AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕೋರ್ಟ್​ ಆದೇಶದಂತೆಯೇ ಬಿಬಿಎಂಪಿ ಚುನಾವಣೆ; ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಸಭೆ ನಡೆಸಿದ ಬಳಿಕ ಡಿಕೆ ಶಿವಕುಮಾರ್

ಕರ್ನಾಟಕ ಹೈಕೋರ್ಟ್ ಆದೇಶದ ಪ್ರಕಾರ ಬಿಬಿಎಂಪಿ ಚುನಾವಣೆ ನಡೆಸಲಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ಹೈಕೋರ್ಟ್​ ಆದೇಶದಂತೆಯೇ ಬಿಬಿಎಂಪಿ ಚುನಾವಣೆ; ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಸಭೆ ನಡೆಸಿದ ಬಳಿಕ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Anil Kalkere
| Updated By: Ganapathi Sharma|

Updated on: Jul 03, 2023 | 10:11 PM

Share

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಆದೇಶದ ಪ್ರಕಾರ ಬಿಬಿಎಂಪಿ ಚುನಾವಣೆ (BBMP Elections) ನಡೆಸಲಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಸೋಮವಾರ ಸಂಜೆ ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಬೆಂಗಳೂರಿನ ಬಿಎಂಆರ್​ಡಿಎ ಕಚೇರಿಯಲ್ಲಿ ಶಾಸಕರು, ಅಧಿಕಾರಿಗಳು ಮತ್ತು ಸಚಿವರ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ನ್ಯಾಯಾಲಯದ ಆದೇಶದಂತೆಯೇ ಬಿಬಿಎಂಪಿ ಚುನಾವಣೆ ನಡೆಸಲಿದ್ದೇವೆ. ಗ್ಯಾರಂಟಿ ಜಾರಿ ವಿಚಾರವಾಗಿ ಬಿಜೆಪಿ ಪ್ರತಿಭಟನೆಯನ್ನು ಸ್ವಾಗತಿಸುತ್ತೇನೆ. ನಮ್ಮ ಯೋಜನೆಗಳಿಗೆ ಬಿಜೆಪಿಯವರು ಒಳ್ಳೆ ಪ್ರಚಾರ ನೀಡುತ್ತಿದ್ದಾರೆ ಎಂದು ಹೇಳಿದರು.

ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಡಿಕೆ ಶಿವಕುಮಾರ್ ನಡೆಸಿದ ಸಭೆಯಲ್ಲಿ ಬೆಂಗಳೂರು ಶಾಸಕರು, ಅಧಿಕಾರಿಗಳು, ಸಚಿವರಾದ ರಾಮಲಿಂಗಾರೆಡ್ಡಿ, ಜಮೀರ್, ಕೆ.ಜೆ.ಜಾರ್ಜ್, ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್, ಸಂಸದ ಡಿ.ಕೆ.ಸುರೇಶ್, ಶಾಸಕ ರಿಜ್ವಾನ್ ಅರ್ಷದ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್​ ಗಿರಿನಾಥ್​ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

ಈ ಹಿಂದೆಯೂ ಡಿಕೆ ಶಿವಕುಮಾರ್ ಅವರು ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಹಲವು ಸಭೆಗಳನ್ನು ನಡೆಸಿದ್ದು, ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Bengaluru Rains: ಬೆಂಗಳೂರಿನ ಹಲವೆಡೆ ಬಿರುಗಾಳಿ ಸಹಿತ ಮಳೆ; ಬನ್ನೇರುಘಟ್ಟ ಪಾರ್ಕ್​ನಲ್ಲಿ ಪ್ರವಾಸಿಗರ ಪರದಾಟ

ಬಿಬಿಎಂಪಿ ವಾರ್ಡ್​​ಗಳ ಪುನರ್ ವಿಂಗಡಣೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು, ಆ ನಂತರ ಚುನಾವಣೆ ನಡೆಯಲಿದೆ. ವಾರ್ಡ್ ಪುನರ್ ವಿಂಗಡಣೆ ವಿಚಾರವಾಗಿ ಇತ್ತೀಚೆಗೆ ಹೈಕೋರ್ಟ್ ಆದೇಶ ನೀಡಿದ್ದು, ಸರ್ಕಾರಕ್ಕೆ 12 ವಾರಗಳ ಕಾಲಾವಕಾಶ ನೀಡಿದೆ. ಅದರಂತೆ ವಾರ್ಡ್ ಪುನರ್ ವಿಂಗಡಣೆ ಕುರಿತು ಪರಿಶೀಲನೆ ನಡೆಸಲು ಸಮಿತಿಯೊಂದನ್ನು ಸರ್ಕಾರ ರಚಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

IND vs ENG: ಇಂಡಿಯಾ ವಿರುದ್ಧ ಇಂಗ್ಲೆಂಡ್ ಮೋಸದಾಟ... ಆದ್ರೂ ಗೆಲ್ಲಲಿಲ್ಲ..
IND vs ENG: ಇಂಡಿಯಾ ವಿರುದ್ಧ ಇಂಗ್ಲೆಂಡ್ ಮೋಸದಾಟ... ಆದ್ರೂ ಗೆಲ್ಲಲಿಲ್ಲ..
ಟೀಮ್ ಇಂಡಿಯಾ ಆಟಗಾರರ ಶತಕ ತಪ್ಪಿಸಲು ಮುಂದಾಗಿದ್ದ ಸ್ಟೋಕ್ಸ್
ಟೀಮ್ ಇಂಡಿಯಾ ಆಟಗಾರರ ಶತಕ ತಪ್ಪಿಸಲು ಮುಂದಾಗಿದ್ದ ಸ್ಟೋಕ್ಸ್
ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್