AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಟ್ರಾಫಿಕ್​ ಸಮಸ್ಯೆ ನಿವಾರಣೆಗೆ ಹೊಸ ಪ್ಲ್ಯಾನ್​, ಟನಲ್ ನಿರ್ಮಾಣಕ್ಕೆ ನಿರ್ಧಾರ: ಡಿಸಿಎಂ ಡಿಕೆ ಶಿವಕುಮಾರ್

Bengaluru News: ರಾಜ್ಯ ರಾಜಧಾನಿ, ಸಿಲಿಕಾನ್​ ಸಿಟಿಯಲ್ಲಿ ಬೆಂಗಳೂರು ಮಹಾನಗರದಲ್ಲಿ ಟ್ರಾಫಿಕ್​ ಸಮಸ್ಯೆ ಬಗೆಹರಿಸಬೇಕಿದೆ. ಆದ್ದರಿಂದ ಟನಲ್ ನಿರ್ಮಾಣಕ್ಕೆ ನಿರ್ಧಾರ ಮಾಡಿದ್ದೇವೆ. ಸದ್ಯದಲ್ಲೇ ಟನಲ್ ನಿರ್ಮಾಣಕ್ಕೆ ಟೆಂಡರ್ ಕರೆಯಲಿದ್ದೇವೆ. ಆಸಕ್ತಿಯಿರುವವರು ಟೆಂಡರ್​​ನಲ್ಲಿ ಭಾಗಿಯಾಗಬಹುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು ಟ್ರಾಫಿಕ್​ ಸಮಸ್ಯೆ ನಿವಾರಣೆಗೆ ಹೊಸ ಪ್ಲ್ಯಾನ್​, ಟನಲ್ ನಿರ್ಮಾಣಕ್ಕೆ ನಿರ್ಧಾರ: ಡಿಸಿಎಂ ಡಿಕೆ ಶಿವಕುಮಾರ್
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
Follow us
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ

Updated on: Aug 07, 2023 | 7:22 PM

ಬೆಂಗಳೂರು, ಆಗಸ್ಟ್​ 07: ರಾಜ್ಯ ರಾಜಧಾನಿ ಬೆಂಗಳೂರು ಮಹಾನಗರದಲ್ಲಿ ಟ್ರಾಫಿಕ್​ ಸಮಸ್ಯೆ ಬಗೆಹರಿಸಬೇಕಿದೆ. ಆದ್ದರಿಂದ ಟನಲ್ ನಿರ್ಮಾಣಕ್ಕೆ ನಿರ್ಧಾರ ಮಾಡಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar​) ಹೇಳಿದ್ದಾರೆ. ನಗರದ ಸಿಎಂ ಸಿದ್ಧರಾಮಯ್ಯ ಗೃಹಕಚೇರಿ ಕೃಷ್ಣಾ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಟನಲ್ ನಿರ್ಮಾಣ ಮೂಲಕ ಟ್ರಾಫಿಕ್ ಪ್ರಮಾಣ ಇಳಿಕೆಗೆ ಕ್ರಮ ಕೈಗೊಳ್ಳಲಾಗುವುದು. ಟನಲ್ ನಿರ್ಮಾಣಕ್ಕೆ ಟೆಂಡರ್ ಕರೆಯಲಿದ್ದೇವೆ. ಆಸಕ್ತಿಯಿರುವವರು ಟೆಂಡರ್​​ನಲ್ಲಿ ಭಾಗಿಯಾಗಬಹುದು ಎಂದು ಹೇಳಿದ್ದಾರೆ.

ಬಿಬಿಎಂಪಿ ಅಕ್ರಮಗಳ ತನಿಖೆ: ನಾನು ಎಸ್​ಐಟಿ ರಚನೆ ಮಾಡಿಲ್ಲ

ಬಿಬಿಎಂಪಿ ಅಕ್ರಮಗಳ ತನಿಖೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ನಾನು ಎಸ್​ಐಟಿ ರಚನೆ ಮಾಡಿಲ್ಲ. ಈಗ ಕೆಲವೊಂದು ಕೆಲಸಗಳು ಬೆಂಗಳೂರಿನಲ್ಲಿ ಆಗಿವೆ. ಯಾವ ಕೆಲಸ, ಯಾವಾಗ ಟೆಂಡರ್ ಆಯ್ತು, ಯಾರು ಟೆಂಡರ್ ಕರೆದಿದ್ದರು ಹೀಗಿ ಸಾಕಷ್ಟು ಗೊಂದಲಗಳಿವೆ.

ಇದನ್ನೂ ಓದಿ: ಬಿಬಿಎಂಪಿ ವ್ಯಾಪ್ತಿಯ ಕಾಮಗಾರಿ ಅಕ್ರಮಗಳ ತನಿಖೆಗೆ ಪ್ರತ್ಯೇಕ ಸಮಿತಿ ರಚನೆ

ಕೇವಲ ಮೂರು ದಿನಗಳ ಹಿಂದೆ ಟೆಂಡರ್​ ಕರೆದು ಪಾಸ್​​ ಮಾಡಲಾಗಿದೆ. ಎರಡು ಕೋಟಿ ಕೆಲಸಕ್ಕೆ 1.99 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. 1 ಲಕ್ಷ ರೂ. ಮಾತ್ರ ಪೆಂಡಿಂಗ್ ಇಟ್ಟಿದ್ದಾರೆ. ಈ ತರಹ 25 ಕೇಸ್ ಇದ್ದಾವೆ. ಯಾಕೆ ಹೀಗೆ ಇಡಬೇಕು ಎಂದರು.

ಕಾಂಗ್ರೆಸ್ ಹಾಗೂ ಬಿಜೆಪಿ ಅವಧಿಯಲ್ಲಿನ ಕಾಮಗಾರಿ ಬಾಕಿ ಇದೆ

ರಾಜ್ಯದ ಕೆಲ ಜಿಲ್ಲೆಗಳ ಬಗ್ಗೆ ಪ್ರತಿ ಕ್ಷೇತ್ರದ ಬಗ್ಗೆ ಚರ್ಚಿಸುತ್ತಿದ್ದೇವೆ. ಶಾಸಕರ ಸಮಸ್ಯೆಗಳನ್ನು ಆಲಿಸುತ್ತಿದ್ದೇವೆ, ಮಾರ್ಗದರ್ಶನ ಮಾಡುತ್ತಿದ್ದೇವೆ. ಕ್ಷೇತ್ರದಲ್ಲಿ ಏನೆಲ್ಲಾ ಆಗಬೇಕು ಅಂತ ಮಾರ್ಗದರ್ಶನ ಮಾಡಬೇಕಿದೆ. ಹೀಗಾಗಿ ಸತತ 1 ವಾರಗಳ ಕಾಲ ಸಭೆ ನಡೆಯಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಬಾರ್ ಕೌನ್ಸಿಲ್ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಭಾಗವಹಿಸುವುದಕ್ಕೆ ಸುರೇಶ್ ಕುಮಾರ್ ಆಕ್ಷೇಪ; ಡಿಸಿಎಂ ತಿರುಗೇಟು

ನಮ್ಮ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತು ಕೊಟ್ಟಿದ್ದೆವು. ಹಾಗಾಗಿ ಮೊದಲು ಶಾಸಕರ ಜೊತೆ ಸಭೆ ಕರೆದಿದ್ದೇವೆ. ಕಾಂಗ್ರೆಸ್ ಹಾಗೂ ಬಿಜೆಪಿ ಅವಧಿಯಲ್ಲಿನ ಕಾಮಗಾರಿ ಬಾಕಿ ಇದೆ. ಪ್ರತಿ ವಾರ್ಡ್​​ನಲ್ಲಿ ಕಾಮಗಾರಿ ನಡೆದಿದೆ, ಅದರಂತೆ ತನಿಖೆ ನಡೆಯಲಿದೆ ಎಂದು ಹೇಳಿದರು.

ಶಾಸಕ ಸುರೇಶ್‌ ಕುಮಾರ್‌ಗೆ ಡಿ.ಕೆ.ಶಿವಕುಮಾರ್ ತಿರುಗೇಟು

ಬಾರ್ ಕೌನ್ಸಿಲ್ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿರುವುದಕ್ಕೆ ಆಕ್ಷೇಪ ವಿಚಾರವಾಗಿ ಮಾತನಾಡಿದ ಅವರು, ಮಾಜಿ ಮಾಜಿ ಬಿ.ಎಸ್​.ಯಡಿಯೂರಪ್ಪ ವಿರುದ್ಧ ಕೇಸ್​ ಇರಲಿಲ್ವಾ? ಬಾರ್ ಕೌನ್ಸಿಲ್ ಕಾರ್ಯಕ್ರಮದಲ್ಲಿ ಬಿಎಸ್​ವೈ ಭಾಗಿಯಾಗಿರಲಿಲ್ವಾ? ನಾನು ಯಾರಿಗೂ ಮುಜುಗರ ಮಾಡುತ್ತಿಲ್ಲ ಎಂದು ​​ಪತ್ರ ಬರೆದ ಶಾಸಕ ಸುರೇಶ್‌ ಕುಮಾರ್‌ಗೆ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?