AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ.3ರಿಂದ ಡಿಕೆ ಶಿವಕುಮಾರ್ ಜನಸ್ಪಂದನಾ ಕಾರ್ಯಕ್ರಮ, ಸ್ಥಳದಲ್ಲೇ ಸಮಸ್ಯೆಗೆ ಪರಿಹಾರ

ಜನಸ್ಪಂದನಾ ಕಾರ್ಯಕ್ರಮದಲ್ಲಿ ಜನರು ತಮ್ಮ ಸಮಸ್ಯೆ ಹೇಳಬಹುದು, ಯಾರೂ ಕೂಡ ನಮ್ಮ ಮನೆ ಬಾಗಿಲಿಗೆ ಬಂದು ನಿಲ್ಲಬಾರದು. ಮೊದಲು ಮಹದೇವಪುರದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯುತ್ತದೆ. ಬಳಿಕ ಕೆ.ಆರ್.ಪುರಂ, ಶಿವಾಜಿನಗರ, ಹೆಬ್ಬಾಳ, ಪುಲಕೇಶಿನಗರ, ಯಲಹಂಕ, ದಾಸರಹಳ್ಳಿ, ಬ್ಯಾಟರಾಯನಪುರ, ಗಾಂಧಿನಗರ, ಚಾಮರಾಜಪೇಟೆಯಲ್ಲಿ ನಡೆಯುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್​ ಹೇಳಿದರು.

ಜ.3ರಿಂದ ಡಿಕೆ ಶಿವಕುಮಾರ್ ಜನಸ್ಪಂದನಾ ಕಾರ್ಯಕ್ರಮ, ಸ್ಥಳದಲ್ಲೇ ಸಮಸ್ಯೆಗೆ ಪರಿಹಾರ
ಡಿಕೆ ಶಿವಕುಮಾರ್​ ಜನಸ್ಪಂದನಾ ಕಾರ್ಯಕ್ರಮ
Vinayak Hanamant Gurav
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 29, 2023 | 9:25 PM

Share

ಬೆಂಗಳೂರು, ಡಿ.29: ಜ.3 ರಿಂದ ಬೆಂಗಳೂರಿನಲ್ಲಿ ಜನಸ್ಪಂದನಾ(jana spandana) ಕಾರ್ಯಕ್ರಮ ನಡೆಯಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌(DK Shivakumar) ಹೇಳಿದರು. ಬಿಬಿಎಂಪಿ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದ ಅವರು ‘ಸುಮಾರು 10 ದಿನ ಜನಸ್ಪಂದನಾ ಕಾರ್ಯಕ್ರಮ ನಡೆಯಲಿದೆ. ನಾನು, ಸಂಬಂಧಪಟ್ಟ ಶಾಸಕರು, ಅಧಿಕಾರಿಗಳು ಭಾಗಿಯಾಗಲಿದ್ದೇವೆ ಎಂದರು.

ಜನರು ನಮ್ಮ ಮನೆ ಬಾಗಿಲಿಗೆ ಬಂದು ನಿಲ್ಲಬಾರದು

ಜನಸ್ಪಂದನಾ ಕಾರ್ಯಕ್ರಮದಲ್ಲಿ ಜನರು ತಮ್ಮ ಸಮಸ್ಯೆ ಹೇಳಬಹುದು, ಯಾರೂ ಕೂಡ ನಮ್ಮ ಮನೆ ಬಾಗಿಲಿಗೆ ಬಂದು ನಿಲ್ಲಬಾರದು. ಮೊದಲು ಮಹದೇವಪುರದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯುತ್ತದೆ. ಬಳಿಕ ಕೆ.ಆರ್.ಪುರಂ, ಶಿವಾಜಿನಗರ, ಹೆಬ್ಬಾಳ, ಪುಲಕೇಶಿನಗರ, ಯಲಹಂಕ, ದಾಸರಹಳ್ಳಿ, ಬ್ಯಾಟರಾಯನಪುರ, ಗಾಂಧಿನಗರ, ಚಾಮರಾಜಪೇಟೆಯಲ್ಲಿ ನಡೆಯುತ್ತೆ. ಇನ್ನು ಈ ಜನಸ್ಪಂದನಾ ಕಾರ್ಯಕ್ರಮಗಳು ಬಹುತೇಕ ಮೈದಾನಗಳಲ್ಲಿ  ನಡೆಯಲಿದೆ ಎಂದರು.

ಇದನ್ನೂ ಓದಿ:Siddaramaiah: ಒತ್ತವರಿ ಮಾಡಿಕೊಂಡ ವೃದ್ಧೆಯ ಜಮೀನು ಬಿಡಿಸಿಕೊಡುವಂತೆ ರಾಮನಗರ ಡಿಸಿಗೆ ಸೂಚಿಸಿದ ಸಿದ್ದರಾಮಯ್ಯ

ಬೆಂಗಳೂರಿಗೆ ಸಂಬಂಧಿಸಿದ ಯಾವುದೇ ದೂರು ನೀಡಿದ್ರೂ ಪರಿಗಣಿಸಲಾಗುವುದು

ಬೆಂಗಳೂರಿಗೆ ಸಂಬಂಧಿಸಿದ ಯಾವುದೇ ದೂರು ನೀಡಿದ್ರೂ ಪರಿಗಣಿಸ್ತೇವೆ, ಪೊಲೀಸ್, ಕಂದಾಯ, ಬೆಸ್ಕಾಂ, BWSSB ಸೇರಿ ಎಲ್ಲಾ ಇಲಾಖೆ ಸಂಬಂಧಿತ ದೂರು ಸ್ವೀಕರಿಸಲಾಗುತ್ತದೆ. ಜೊತೆಗೆ ಅಲ್ಲಿಯೇ  ಪರಿಹಾರ ನೀಡುತ್ತೇವೆ ಎಂದಿದ್ದಾರೆ. ನಂತರ ಬೆಂಗಳೂರಿನಲ್ಲಿ ತೆರಿಗೆ ಕಟ್ಟದಿದ್ರೆ, ಬಿಡಲ್ಲ. ಎಲ್ಲಾ ಕಡೆ ಬೀಗ ಹಾಕುತ್ತೇವೆ. ಟ್ಯಾಕ್ಸ್‌ನಿಂದಲೇ ಹಣ ಸಂಗ್ರಹ ಆಗುವುದು. ಅಭಿವೃದ್ಧಿಗೆ ಟ್ಯಾಕ್ಸ್ ಮೂಲ, ಯಾವುದೇ ಟ್ಯಾಕ್ಸ್ ಬಿಡುವ ಪ್ರಶ್ನೆಯೇ ಇಲ್ಲ ಎಂದರು. ಜೊತೆಗೆ ಕನ್ನಡದ ಪರ ಹೋರಾಟಗಳಿಗೆ ನಾವು ಸ್ಪಂದಿಸುತ್ತೇವೆ, ಆದ್ರೆ ಯಾರದೊ ಆಸ್ತಿಪಾಸ್ತಿ ಹಾಳು ಮಾಡುವುದು ಸರಿಯಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್​ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!