AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: 3500 ಕುಟುಂಬಗಳನ್ನು ಖಾಲಿ ಮಾಡುವಂತೆ ಡಿಸಿ ಸೂಚನೆ, ಡಿಸಿ ವಿರುದ್ಧ ಆಶ್ರಯ ನಗರ ನಿವಾಸಿಗಳ ಆಕ್ರೋಶ

ಅವರೆಲ್ಲ ಕನಿಷ್ಠ ಮೂಲಭೂತ ಸೌಕರ್ಯಗಳಿಲ್ಲದೆ, ಕಳೆದ 25 ವರ್ಷಗಳಿಂದ ವಾಸ ಮಾಡುತ್ತಿದ್ದರು. 3,500 ಕುಟುಂಬಗಳು ಜೀವ ಕಟ್ಟಿಕೊಂಡಿರುವ ಆ ಜಾಗ ಬಿಟ್ಟು ಹೊರಡುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೊಟ್ಟ ಆ ಒಂದು ನೋಟಿಸ್ ಈಗ ಎಲ್ಲರ ಆಕ್ರೋಶ ಭುಗಿಲೇಳುವ ಹಾಗೆ ಮಾಡಿದೆ. ಅವರ ಬದುಕೇ ಈಗ ಅತಂತ್ರ ಸ್ಥಿತಿ ತಲುಪಿದ್ದು, ಬೀದಿಗೆ ಇಳಿದು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: 3500 ಕುಟುಂಬಗಳನ್ನು ಖಾಲಿ ಮಾಡುವಂತೆ ಡಿಸಿ ಸೂಚನೆ, ಡಿಸಿ ವಿರುದ್ಧ ಆಶ್ರಯ ನಗರ ನಿವಾಸಿಗಳ ಆಕ್ರೋಶ
ಆಶ್ರಯ ನಗರ
ಕಿರಣ್​ ಸೂರ್ಯ
| Edited By: ಆಯೇಷಾ ಬಾನು|

Updated on: Aug 26, 2024 | 10:46 AM

Share

ಬೆಂಗಳೂರು, ಆಗಸ್ಟ್​.26: ಕಳೆದ 25 ವರ್ಷಗಳಿಂದ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ HMT ವಾರ್ಡ್ ನ ಆಶ್ರಯ ನಗರ ಸ್ಲಂನಲ್ಲಿ ವಾಸ ಮಾಡುತ್ತಿರುವ 3,500 ಕ್ಕೂ ಹೆಚ್ಚು ಕುಟುಂಬಗಳ ಆಕ್ರೋಶ ಭುಗಿಲೆದ್ದಿದೆ. ಸದ್ಯ ಇವರು ವಾಸ ಮಾಡುತ್ತಿರುವ ಪ್ರದೇಶದಲ್ಲಿ ಹೈ ಟೆನ್ಷನ್ ವೈರ್ ಗಳು ಹಾದು ಹೋಗಿದ್ದು, ವಾಸಕ್ಕೆ ಯೋಗ್ಯವಲ್ಲ, ಅಪಾಯಕಾರಿ ಎಂದು ಘೋಷಣೆ ಮಾಡಲಾಗಿದೆ. ಎಲ್ಲರೂ ಜಾಗ ಖಾಲಿ ಮಾಡುವಂತೆ ಜಿಲ್ಲಾಡಳಿತ ನೋಟಿಸ್ ನೀಡಿದೆ. ಇದೇ ವಿಚಾರ ಇವರ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರ ಎಲ್ಲೋ ಜಾಗ ಇದೆ ನೀವು ಅಲ್ಲಿಗೆ ಹೋಗಿ ಅಂದರೆ ಹೇಗೆ? ನಮಗೆ ಸೂಕ್ತವಾದ ವ್ಯವಸ್ಥೆ ಮಾಡಬೇಕು, ಇಲ್ಲಿನ ರಾಜಕೀಯ ನಾಯಕರು ಯಾರು ಸರಿಯಿಲ್ಲ. ಎಲೆಕ್ಷನ್ ಟೈಮಲ್ಲಿ ಮತ ಹಾಕಿ ಅಂತ ಮಾತ್ರ ಕೇಳ್ತಾರೆ ಈಗ ಯಾರು ಬರೋದಿಲ್ಲ ‌ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಶ್ರಯ ನಗರದ 7-8 ಎಕರೆ ಜಾಗದಲ್ಲಿ ಇವರೆಲ್ಲ ವಾಸ ಮಾಡುತ್ತಿದ್ದಾರೆ. ಈಗ ಗೌಡನ ಹಳ್ಳಿ ಎಂಬ ಕಡೆ 1 ಎಕರೆ ಜಾಗಕ್ಕೆ ನೀವೆಲ್ಲ ಹೋಗಬೇಕು ಅಂತ ಡಿಸಿ ಸೂಚನೆ ನೀಡಿದ್ದಾರೆ. ಇದು ಹೇಗೆ ಸಾಧ್ಯ? ಇಷ್ಟೊಂದು ಮಂದಿ 1 ಎಕರೆ ಜಾಗದಲ್ಲಿ ಹೇಗೆ ವಾಸ ಮಾಡೋದು ಅಂತ ಪ್ರಶ್ನೆ ಮಾಡುತ್ತಿದ್ದಾರೆ. ನಾವು 25 ವರ್ಷಗಳಿಂದ ಇಲ್ಲಿ ವಾಸ ಮಾಡುತ್ತಿದ್ದೀವಿ, ಈಗ ಏಕಾಏಕಿ ಕರೆಂಟ್ ವೈರ್ ಇದೆ ಇಲ್ಲಿ ಯಾರು ಜೀವನ ಮಾಡಬಾರದು ಮನೆಗಳನ್ನು ಖಾಲಿ ಮಾಡಬೇಕು ‌ಅಂದರೆ ಹೇಗೆ? ನಾವು ಯಾವುದೇ ಕಾರಣಕ್ಕೂ ಇಲ್ಲಿಂದ ಹೋಗಲ್ಲ ಸರ್ಕಾರ ನಮಗೆ ಸೈಟ್ ನೀಡಬೇಕು ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ರೈಲು ಹಾದು ಹೋದ ಬಳಿಕವೂ ಪವಾಡವೆಂಬಂತೆ ಬದುಕುಳಿದ ಮಹಿಳೆ

ಒಟ್ನಲ್ಲಿ ಇವರ ಸಂಕಷ್ಟ ಕೇಳಲು ಯಾರು ಇಲ್ಲದ ಸ್ಥಿತಿ ಈಗ ನಿರ್ಮಾಣ ಆಗಿದೆ. ಏನೇ ಆದರೂ ನಮಗೆ ಒಂದು ಸೂರು ಭದ್ರ ಆಗುವವರೆಗೂ ನಾವು ಈಗ ಜಾಗ ಬಿಟ್ಟು ಕದಲಲ್ಲ ಅಂತ ಸ್ಥಳೀಯರು ಪಟ್ಟು ಹಿಡಿದು ರಸ್ತೆಗೆ ಬಂದು ಪ್ರತಿಭಟನೆ ನಡೆಸಿದ್ದಾರೆ. ನಮ್ಮ ಮನವಿಗೆ ಸ್ಪಂದಿಸದೆ, ಮನೆಗಳ ತೆರವು ಮಾಡಲು ಬಂದರೆ ಆಗುವ ಅನಾಹುತಕ್ಕೆ ಸರ್ಕಾರವೇ ಹೊಣೆ ಅಂತ ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ಸರ್ಕಾರ ಏನು ಪರಿಹಾರ ನೀಡುತ್ತೆ ಅನ್ನೋದನ್ನ ಕಾದು ನೋಡಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​ ನೀಡಿದ ಸಿಎಂ ಡಿಕೆ ಶಿವಕುಮಾರ್​
ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​ ನೀಡಿದ ಸಿಎಂ ಡಿಕೆ ಶಿವಕುಮಾರ್​
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ