AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಸಾರಿಗೆ ಒಕ್ಕೂಟಗಳು ಬಂದ್​ಗೆ ಕರೆ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?

ವಿವಿಧ ಬೇಡಿಕೆಗಳನ್ನು ಈಡೇರಿಸಲು ನೀಡಿದ್ದ ಗಡುವನ್ನು ಕ್ಯಾರೇ ಎನ್ನದ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಖಾಸಗಿ ಸಾರಿಗೆ ಒಕ್ಕೂಟಗಳು ಬಂದ್​ಗೆ ಕರೆ ನೀಡಿವೆ. ಈ ವಿಚಾರವಾಗಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಕೆಲವು ಜಿಲ್ಲೆಗಳಲ್ಲಿ ಸರ್ಕಾರಿ ಬಸ್​​ಗಳೇ ಇಲ್ಲ, ಖಾಸಗಿ ಬಸ್​​ಗಳೇ ಇವೆ. ಇಂತಹ ಕಡೆಗಳಲ್ಲಿ ಏನಾದರೂ ಉಪಾಯ ಮಾಡುತ್ತೇವೆ ಎಂದರು.

ಖಾಸಗಿ ಸಾರಿಗೆ ಒಕ್ಕೂಟಗಳು ಬಂದ್​ಗೆ ಕರೆ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಡಿಕೆ ಶಿವಕುಮಾರ್
Anil Kalkere
| Edited By: Rakesh Nayak Manchi|

Updated on:Sep 02, 2023 | 11:56 AM

Share

ಬೆಂಗಳೂರು, ಸೆ.2: ​​ವಿವಿಧ ಬೇಡಿಕೆಗಳನ್ನು ಈಡೇರಿಸಲು ನೀಡಿದ್ದ ಗಡುವನ್ನು ಕ್ಯಾರೇ ಎನ್ನದ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಖಾಸಗಿ ಸಾರಿಗೆ ಒಕ್ಕೂಟಗಳು ಬಂದ್​ಗೆ ಕರೆ ನೀಡಿವೆ. ಈ ವಿಚಾರವಾಗಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ (D.K.Shivakumar), ಕೆಲವು ಜಿಲ್ಲೆಗಳಲ್ಲಿ ಸರ್ಕಾರಿ ಬಸ್​​ಗಳೇ ಇಲ್ಲ, ಖಾಸಗಿ ಬಸ್​​ಗಳೇ ಇವೆ. ಇಂತಹ ಕಡೆಗಳಲ್ಲಿ ಏನಾದರೂ ಉಪಾಯ ಮಾಡುತ್ತೇವೆ ಎಂದರು.

ಖಾಸಗಿ ಸಾರಿಗೆ ಒಕ್ಕೂಟಗಳು ಬಂದ್​ಗೆ ಕರೆ ನೀಡಿದ ವಿಚಾರವಾಗಿ ನಗರದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಖಾಸಗಿ ಸಾರಿಗೆಯಲ್ಲಿ ಯಾರೂ ಹೋಗುತ್ತಿಲ್ಲ ಎಂದು ಗೊತ್ತಿದೆ. ಅದಕ್ಕೆ ಒಂದು ಉಪಾಯ ಕಂಡು ಹಿಡಿಯಬೇಕು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಜೊತೆ ಮಾತನಾಡುತ್ತೇನೆ. ಕೆಲವು ಜಿಲ್ಲೆಗಳಲ್ಲಿ ಸರ್ಕಾರಿ ಬಸ್​​ಗಳೇ ಇಲ್ಲ, ಖಾಸಗಿ ಬಸ್​​ಗಳೇ ಇವೆ. ಅದಕ್ಕೆ ಏನಾದರೂ ಉಪಾಯ ಮಾಡುತ್ತೇವೆ ಎಂದರು.

ಇದನ್ನೂ ಓದಿ: Cauvery Dispute: ವಿಪಕ್ಷದವರು ಹೇಳಿದ ಪ್ರಕಾರ ನೀರು ನಿಲ್ಲಿಸಲು ಆಗುವುದಿಲ್ಲ: ಡಿಕೆ ಶಿವಕುಮಾರ್

ಸಚಿವರ ವಿರುದ್ಧ ಕಾಂಗ್ರೆಸ್​ನ ಕೆಲ ಶಾಸಕರ ಅಸಮಾಧಾನ ಹೊರಹಾಕಿದ ವಿಚಾರವಾಗಿ ಮಾತನಾಡಿದ ಡಿಕೆ ಶಿವಕುಮಾರ್, ಯಾವ ಶಾಸಕನೂ ಅಸಮಾಧಾನ ಹೊರಹಾಕಿಲ್ಲ. ಎಲ್ಲ ನೀವೇ ಕ್ರಿಯೆಟ್ ಮಾಡುತ್ತಾ ಇದ್ದೀರಿ. ನಮ್ಮ ಪಕ್ಷದಲ್ಲಿ ಶಿಸ್ತು ಇದೆ. ಶಾಸಕರು ತಮ್ಮ ನೋವನ್ನು ತೋಡಿಕೊಳ್ಳಬಾರದಾ? ಅದರಲ್ಲಿ ತಪ್ಪೇನಿದೆ? ಯಾವ ತಪ್ಪೂ ಇಲ್ಲ ಎಂದರು.

ಆದಿತ್ಯ ಎಲ್-1 ಉಡ್ಡಯನ: ಇಸ್ರೋಗೆ ಶುಭ ಹಾರೈಸಿದ ಡಿಕೆ ಶಿವಕುಮಾರ್

ಇಂದು ಇಸ್ರೋದಿಂದ ಆದಿತ್ಯ ಎಲ್-1 ಉಡಾವಣೆ ಹಿನ್ನೆಲೆ ಇಸ್ರೋಗೆ ಡಿಸಿಎಂ ಡಿಕೆ ಶಿವಕುಮಾರ್ ಶುಭಹಾರೈಸಿದರು. ಕರ್ನಾಟಕದಿಂದ ಭಾರತಕ್ಕೆ ಗೌರವ ತರುವ ಕೆಲಸ ನಮ್ಮ ಇಸ್ರೋ ಮಾಡುತ್ತಿದೆ. ದೊಡ್ಡ ಪ್ರಯೋಗ, ಪ್ರಯತ್ನ, ಸಾಹಸ ಎಲ್ಲಾವೂ ಕೂಡ ಮಾಡುತ್ತಿದೆ. ಯಶಸ್ಸು ಸಿಗಲಿ ಎಂದು ನಾನು ಶುಭ ಹಾರೈಸುತ್ತೇನೆ ಎಂದರು.

ಇಡೀ ದೇಶದ ಜನ ಇಸ್ರೋ ಸಾಧನೆ ಯಶಸ್ವಿಗೆ ಪ್ರಾರ್ಥನೆ ಮಾಡುತ್ತಿದ್ದಾರೆ. ಇಡೀ ವಿಶ್ವದಲ್ಲೇ ನಮ್ಮ ಇಸ್ರೋ ಬಹಳ ಶ್ರಮದಿಂದ, ಸಂಪೂರ್ಣವಾದ ಜ್ಞಾನ ಭಂಡಾರದಿಂದ ಹಾಗೂ ಅನುಭವದಿಂದ ಒಳ್ಳೆ ಕೆಲಸ ಮಾಡುತ್ತಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:52 am, Sat, 2 September 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ