AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DK Shivakumar: ಸಿಎಂ ಕೋರಿಕೆ ಮೇರೆಗೆ ವೇಳಾಪಟ್ಟಿ ಬದಲಾವಣೆ; ಶಕ್ತಿ ಯೋಜನೆ ಉದ್ಘಾಟನೆಗೆ ಹಾಜರಾಗಲಿದ್ದಾರೆ ಡಿಕೆ ಶಿವಕುಮಾರ್

ಸಿಎಂ ಸಿದ್ದರಾಮಯ್ಯನವರ ಕೋರಿಕೆಯ ಮೇರೆಗೆ ತಮ್ಮ ಉಜ್ಜೈನಿ ಪ್ರವಾಸದಲ್ಲಿ ಬದಲಾವಣೆ ಮಾಡಿಕೊಂಡ ಡಿಕೆ ಶಿವಕುಮಾರ್ ಶಕ್ತಿ ಯೋಜನೆ ಉದ್ಘಾಟನಾ ಕಾರ್ಯಕ್ರಮಕ್ಕೆ ಹಾಜರಾಗಲಿದ್ದಾರೆ.

ಆಯೇಷಾ ಬಾನು
|

Updated on:Jun 10, 2023 | 1:10 PM

Share

ಬೆಂಗಳೂರು: ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಪ್ರಮುಖ ಗ್ಯಾರಂಟಿಗಳಲ್ಲಿ(Congress Guarantee) ಒಂದಾದ ಶಕ್ತಿ ಯೋಜನೆಯನ್ನು ಜೂನ್ 11 ರಂದು ಸಿಎಂ ಸಿದ್ದರಾಮಯ್ಯ(Siddaramaiah) ಲೋಕಾರ್ಪಣೆ ಮಾಡುತ್ತಿದ್ದಾರೆ. ಯೋಜನೆಯ ಫಲವನ್ನು ಪಡೆಯಲು ತುದಿಗಾಲಿನಲ್ಲಿ ನಿಂತಿರುವ ಮಹಿಳಾ ಸಮೂಹ ಈ ಸುವರ್ಣ ಕ್ಷಣಗಳಿಗಾಗಿ ಕಾಯುತ್ತಿದ್ದಾರೆ. ಇನ್ನು ಈ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್(DK Shivakumar) ಭಾಗವಹಿಸುವುದಿಲ್ಲ ಎಂದು ನಿನ್ನೆ ತಿಳಿದುಬಂದಿತ್ತು. ಡಿಕೆ ಶಿವಕುಮಾರ್ ಅವರು ಶನಿವಾರ ಮಧ್ಯಪ್ರದೇಶಕ್ಕೆ ತೆರಳಲಿದ್ದು ಕಾರ್ಯಕ್ರಮಕ್ಕೆ ಗೈರಾಗಲಿದ್ದಾರೆ ಎನ್ನಲಾಗುತ್ತಿತ್ತು. ಆದ್ರೆ ಸಿಎಂ ಸಿದ್ದರಾಮಯ್ಯನವರ ಕೋರಿಕೆಯ ಮೇರೆಗೆ ಕಾರ್ಯಕ್ರಮಕ್ಕೆ ಬರಲು ಒಪ್ಪಿದ್ದಾರೆ.

ಡಿಕೆ ಶಿವಕುಮಾರ್ ಅವರು ಶನಿವಾರ ಬೆಳಗ್ಗೆ 11.30ಕ್ಕೆ ಹೆಚ್​ಎಎಲ್​ನಿಂದ ವಿಶೇಷ ವಿಮಾನದ ಮಧ್ಯಪ್ರದೇಶದ ಗ್ವಾಲಿಯರ್​ಗೆ ತೆರಳ ನಂತರ ಭಗಲಾಮುಖಿ ದೇವಾಲಯದಲ್ಲಿ ವಿಶೇಷ ಪೂಜೆ, ಉಜ್ಜೈನಿ ಮಹಾಕಾಲ ಮಂದಿರದಲ್ಲಿ ಭಸ್ಮ ಆರತಿ ನೆರವೇರಿಸಲಿದ್ದರು. ಹೀಗಾಗಿ ಭಾನುವಾರ ಬೆಂಗಳೂರಿನಲ್ಲಿ ನಡೆಯಲಿದ್ದ ಶಕ್ತಿ ಯೋಜನೆ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ ಎಂಬ ಮಾಹಿತಿ ಸಿಕ್ಕಿತ್ತು. ಆದ್ರೆ ಈಗ ಅವರ ಕಾರ್ಯಕ್ರಮದಲ್ಲಿ ಬದಲಾವಣೆಯಾಗಿದ್ದು ಸರ್ಕಾರದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಉಜ್ಜೈನಿ ಪ್ರವಾಸದಲ್ಲಿ ಬದಲಾವಣೆ ಮಾಡಿಕೊಂಡಿದ್ದಾರೆ. ಭಾನುವಾರ ಬೆಳಗ್ಗೆ 11.30ಕ್ಕೆ ಉಜ್ಜೈನಿಯಿಂದ ಬೆಂಗಳೂರಿಗೆ ವಾಪಸ್ಸಾಗಿ ಸಿಎಂ ಸಿದ್ದರಾಮಯ್ಯ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಶಕ್ತಿ ಯೋಜನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: Shakti Scheme: ‘ಶಕ್ತಿ’ ಯೋಜನೆ ಉದ್ಘಾಟನೆಗೆ ನಿರ್ಮಲಾ ಸೀತಾರಾಮನ್‌ಗೆ ಆಹ್ವಾನ, ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌

ಕಾರ್ಯಕ್ರಮಕ್ಕೆ ನೀನೇ ಮುಹೂರ್ತ ಇಟ್ಟಿದ್ದೀಯಾ, ನೀನೇ ಇರದಿದ್ದರೆ ಹೇಗಪ್ಪ?

ಮಹಿಳೆಯರಿಗೆ ಉಚಿತ ‌ಪ್ರಯಾಣದ ಉದ್ಘಾಟನೆ ಕಾರ್ಯಕ್ರಮಕ್ಕೆ ಹಾಜರಾಗಲು ಉಜ್ಜೈನಿ ಪ್ರವಾಸದಲ್ಲಿ ಬದಲಾವಣೆ ಮಾಡಿಕೊಂಡ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಉದ್ಘಾಟನೆ ಕಾರ್ಯಕ್ರಮಕ್ಕೆ ನೀನೇ ಮುಹೂರ್ತ ಇಟ್ಟಿದ್ದೀಯಾ. ಕಾರ್ಯಕ್ರಮಕ್ಕೆ ನೀನೇ ಇರದಿದ್ದರೆ ಹೇಗಪ್ಪ ಅಂತಾ ಸಿಎಂ ಹೇಳಿದ್ರು. ಹೀಗಾಗಿ ಸಮಯ ಬದಲಾವಣೆ ಮಾಡಿಕೊಂಡು ಕಾರ್ಯಕ್ರಮಕ್ಕೆ ಬರುತ್ತೇನೆ ಎಂದು ತಿಳಿಸಿದ್ದೇನೆ ಎಂದರು. ಸಿಎಂ ಕೋರಿಕೆ ಮೇರೆಗೆ ತಮ್ಮ ಪ್ರವಾಸದಲ್ಲಿ ಬದಲಾವಣೆ ಮಾಡಿಕೊಂಡು ಶಕ್ತಿ ಯೋಜನೆ ಕಾರ್ಯಕ್ರಮದಲ್ಲಿ ಹಾಜರಾಗುವುದಾಗಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಇನ್ನು ಗ್ವಾಲಿಯರ್​​ನಲ್ಲಿರುವ ಪೀಠಕ್ಕೆ ನಾನು ಹೋಗುತ್ತಿದ್ದೇನೆ. ಒಂದಷ್ಟು ಫಲಗಳು ಲಭಿಸಿದ ಮೇಲೆ ಬರುವುದಾಗಿ ನಾನು ದೇವರಲ್ಲಿ ಹೇಳಿಕೊಂಡಿದ್ದೆ. ಹೀಗಾಗಿ ಗ್ವಾಲಿಯರ್​ಗೆ ‌ತೆರಳುತ್ತಿದ್ದೇನೆ ಎಂದು ಡಿಕೆಶಿ ತಿಳಿಸಿದರು.

ರಾಜ್ಯ ರಾಜಕೀಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:31 pm, Sat, 10 June 23

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​