AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷೇತ್ರದ ಜನ ಬೆಂಗಳೂರಿಗೆ ಬರೋದು ಬೇಡ, ಅಹವಾಲು ಆಲಿಸಲು ನಾನೇ ಕನಕಪುರಕ್ಕೆ ಬರುವೆ; ಸಮಯ ನಿಗದಿ ಮಾಡಿದ ಡಿಕೆ ಶಿವಕುಮಾರ್

ಡಿಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ಕ್ಷೇತ್ರದ ಜನರ ಭೇಟಿಗೆ ಮುಂದಾಗಿದ್ದು ಪ್ರತಿ ತಿಂಗಳು 2 ಮತ್ತು 3ನೇ ಶನಿವಾರದಂದು ಜನರ ಸಮಸ್ಯೆ ಆಲಿಸಲಿದ್ದಾರೆ. ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲು ಕ್ಷೇತ್ರದ ಜನರು ಮನವಿಯನ್ನ ಹೊತ್ತು ಬೆಂಗಳೂರಿಗೆ ಬರುತ್ತಿದ್ದರು. ಹೀಗಾಗಿ ಈ ನಿರ್ಧಾರ ಮಾಡಿದ್ದಾರೆ.

ಕ್ಷೇತ್ರದ ಜನ ಬೆಂಗಳೂರಿಗೆ ಬರೋದು ಬೇಡ, ಅಹವಾಲು ಆಲಿಸಲು ನಾನೇ ಕನಕಪುರಕ್ಕೆ ಬರುವೆ; ಸಮಯ ನಿಗದಿ ಮಾಡಿದ ಡಿಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್
TV9 Web
| Edited By: |

Updated on:Aug 08, 2024 | 12:46 PM

Share

ಬೆಂಗಳೂರು, ಆಗಸ್ಟ್​.08: ಪ್ರತಿ ತಿಂಗಳು 2 ಮತ್ತು 3ನೇ ಶನಿವಾರ ಕನಕಪುರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಭೇಟಿ ನೀಡಲಿದ್ದು ಕ್ಷೇತ್ರದ ಜನರ ಸಮಸ್ಯೆ ಆಲಿಸಲಿದ್ದಾರೆ. ಕ್ಷೇತ್ರದ ಜನರು ಭೇಟಿ ಮಾಡಲು ಬೆಂಗಳೂರಿಗೆ ಬರುವುದು ಬೇಡ. ನಾನೇ ಕನಕಪುರಕ್ಕೆ ಬಂದು ನಿಮ್ಮ ಕಷ್ಟ-ಸುಖ ವಿಚಾರಿಸುತ್ತೇನೆ. ಕನಕಪುರಕ್ಕೆ ಬಂದು ಕ್ಷೇತ್ರದ ಜನರ ಅಹವಾಲನ್ನು ಸ್ವೀಕರಿಸುವೆ ಎಂದು ಕನಕಪುರ ಕ್ಷೇತ್ರದ ಜನರಿಗೆ ಡಿ.ಕೆ.ಶಿವಕುಮಾರ್​ ಸಂದೇಶ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತಿ ತಿಂಗಳು 2 ನೇ ಮತ್ತು 3 ನೇ ಶನಿವಾರ ಕನಕಪುರ ವಿಧಾನಸಭೆ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಆ ದಿನಗಳಂದು ಕ್ಷೇತ್ರದ ಜನರ ಸಮಸ್ಯೆ, ಅಹವಾಲು ಆಲಿಸಲಿದ್ದಾರೆ.

ಕನಕಪುರ ಕ್ಷೇತ್ರದ ಜನರು ತಮ್ಮನ್ನು ಭೇಟಿ ಮಾಡಲು ಬೆಂಗಳೂರಿಗೆ ಬರುವುದು ಬೇಡ. ತೊಂದರೆ ತೆಗೆದುಕೊಳ್ಳುವುದು ಬೇಡ. ನಾನೇ ಕನಕಪುರಕ್ಕೆ ಬಂದು ನಿಮ್ಮ ಕಷ್ಟ-ಸುಖ ವಿಚಾರಿಸಿ, ಅಹವಾಲು ಸ್ವೀಕರಿಸಲಿದ್ದೇನೆ ಎಂದು ಡಿ.ಕೆ. ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜಧಾನಿಯಲ್ಲಿ ಯುವ ಮಹಿಳೆಯರು ಹೆಚ್ಚು ನಾಪತ್ತೆ! ಬೆಂಗಳೂರು ಪೊಲೀಸರು ಹೇಳೋದೇನು?

ಆ.9ಕ್ಕೆ ಮೈಸೂರಿನಲ್ಲಿ ಕಾಂಗ್ರೆಸ್ ಜನಾಂದೋಲನ ಸಮಾವೇಶ

ಬಿಜೆಪಿ, ಜೆಡಿಎಸ್ ನಾಯಕರ ಮೈಸೂರು ಪಾದಯಾತ್ರೆಗೆ ಕಾಂಗ್ರೆಸ್​ನಿಂದಲೂ ಕೌಂಟರ್ ನಡೀತಿದೆ. ಈಗಾಗಲೇ ಹಳೇ ಮೈಸೂರು ಭಾಗವನ್ನೇ ಟಾರ್ಗೆಟ್ ಮಾಡಿ ಕಾಂಗ್ರೆಸ್​, ಜನಾಂದೋಲನ ಸಭೆಯನ್ನ ಮಾಡ್ತಿದೆ. ಬಿಜೆಪಿಯ ನಾಯಕರ ಪ್ರತಿಯೊಂದು ಆರೋಪಕ್ಕೂ ಕೌಂಟರ್ ಕೊಡೋ ಕೆಲಸವೂ ಆಗ್ತಿದೆ. ಇನ್ನು ಮೈಸೂರಿಗೆ ಬಿಜೆಪಿ ಪಾದಯಾತ್ರೆ ತಲುಪೋ ಒಂದು ದಿನದ ಮುಂಚೆಯೇ, ಕಾಂಗ್ರೆಸ್​ ಜನಾಂದೋಲನ ಸಮಾವೇಶಕ್ಕೆ ಬಿಗ್ ಪ್ಲ್ಯಾನ್​ ಮಾಡಿಕೊಂಡಿದೆ.

ಆಗಸ್ಟ್​ 9ರಂದು ಮೈಸೂರಿನಲ್ಲಿ ಕಾಂಗ್ರೆಸ್​ ಜನಾಂದೋಲನ ಸಮಾವೇಶಕ್ಕೆ ಪ್ಲ್ಯಾನ್ ಮಾಡಿಕೊಳ್ಳಲಾಗಿದೆ. ಮಹಾರಾಜ ಕಾಲೇಜು ಮೈದಾನದಲ್ಲಿ ಸಮಾವೇಶಕ್ಕೆ ಸಿದ್ಧತೆ ನಡೆಸಲಾಗಿದೆ. ಸಮಾವೇಶದ ಸ್ಥಳಕ್ಕೆ ಭೇಟಿ ನೀಡಿ ಸಿಎಂ ಪರಿಶೀಲನೆ ನಡೆಸಿದ್ದಾರೆ. ಸಮಾವೇಶದ ರೂಪರೇಷಗಳ ಕುರಿತು ಸಿಎಂ ಮಾಹಿತಿ ಪಡೆದ್ದಾರೆ.

ಮೈಸೂರಿನಲ್ಲಿ ಬೃಹತ್ ಸಮಾವೇಶ ನಡೆಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ. ಕಾಂಗ್ರೆಸ್​ನ ಎಲ್ಲಾ ಶಾಸಕರು, ಸಚಿವರಿಗೆ ಭಾಗವಹಿಸಲು ಸೂಚನೆ ನೀಡಲಾಗಿದೆ. ಇಡೀ ಸರ್ಕಾರ, ಪಕ್ಷವೇ ಮೈಸೂರಿನಲ್ಲಿ ಹಾಜರಿರುವಂತೆ ಸೂಚನೆ ನೀಡಲಾಗಿದೆ. ಇನ್ನು ಹೈಕಮಾಂಡ್ ನಾಯಕರಿಂದಲೇ ಸಚಿವರು, ಶಾಸಕರಿಗೆ ಸೂಚನೆ ನೀಡಲಾಗಿದೆ. ಆಗಸ್ಟ್​ 9ರಂದು ಮೈಸೂರಿನಲ್ಲಿ ಬೃಹತ್​ ಸಮಾವೇಶಕ್ಕೆ ಪ್ಲ್ಯಾನ್ ಮಾಡಲಾಗಿದೆ. ಇನ್ನು ಲಕ್ಷಾಂತರ ಜನರನ್ನು ಕರೆತರುವಂತೆ ಶಾಸಕರು, ಸಚಿವರಿಗೆ ಸೂಚನೆ ಕೊಡಲಾಗಿದೆ. ಬಿಜೆಪಿ ಪಾದಯಾತ್ರೆ ಮುಕ್ತಾಯವಾಗುವ ಒಂದು ದಿನ ಮೊದಲೇ ಕಾಂಗ್ರೆಸ್​ ಸಮಾವೇಶ ಮಾಡ್ತಿದೆ. ಸಮಾವೇಶದಲ್ಲಿ ಬಿಜೆಪಿ ವಿರುದ್ಧ ಚಾರ್ಜ್​ಶೀಟ್ ಬಿಡುಗಡೆ ಮಾಡೋಕೆ ಕಾಂಗ್ರೆಸ್​ ಸಿದ್ಧತೆ ಮಾಡಿಕೊಂಡಿದೆ. ಬಿಜೆಪಿ ಸರ್ಕಾರ ಅವಧಿಯ ಹಗರಣಗಳ ಚಾರ್ಜ್​ಶೀಟ್ ಪುಸ್ತಕವನ್ನ ರೆಡಿ ಮಾಡಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:42 pm, Thu, 8 August 24

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು