AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ.3ರಿಂದ ಡಿಕೆ ಶಿವಕುಮಾರ್ ಜನಸ್ಪಂದನಾ ಕಾರ್ಯಕ್ರಮ, ಸ್ಥಳದಲ್ಲೇ ಸಮಸ್ಯೆಗೆ ಪರಿಹಾರ

ಜನಸ್ಪಂದನಾ ಕಾರ್ಯಕ್ರಮದಲ್ಲಿ ಜನರು ತಮ್ಮ ಸಮಸ್ಯೆ ಹೇಳಬಹುದು, ಯಾರೂ ಕೂಡ ನಮ್ಮ ಮನೆ ಬಾಗಿಲಿಗೆ ಬಂದು ನಿಲ್ಲಬಾರದು. ಮೊದಲು ಮಹದೇವಪುರದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯುತ್ತದೆ. ಬಳಿಕ ಕೆ.ಆರ್.ಪುರಂ, ಶಿವಾಜಿನಗರ, ಹೆಬ್ಬಾಳ, ಪುಲಕೇಶಿನಗರ, ಯಲಹಂಕ, ದಾಸರಹಳ್ಳಿ, ಬ್ಯಾಟರಾಯನಪುರ, ಗಾಂಧಿನಗರ, ಚಾಮರಾಜಪೇಟೆಯಲ್ಲಿ ನಡೆಯುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್​ ಹೇಳಿದರು.

ಜ.3ರಿಂದ ಡಿಕೆ ಶಿವಕುಮಾರ್ ಜನಸ್ಪಂದನಾ ಕಾರ್ಯಕ್ರಮ, ಸ್ಥಳದಲ್ಲೇ ಸಮಸ್ಯೆಗೆ ಪರಿಹಾರ
ಡಿಕೆ ಶಿವಕುಮಾರ್​ ಜನಸ್ಪಂದನಾ ಕಾರ್ಯಕ್ರಮ
Vinayak Hanamant Gurav
| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 29, 2023 | 9:25 PM

Share

ಬೆಂಗಳೂರು, ಡಿ.29: ಜ.3 ರಿಂದ ಬೆಂಗಳೂರಿನಲ್ಲಿ ಜನಸ್ಪಂದನಾ(jana spandana) ಕಾರ್ಯಕ್ರಮ ನಡೆಯಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌(DK Shivakumar) ಹೇಳಿದರು. ಬಿಬಿಎಂಪಿ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದ ಅವರು ‘ಸುಮಾರು 10 ದಿನ ಜನಸ್ಪಂದನಾ ಕಾರ್ಯಕ್ರಮ ನಡೆಯಲಿದೆ. ನಾನು, ಸಂಬಂಧಪಟ್ಟ ಶಾಸಕರು, ಅಧಿಕಾರಿಗಳು ಭಾಗಿಯಾಗಲಿದ್ದೇವೆ ಎಂದರು.

ಜನರು ನಮ್ಮ ಮನೆ ಬಾಗಿಲಿಗೆ ಬಂದು ನಿಲ್ಲಬಾರದು

ಜನಸ್ಪಂದನಾ ಕಾರ್ಯಕ್ರಮದಲ್ಲಿ ಜನರು ತಮ್ಮ ಸಮಸ್ಯೆ ಹೇಳಬಹುದು, ಯಾರೂ ಕೂಡ ನಮ್ಮ ಮನೆ ಬಾಗಿಲಿಗೆ ಬಂದು ನಿಲ್ಲಬಾರದು. ಮೊದಲು ಮಹದೇವಪುರದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯುತ್ತದೆ. ಬಳಿಕ ಕೆ.ಆರ್.ಪುರಂ, ಶಿವಾಜಿನಗರ, ಹೆಬ್ಬಾಳ, ಪುಲಕೇಶಿನಗರ, ಯಲಹಂಕ, ದಾಸರಹಳ್ಳಿ, ಬ್ಯಾಟರಾಯನಪುರ, ಗಾಂಧಿನಗರ, ಚಾಮರಾಜಪೇಟೆಯಲ್ಲಿ ನಡೆಯುತ್ತೆ. ಇನ್ನು ಈ ಜನಸ್ಪಂದನಾ ಕಾರ್ಯಕ್ರಮಗಳು ಬಹುತೇಕ ಮೈದಾನಗಳಲ್ಲಿ  ನಡೆಯಲಿದೆ ಎಂದರು.

ಇದನ್ನೂ ಓದಿ:Siddaramaiah: ಒತ್ತವರಿ ಮಾಡಿಕೊಂಡ ವೃದ್ಧೆಯ ಜಮೀನು ಬಿಡಿಸಿಕೊಡುವಂತೆ ರಾಮನಗರ ಡಿಸಿಗೆ ಸೂಚಿಸಿದ ಸಿದ್ದರಾಮಯ್ಯ

ಬೆಂಗಳೂರಿಗೆ ಸಂಬಂಧಿಸಿದ ಯಾವುದೇ ದೂರು ನೀಡಿದ್ರೂ ಪರಿಗಣಿಸಲಾಗುವುದು

ಬೆಂಗಳೂರಿಗೆ ಸಂಬಂಧಿಸಿದ ಯಾವುದೇ ದೂರು ನೀಡಿದ್ರೂ ಪರಿಗಣಿಸ್ತೇವೆ, ಪೊಲೀಸ್, ಕಂದಾಯ, ಬೆಸ್ಕಾಂ, BWSSB ಸೇರಿ ಎಲ್ಲಾ ಇಲಾಖೆ ಸಂಬಂಧಿತ ದೂರು ಸ್ವೀಕರಿಸಲಾಗುತ್ತದೆ. ಜೊತೆಗೆ ಅಲ್ಲಿಯೇ  ಪರಿಹಾರ ನೀಡುತ್ತೇವೆ ಎಂದಿದ್ದಾರೆ. ನಂತರ ಬೆಂಗಳೂರಿನಲ್ಲಿ ತೆರಿಗೆ ಕಟ್ಟದಿದ್ರೆ, ಬಿಡಲ್ಲ. ಎಲ್ಲಾ ಕಡೆ ಬೀಗ ಹಾಕುತ್ತೇವೆ. ಟ್ಯಾಕ್ಸ್‌ನಿಂದಲೇ ಹಣ ಸಂಗ್ರಹ ಆಗುವುದು. ಅಭಿವೃದ್ಧಿಗೆ ಟ್ಯಾಕ್ಸ್ ಮೂಲ, ಯಾವುದೇ ಟ್ಯಾಕ್ಸ್ ಬಿಡುವ ಪ್ರಶ್ನೆಯೇ ಇಲ್ಲ ಎಂದರು. ಜೊತೆಗೆ ಕನ್ನಡದ ಪರ ಹೋರಾಟಗಳಿಗೆ ನಾವು ಸ್ಪಂದಿಸುತ್ತೇವೆ, ಆದ್ರೆ ಯಾರದೊ ಆಸ್ತಿಪಾಸ್ತಿ ಹಾಳು ಮಾಡುವುದು ಸರಿಯಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್​ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vinayak Hanamant Gurav
Vinayak Hanamant Gurav
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು