನಿಂದ ಬಳಲುತ್ತಿರುವ ಸೋಂಕಿತರ ಜೀವಕ್ಕೆ ಅಪಾಯ ಇನ್ನು ಮತ್ತೊಂದು ಕಡೆ SARI, ILI ಸೋಂಕಿತರು ಅತಿ ಹೆಚ್ಚು ಕೋವಿಡ್ ಗೆ ಬಲಿಯಾಗುತ್ತಿದ್ದಾರೆ. ಸಕ್ಕರೆ ಖಾಯಿಲೆ, ಹೈಪರ್ ಟೆನ್ಷನ್ ಬಿಪಿ, ಲಂಗ್ ಡಿಸೀಸ್ ಗೆ ಒಳಗಾದ ಸೋಂಕಿತರು ಹೆಚ್ಚಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅಲ್ಲದೆ ಜ್ವರ, ಕೆಮ್ಮು, ಉಸಿರಾಟದ ತೊಂದರೆ ಇರುವ ಸೋಂಕಿತರಿಗೆ ಹೆಚ್ಚು ಅಪಾಯ. ಹೀಗಾಗಿ ಯಾವುದೇ ಕಾರಣಕ್ಕೂ ಮುಂದಿನ ಎರಡು ವಾರಗಳ ಕಾಲ ಕಠಿಣ ನಿಯಮಗಳನ್ನು ಸಡಿಲಗೊಳಿಸದಿರಲು ಟಾಸ್ಕ್ ಫೋರ್ಸ್ ಟೀಂ ನಿರ್ಧಾರ ಮಾಡಿದೆ. ಪರಿಸ್ಥಿತಿ ಕಾದು ನೋಡುವ ನಿರ್ಧಾರಕ್ಕೆ ಆರೋಗ್ಯ ಇಲಾಖೆ ಮುಂದಾಗಿದೆ. ಪರಿಸ್ಥಿತಿ ಅವಲೋಕಿಸಿ ನಿರ್ಧಾರ ಕೈಗೊಳ್ಳಲು ಚಿಂತನೆ ನಡೆದಿದೆ. ಸದ್ಯದ ಮಟ್ಟಿಗೆ ರಿಸ್ಟ್ರಿಕ್ಷನ್ ಮುಂದುವರೆಸಲು ನಿರ್ಧಾರ ಮಾಡಲಾಗಿದೆ.

ಇದನ್ನೂ ಓದಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,86,384 ಕೊರೊನಾ ಪ್ರಕರಣ ಪತ್ತೆ, 573 ಜನರು ಸೋಂಕಿನಿಂದ ಸಾವು

Covid 19 Karnataka Update: ಕರ್ನಾಟಕದಲ್ಲಿ 48,905 ಮಂದಿಗೆ ಕೊರೊನಾ ಸೋಂಕು, ಕೊವಿಡ್​ನಿಂದ 39 ಮಂದಿ ಸಾವು

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ