AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫುಟ್‌ಪಾತ್​ ಮೇಲೆ ಕಸ ಹಾಕಿದರೇ ಠಾಣಾ ವ್ಯಾಪ್ತಿಯಲ್ಲಿ ಕ್ರಮ, ಟ್ಯಾಕ್ಸ್ ಕದಿಯುತ್ತಿರುವವರಿಗೆ ಕಡಿವಾಣ: ಡಿಕೆ ಶಿವಕುಮಾರ್​

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ಬೆಳ್ಳಂ ಬೆಳಿಗ್ಗೆ ಬೆಂಗಳೂರು ಸಿಟಿ ರೌಂಡ್ಸ್​​ ಹಾಕಿದ್ದು, ಇಂದಿರಾ ಕ್ಯಾಂಟಿನ್​ ಮತ್ತು ತ್ಯಾಜ್ಯ ಘಟಗಳಿಗೆ ದಿಢೀರ್​​ ಭೇಟಿ ನೀಡಿದ್ದಾರೆ.

ಫುಟ್‌ಪಾತ್​ ಮೇಲೆ ಕಸ ಹಾಕಿದರೇ ಠಾಣಾ ವ್ಯಾಪ್ತಿಯಲ್ಲಿ ಕ್ರಮ, ಟ್ಯಾಕ್ಸ್ ಕದಿಯುತ್ತಿರುವವರಿಗೆ ಕಡಿವಾಣ: ಡಿಕೆ ಶಿವಕುಮಾರ್​
ಡಿಕೆ ಶಿವಕುಮಾರ್​​
Anil Kalkere
| Edited By: ವಿವೇಕ ಬಿರಾದಾರ|

Updated on: Jul 09, 2023 | 12:52 PM

Share

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)​ ಅವರು ಇಂದು (ಜು.09) ಬೆಳ್ಳಂ ಬೆಳಿಗ್ಗೆ ಸಿಟಿ ರೌಂಡ್ಸ್​​ ಹಾಕಿದ್ದು, ಇಂದಿರಾ ಕ್ಯಾಂಟಿನ್​ (Indira Canteen) ಮತ್ತು ತ್ಯಾಜ್ಯ ಘಟಗಳಿಗೆ ದಿಢೀರ್​​ ಭೇಟಿ ನೀಡಿದ್ದಾರೆ. ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಅಧಿಕಾರಿಗಳಿಗೆ ತಿಳಿಸದೇ ತ್ಯಾಜ್ಯ ಘಟಕಗಳಿಗೆ ಭೇಟಿ ನೀಡಿದ್ದೇನೆ. ಯಾವುದೇ ಅಧಿಕಾರಿಗಳಿಗೆ ಮಾಹಿತಿ ನೀಡದೇ ಭೇಟಿ ನೀಡಿದ್ದೇನೆ. ತ್ಯಾಜ್ಯ ಘಟಕಗಳಲ್ಲಿ ಅಧಿಕಾರಿಗಳು ಯಾರೂ ತಪಾಸಣೆ ಮಾಡುತ್ತಿಲ್ಲ. ಬೆಂಗಳೂರು ಮಹಾನಗರ ಸ್ವಚ್ಛಗೊಳಿಸಬೇಕಾಗಿದೆ ಎಂದರು.

ಫುಟ್​ಪಾತ್‌ಗಳಲ್ಲಿ ಕಸ ಹಾಕಿದ್ದಾರೆ. ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಇದಕ್ಕೆ ಪರಿಹಾರ ಏನು? ಯಾರು ಜವಾಬ್ದಾರರೆಂದು ಕೇಳಿದ್ದೇನೆ. ವಿಲೇವಾರಿ ಟೆಂಡರ್ ಪಡೆದವರು ಎಲ್ಲೆಂದ್ರಲ್ಲಿ ಡಂಪ್ ಮಾಡುತ್ತಿದ್ದಾರೆ. ಲಾರಿ, ಟ್ರ್ಯಾಕ್ಟರ್‌ಗಳ ಚಾಲಕರು ಕಸ ತಂದು ಸುರಿಯುತ್ತಿದ್ದಾರೆ. ಈ ಬಗ್ಗೆ ಸಭೆ ನಡೆಸಿ ಸೂಚನೆ ನೀಡಿದ್ದೇನೆ. ಲಾರಿ ಚಾಲಕರು ರೋಡ್​, ಫುಟ್‌ಪಾತ್​ ಮೇಲೆ ಕಸ ಹಾಕಿದರೇ ಚಾಲಕರ ವಿರುದ್ಧ ಠಾಣಾ ವ್ಯಾಪ್ತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಡಿಸಿಎಂ ಡಿಕೆ ಶಿವಕುಮಾರ್​ ಸಿಟಿ ರೌಂಡ್ಸ್​ ವೇಳೆ ಪಾಲಿಕೆ ವಾಹನಗಳ ನಡುವೆ ಅಪಘಾತ

ಇಂದಿರಾ ಕ್ಯಾಂಟೀನ್​ಗೆ ಹೋಗಿದ್ದೆ ಅಲ್ಲಿ ಊಟ ಖಾಲಿ ಆಗಿತ್ತು. ಚೊಕ್ಕಸಂದ್ರದಲ್ಲಿ 5 ರೂ. ಬದಲು 10 ರೂ. ಸಂಗ್ರಹವಾಗಿದೆ. ಬಹಳ ವರ್ಷದಿಂದ ನಡೆಯುತ್ತಿದೆ, ಎಲ್ಲವನ್ನೂ ರಿಪೇರಿ ಮಾಡುತ್ತೇನೆ ಎಂದು ಹೇಳಿದ್ದಾರೆ. ಬಜೆಟ್​ನಲ್ಲಿ ಬೆಂಗಳೂರಿಗೆ ಸರಿಯಾದ ಅನುದಾನ ಸಿಗದ ವಿಚಾರವಾಗಿ ಮಾತನಾಡಿದ ಅವರು ಬಜೆಟ್​ನಲ್ಲಿ ಬೆಂಗಳೂರು ನಗರಕ್ಕೆ ಎಷ್ಟೇ ಅನುದಾನ ನೀಡಲಿ. ನಾವು ರೆವಿನ್ಯೂ ಜನರೇಟ್ ಮಾಡುತ್ತೇವೆ. ಟ್ಯಾಕ್ಸ್ ಕದಿಯುತ್ತಿರುವವರಿಗೆ ಕಡಿವಾಣ ಹಾಕುತ್ತೇವೆ. ಬೆಂಗಳೂರು ನಗರ ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳಿದರು.

ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು ಪ್ರಕರಣ ಬಗ್ಗೆ ಗೃಹ ಸಚಿವರು ಗಮನಿಸುತ್ತಾರೆ. ನ್ಯಾಯಕ್ಕೆ ಆಗ್ರಹಿಸಿ ಜೈನಮುನಿಗಳೊಬ್ಬರು ಉಪವಾಸಕ್ಕೆ ಕುಳಿತಿದ್ದಾರೆ. ಅವರ ಮನವೊಲಿಕೆ ಮಾಡಲು ನಾನು ಹೇಳಿದ್ದೇನೆ. ಎಲ್ಲರಿಗೂ ರಕ್ಷಣೆ ಕೊಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

ಪೆನ್​ಡ್ರೈವ್​ನಲ್ಲಿನ ದಾಖಲೆ ಬಿಡುಗಡೆ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.​ಡಿ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ನಮಗೆ ಯಾವುದೇ ಟೆನ್ಷನ್​ ಇಲ್ಲ. ಹೆಚ್​.ಡಿ.ಕುಮಾರಸ್ವಾಮಿ ಯಾವ ಪೆನ್​ಡ್ರೈವ್​ನಾದರೂ ಇಟ್ಟುಕೊಳ್ಳಲಿ. ಹೆಚ್​.ಡಿ.ಕುಮಾರಸ್ವಾಮಿ ಏನು ಬೇಕಾದರೂ ಮಾಡಿಕೊಳ್ಳಲಿ. ಇದಕ್ಕೆ ನಮಗೆ ಯಾವುದೇ ಅಭ್ಯಂತರವಿಲ್ಲ, ನಮ್ಮ ಸರ್ಕಾರಕ್ಕೆ ಯಾವುದೇ ಟೆನ್ಷನ್ ಇಲ್ಲ. ಮೊದಲು ಕಸ ಗುಡಿಸೋಣ ಬನ್ನಿ ಎಂದು ವ್ಯಂಗ್ಯವಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ