ಬೆಂಗಳೂರು: ವೈಟ್ ಟಾಪಿಂಗ್ ಕಾಮಗಾರಿ ಚಾಲನೆ ವೇಳೆ ಡಿಕೆ ಶಿವಕುಮಾರ್​​ ಶೂ ಕಳವು!

ಬಿಬಿಎಂಪಿ ಪಶ್ಚಿಮ ವಲಯದ ನಾಲ್ಕು ಪ್ರದೇಶಗಳ ರಸ್ತೆಗಳ ವೈಟ್ ಟಾಪಿಂಗ್ ಕಾಮಗಾರಿಗೆ ಸೋಮವಾರ ಚಾಲನೆ ನೀಡಲಾಯಿತು. ಚಾಲನೆಗೂ ಮುನ್ನ ನಡೆದ ಪೂಜೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಶಾಸಕ ಅಶ್ವತ್ಥ್​ ನಾರಾಯಣ, ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಭಾಗವಹಿಸಿದರು. ಇದೇ ವೇಳೆ ಡಿಕೆ ಶಿವಕುಮಾರ್ ಶೂ ಕಳವಾದ ವಿದ್ಯಮಾನವೂ ನಡೆಯಿತು.

ಬೆಂಗಳೂರು: ವೈಟ್ ಟಾಪಿಂಗ್ ಕಾಮಗಾರಿ ಚಾಲನೆ ವೇಳೆ ಡಿಕೆ ಶಿವಕುಮಾರ್​​ ಶೂ ಕಳವು!
ವೈಟ್ ಟಾಪಿಂಗ್ ಕಾಮಗಾರಿಗೆ ಸೋಮವಾರ ಬೆಳಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಿದರು.
Follow us
| Updated By: ಗಣಪತಿ ಶರ್ಮ

Updated on:Jul 15, 2024 | 11:40 AM

ಬೆಂಗಳೂರು, ಜುಲೈ 15: ಬೆಂಗಳೂರು ನಗರದ ಕೆಲ ರಸ್ತೆಗಳಿಗೆ ವೈಟ್ ಟಾಪಿಂಗ್ ಮಾಡುವ ಕಾಮಗಾರಿಗೆ ಸೋಮವಾರ ಬೆಳಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಿದರು. ಸದಾಶಿವನಗರದ ಭಾಷ್ಯಂ ಸರ್ಕಲ್ ಬಳಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಶಾಸಕ ಅಶ್ವತ್ಥ್​ ನಾರಾಯಣ, ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಇದ್ದರು. ಇದೇ ವೇಳೆ, ಚಾಲಾಕಿ ಕಳ್ಳನೊಬ್ಬ ಡಿಕೆ ಶಿವಕುಮಾರ್ ಶೂ ಕಳವಾದ ಘಟನೆಯೂ ನಡೆಯಿತು.

ವೈಟ್ ಟಾಪಿಂಗ್ ಕಾಮಗಾರಿಗೆ ಚಾಲನೆಗೂ ಮುನ್ನ ರಸ್ತೆಗೆ ಪೂಜೆ ನೆರವೇರಿಸಲಾಯಿತು. ಪೂಜೆಯಲ್ಲಿ ಭಾಗಿಯಾಗುವುದಕ್ಕಾಗಿ ಶೂ ಬಿಚ್ಚಿದ್ದ ಡಿಕೆ ಶಿವಕುಮಾರ್​ಗೆ, ಪೂಜೆ ಮುಗಿಸಿ ಕಾರ್ ಬಳಿ ತೆರಳಿದಾಗ ಅಚ್ಚರಿ ಕಾದಿತ್ತು. ಕೆಲಕಾಲ ಶೂಗಾಗಿ ಹುಡುಕಾಡಿದ ಅವರು ನಂತರ ಕಾರಿನಲ್ಲಿದ್ದ ಬೇರೆ ಶೂ ಧರಿಸಿ ಹೊರಟರು. ರಾಜಧಾನಿಯ ರಸ್ತೆಗಳಿಗೆ ವೈಟ್ ಟಾಪಿಂಗ್ ಟಚ್ ನೀಡಲು ಬಿಬಿಎಂಪಿ ಮುಂದಾಗಿದ್ದು, ಸುಮಾರು 150 ಕಿಮೀ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಯಲಿದೆ. ಇದೀಗ ನಾಲ್ಕು ಕಡೆ ಕಾಮಗಾರಿಗೆ ಚಾಲನೆ ನೀಡಲಾಗಿದೆ.

1700 ಕೋಟಿ ರೂ. ವೆಚ್ಚದ ಕಾಮಗಾರಿ

ವೈಟ್ ಟಾಪಿಂಗ್ ಕಾಮಗಾರಿ 1700 ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಯಲಿದ್ದು, ಆರಂಭದಲ್ಲಿ 16.62 ಕಿಮೀ ಉದ್ದದ ರಸ್ತೆಗೆ ವೈಟ್ ಟಾಪಿಂಗ್ ಮಾಡಲಾಗುತ್ತಿದೆ. ಮೊದಲಹಂತದಲ್ಲಿ ಬಿಬಿಎಂಪಿ ಪಶ್ಚಿಮ ವಲಯದಲ್ಲಿ 198 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ನಡೆಯಲಿದೆ.

ಇದನ್ನೂ ಓದಿ: ಬೆಂಗಳೂರು ವೈಟ್ ಟಾಪಿಂಗ್ ಕಾಮಗಾರಿ, ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

ಬ್ರಾಂಡ್ ಬೆಂಗಳೂರು-ಸುಗಮ ಸಂಚಾರ ಬೆಂಗಳೂರು ಅಡಿ ವೈಟ್ ಟಾಪಿಂಗ್ ಕಾಮಗಾರಿ ಯೋಜನೆ ಹಮ್ಮಿಕೊಳ್ಳಲಾಗಿದ್ದು, ಮಹಾಲಕ್ಷ್ಮೀಪುರ, ಮಲ್ಲೇಶ್ವರ, ಗಾಂಧಿನಗರ, ಚಾಮರಾಜಪೇಟೆ, ಮಕ್ಕಳ ಕೂಟದಲ್ಲಿ ಚಾಲನೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:58 am, Mon, 15 July 24

ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?