AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳರ ಕರಾಮತ್ತಿಗೆ ಸ್ವಂತ ಸೂರಿನ ಕನಸು ಕಂಡಿದ್ದ ಕುಟುಂಬ ಕಂಗಾಲು: ಮನೆ ಬಾಗಿಲು ಮುರಿದು ಚಿನ್ನ, ಹಣ ದರೋಡೆ

ಹಾಡ ಹಗಲೇ ಮನೆಯ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು ಕಬೋರ್ಟ್​​ ಲಾಕ್​​ ಕೂಡ ಬ್ರೇಕ್​​ ಮಾಡಿ ಲಕ್ಷ ಲಕ್ಷ ಹಣ ಮತ್ತು ಬಂಗಾರವನ್ನು ಕಳುವು ಮಾಡಿರುವ ಘಟನೆ ಬೆಂಗಳೂರಿನ ಭಾರತ್ ನಗರದ ಮುನೇಶ್ವರ ಬಡಾವಣೆಯಲ್ಲಿ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ನೋಡಿಕೊಂಡೇ ಕಳುವು ಮಾಡಲಾಗಿದ್ದು, ಸ್ವಂತ ಮನೆ ಖರೀದಿಗೆಂದು ಹಣ ಕೂಡಿಸಿಟ್ಟಿದ್ದ ಕುಟುಂಬ ಕಂಗಾಲಾಗಿದೆ. ಘಟನೆ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳ್ಳರ ಕರಾಮತ್ತಿಗೆ ಸ್ವಂತ ಸೂರಿನ ಕನಸು ಕಂಡಿದ್ದ ಕುಟುಂಬ ಕಂಗಾಲು: ಮನೆ ಬಾಗಿಲು ಮುರಿದು ಚಿನ್ನ, ಹಣ ದರೋಡೆ
ಸಾಂದರ್ಭಿಕ ಚಿತ್ರ
Shivaprasad B
| Updated By: ಪ್ರಸನ್ನ ಹೆಗಡೆ|

Updated on: Dec 16, 2025 | 5:01 PM

Share

ಬೆಂಗಳೂರು, ಡಿಸೆಂಬರ್​​ 16:  ಕಾಂಡಿಮೆಂಟ್ಸ್​​ ಶಾಪ್​​ ಇಟ್ಟುಕೊಂಡು ಜೀವನ ನಡೆಸುತ್ತಿದ್ದ ಕುಟುಂಬವೊಂದು ಸಣ್ಣ ಸ್ವಂತ ಸೂರಿನ ಕನಸು ಕಂಡಿತ್ತು. ಜೀವನಪೂರ್ತಿ ದುಡಿದ ಹಣ, ಸಾಲಶೂಲ ಮಾಡಿ ಸಂಗ್ರಹಿಸಿದ ಒಂದಿಷ್ಟು ಕಾಸಿನ ಜೊತೆಗೆ ಬಂಗಾರವನ್ನು ಮನೆಯ ಕಪಾಟಿನಲ್ಲಿ ಭದ್ರವಾಗಿ ಇಟ್ಟಿತ್ತು. ಆದ್ರೆ ಅದ್ಯಾರ ಕಣ್ಣು ಬಿತ್ತೋ ಗೊತ್ತಿಲ್ಲ. ಮನೆಯಿಂದ ಆಚೆ ಹೋಗಿ ಬರುವಷ್ಟರಲ್ಲಿ ಅವೆಲ್ಲವೂ ಕಳುವಾಗಿದೆ. ಹಾಡಹಗಲೇ ನಡೆದ ಘಟನೆಗೆ ಕುಟುಂಬ ಕಂಗಾಲಾಗಿದೆ.

ಬೆಂಗಳೂರಿನ ಭಾರತ್ ನಗರದ ಮುನೇಶ್ವರ ಬಡಾವಣೆಯಲ್ಲಿರುವ ಮಾಯಣ್ಣಗೌಡ ಎಂಬುವರ ಮನೆಯಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ. ಮನೆಯಲ್ಲಿದ್ದ 20 ಲಕ್ಷ ರೂ. ನಗದು ಮತ್ತು 20 ಲಕ್ಷ ರೂ. ಮೌಲ್ಯದ 180 ಗ್ರಾಂ ಚಿನ್ನಾಭರಣ ಕಳುವು ಮಾಡಲಾಗಿದೆ. ನಿನ್ನೆ ಸಂಜೆ 4ರಿಂದ 7 ಗಂಟೆಯ ಅವಧಿಯಲ್ಲಿ ಘಟನೆ ನಡೆದಿದ್ದು, ಸಣ್ಣದೊಂದು ಮನೆ ಖರೀದಿಸುವ ಕನಸು ಕಂಡಿದ್ದ ಕುಟುಂಬ ಅಕ್ಷರಶಃ ಬೆಚ್ಚಿಬಿದ್ದಿದೆ. ಜೀವಮಾನವಿಡೀ ದುಡಿದು ಗಳಿಸಿದ್ದ ಸಂಪತ್ತಿನ ಜೊತೆ ಸಾಲ ಮಾಡಿ ತಂದಿದ್ದ ಮತ್ತು ತಾಯಿ ಕೂಡಿಟ್ಟ ಹಣ ಎಲ್ಲವೂ ಕಳುವಾಗಿದೆ ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: 4 ಕಳ್ಳತನ ಪ್ರಕರಣ ಭೇದಿಸಿದ ಕಲಬುರಗಿ ಪೊಲೀಸ್; 6 ಖದೀಮರ ಬಂಧನ

ಹಾಸನ ಮೂಲದವರಾಗಿರೊ ಮಾಯಣ್ಣಗೌಡ ಕಾಂಡಿಮೆಂಟ್ಸ್ ಶಾಪ್​​ ಒಂದನ್ನು ನಡೆಸುತ್ತಿದ್ದು, ಮುಂಜಾನೆಯಿಂದ ರಾತ್ರಿಯವರೆಗೂ ಅಲ್ಲೇ ಕೆಲಸ ಮಾಡುತ್ತಾರೆ. ಪ್ರತಿದಿನ ಬೆಳಿಗ್ಗೆ 4 ಗಂಟೆಗೆ ಮಾಯಣ್ಣಗೌಡ ಶಾಪ್​​ಗೆ ತೆರಳಿದ್ರೆ, ಅವರ ಪತ್ನಿ 11 ಗಂಟೆಗೆ ಅಂಗಡಿಗೆ ಬಂದ ಮೇಲೆಯೇ ಮನೆಗೆ ಬಂದು ಕೊಂಚ ವಿಶ್ರಾಂತಿ ಪಡೆಯುತ್ತಿದ್ದರು. ಸಂಜೆ 4 ಗಂಟೆಗೆ ಮಗಳು ಶಾಲೆಯಿಂದ ಬಂದ ಬಳಿಕ ಆಕೆಯನ್ನು ಕರೆದುಕೊಂಡು ಮತ್ತೆ ಅಂಗಡಿಗೆ ಹೋಗ್ತಿದ್ರು. ಅವರ ಪತ್ನಿ ಮಗಳನ್ನು ಕರೆದುಕೊಂಡು ಸಂಜೆ 7 ಗಂಟೆ ಸುಮಾರಿಗೆ ಮನೆಗೆ ಹಿಂದಿರುಗೋದು ಈ ಕುಟುಂಬದ ದಿನಚರಿ. ಅದರಂತೆ ನಿನ್ನೆ ಸಂಜೆ ಮಾಯಣ್ಣಗೌಡ ಪತ್ನಿ ಮನೆಗೆ ಹೋದಾಗ ಕಳ್ಳತನ ನಡೆದಿರೋದು ಗೊತ್ತಾಗಿದೆ. ಕಳ್ಳರು ಮನೆಯ ಬೀಗ ಮುರಿದು ಒಳನುಗ್ಗಿ, ಕಬೋರ್ಡ್‌ನ ಲಾಕ್​​ ಕೂಡ ಒಡೆದು ಕಳುವು ಮಾಡಿದ್ದು ಕಂಡು ಆಕೆ ಬೆಚ್ಚಿಬಿದ್ದಿದ್ದಾರೆ. ಘಟನೆ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?