AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಸುತ್ತಮುತ್ತ 12 ಹೊಸಾ ಮಾರುಕಟ್ಟೆ ಆರಂಭ

ಬೆಂಗಳೂರು: ಮಹಾಮಾರಿ ಕೊರೊನಾಗೆ ಸಿಲಿಕಾನ್ ಸಿಟಿ ತತ್ತರಿಸಿ ಹೋಗಿದೆ. ಈ ವೇಳೆ ರೈತರು ತಾವು ಬೆಳೆದ ಬೆಲೆಯನ್ನು ಮಾರುಕಟ್ಟೆಗೆ ಸಾಗಿಸಲಾಗದೆ, ಸರಿಯಾದ ಬೆಲೆಯೂ ಸಿಗದೆ ಕಣ್ಣೀರು ಹಾಕುತ್ತಿದ್ದಾನೆ. ಹೀಗಾಗಿ ರೈತರಿಗೆ ಸಹಾಯವಾಗಲು ನಗರದಲ್ಲಿ 12 ಹೊಸ ಮಾರುಕಟ್ಟೆಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಇಂದು ನಡೆದ ಸಭೆ ಬಳಿಕ ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್ ಬೆಂಗಳೂರು ಸುತ್ತಮುತ್ತ ಹೊಸ 12 ಮಾರುಕಟ್ಟೆ ಆರಂಭಕ್ಕೆ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ತೋಟಗಾರಿಕೆ ಉತ್ಪನ್ನ ಮತ್ತು ಹೂವು ಮಾರಾಟಕ್ಕೆ 12 ಹೊಸ ಮಾರುಕಟ್ಟೆ […]

ಬೆಂಗಳೂರು ಸುತ್ತಮುತ್ತ 12 ಹೊಸಾ ಮಾರುಕಟ್ಟೆ ಆರಂಭ
ಸಾಧು ಶ್ರೀನಾಥ್​
|

Updated on: Apr 16, 2020 | 1:27 PM

Share

ಬೆಂಗಳೂರು: ಮಹಾಮಾರಿ ಕೊರೊನಾಗೆ ಸಿಲಿಕಾನ್ ಸಿಟಿ ತತ್ತರಿಸಿ ಹೋಗಿದೆ. ಈ ವೇಳೆ ರೈತರು ತಾವು ಬೆಳೆದ ಬೆಲೆಯನ್ನು ಮಾರುಕಟ್ಟೆಗೆ ಸಾಗಿಸಲಾಗದೆ, ಸರಿಯಾದ ಬೆಲೆಯೂ ಸಿಗದೆ ಕಣ್ಣೀರು ಹಾಕುತ್ತಿದ್ದಾನೆ. ಹೀಗಾಗಿ ರೈತರಿಗೆ ಸಹಾಯವಾಗಲು ನಗರದಲ್ಲಿ 12 ಹೊಸ ಮಾರುಕಟ್ಟೆಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಇಂದು ನಡೆದ ಸಭೆ ಬಳಿಕ ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್ ಬೆಂಗಳೂರು ಸುತ್ತಮುತ್ತ ಹೊಸ 12 ಮಾರುಕಟ್ಟೆ ಆರಂಭಕ್ಕೆ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ತೋಟಗಾರಿಕೆ ಉತ್ಪನ್ನ ಮತ್ತು ಹೂವು ಮಾರಾಟಕ್ಕೆ 12 ಹೊಸ ಮಾರುಕಟ್ಟೆ : ಕೃಷಿ, ತೋಟಗಾರಿಕೆ ಉತ್ಪನ್ನ ಮತ್ತು ಹೂವು ಮಾರಾಟಕ್ಕೆ 12 ಹೊಸ ಮಾರುಕಟ್ಟೆ ನಿರ್ಮಿಸಲಾಗುವುದು. ಹೀಗಾಗಿ ಕಂದಾಯ ಇಲಾಖೆಗೆ ಜಾಗ ಕೊಡಲು ಮನವಿ ಮಾಡಿಕೊಂಡಿದ್ದೇವೆ. ಬೆಂಗಳೂರಿನಲ್ಲಿ ಅಗತ್ಯ ವಸ್ತು ತಯಾರಿಸುವ ಫ್ಯಾಕ್ಟರಿಗಳ ಸಿಬ್ಬಂದಿಗೆ ಇಂದಿನಿಂದ ಪಾಸ್ ವಿತರಣೆ ಮಾಡಲಾಗುವುದು. ಗುಳೆ ಬಂದಿರುವ ಕಟ್ಟಡ ಕಾರ್ಮಿಕರಿಗೆ ಆಹಾರ ಕೊಡ್ತಿದ್ದೇವೆ. ಪಡಿತರ ಚೀಟಿ ಅರ್ಜಿ ಸಲ್ಲಿಸಿದವರಿಗೂ ಪಡಿತರ ಹಂಚಿಕೆ ಆಗ್ತಿದೆ ಎಂದು ಹೇಳಿದ್ರು.

ದ್ರಾಕ್ಷಿ ಬೆಲೆ ಸಹಜ ಸ್ಥಿತಿಗೆ: ಇನ್ನು ತೋಟಗಾರಿಕೆ ಇಲಾಖೆಯಲ್ಲಿ ಈ ಹಿಂದೆ ಒಂದೂವರೆ ಸಾವಿರ ಟನ್ ವಹಿವಾಟು ನಡೀತಿತ್ತು. ಈಗ 5 ಸಾವಿರ ಟನ್ ತೋಟಗಾರಿಕೆ ಉತ್ಪನ್ನ ವಹಿವಾಟು ನಡೆಯುತ್ತಿದೆ. ಟೊಮೇಟೊ ಮತ್ತು ದ್ರಾಕ್ಷಿ ಬೆಲೆ ಸಹಜ ಸ್ಥಿತಿಗೆ ಬಂದಿದೆ. ದ್ರಾಕ್ಷಿಗಳನ್ನ ವೈನ್ ಡಿಸ್ಟಲರಿಗೆ ನೀಡುವ ಕುರಿತು ಅಬಕಾರಿ ಇಲಾಖೆ ಜತೆ ಚರ್ಚೆ ನಡೆದಿದೆ.

ಸರ್ಕಾರ ಬೀಜ ವಿತರಣಾ ಸಂಸ್ಥೆಗಳಿಗೆ 83 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿತ್ತು. ಅದನ್ನ ಈಗ ಸರ್ಕಾರದ ವತಿಯಿಂದ ನೀಡುವ ವ್ಯವಸ್ಥೆ ಆಗಿದೆ. ಬೆಂಗಳೂರಿನಲ್ಲಿ ತರಕಾರಿ ಮತ್ತು ಹಣ್ಣು ವ್ಯಾಪಾರ ಮಾಡಲು 320 ಮೊಬೈಲ್ ವಾಹನ ಸಂಚಾರ ಮಾಡ್ತಿದೆ. ರೇಷ್ಮೆ ಮಾರುಕಟ್ಟೆ ಸುಧಾರಣೆ ಆಗಿದೆ. 120 ಟನ್ ಖರೀದಿ ಮಾಡುವ ವ್ಯವಸ್ಥೆ ಆಗಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದ್ದು.

ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?