AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ವೈಟ್ ಟಾಪಿಂಗ್ ಕಾಮಗಾರಿ ಚಾಲನೆ ವೇಳೆ ಡಿಕೆ ಶಿವಕುಮಾರ್​​ ಶೂ ಕಳವು!

ಬಿಬಿಎಂಪಿ ಪಶ್ಚಿಮ ವಲಯದ ನಾಲ್ಕು ಪ್ರದೇಶಗಳ ರಸ್ತೆಗಳ ವೈಟ್ ಟಾಪಿಂಗ್ ಕಾಮಗಾರಿಗೆ ಸೋಮವಾರ ಚಾಲನೆ ನೀಡಲಾಯಿತು. ಚಾಲನೆಗೂ ಮುನ್ನ ನಡೆದ ಪೂಜೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಶಾಸಕ ಅಶ್ವತ್ಥ್​ ನಾರಾಯಣ, ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಭಾಗವಹಿಸಿದರು. ಇದೇ ವೇಳೆ ಡಿಕೆ ಶಿವಕುಮಾರ್ ಶೂ ಕಳವಾದ ವಿದ್ಯಮಾನವೂ ನಡೆಯಿತು.

ಬೆಂಗಳೂರು: ವೈಟ್ ಟಾಪಿಂಗ್ ಕಾಮಗಾರಿ ಚಾಲನೆ ವೇಳೆ ಡಿಕೆ ಶಿವಕುಮಾರ್​​ ಶೂ ಕಳವು!
ವೈಟ್ ಟಾಪಿಂಗ್ ಕಾಮಗಾರಿಗೆ ಸೋಮವಾರ ಬೆಳಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಿದರು.
ಶಾಂತಮೂರ್ತಿ
| Edited By: |

Updated on:Jul 15, 2024 | 11:40 AM

Share

ಬೆಂಗಳೂರು, ಜುಲೈ 15: ಬೆಂಗಳೂರು ನಗರದ ಕೆಲ ರಸ್ತೆಗಳಿಗೆ ವೈಟ್ ಟಾಪಿಂಗ್ ಮಾಡುವ ಕಾಮಗಾರಿಗೆ ಸೋಮವಾರ ಬೆಳಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಿದರು. ಸದಾಶಿವನಗರದ ಭಾಷ್ಯಂ ಸರ್ಕಲ್ ಬಳಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಶಾಸಕ ಅಶ್ವತ್ಥ್​ ನಾರಾಯಣ, ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಇದ್ದರು. ಇದೇ ವೇಳೆ, ಚಾಲಾಕಿ ಕಳ್ಳನೊಬ್ಬ ಡಿಕೆ ಶಿವಕುಮಾರ್ ಶೂ ಕಳವಾದ ಘಟನೆಯೂ ನಡೆಯಿತು.

ವೈಟ್ ಟಾಪಿಂಗ್ ಕಾಮಗಾರಿಗೆ ಚಾಲನೆಗೂ ಮುನ್ನ ರಸ್ತೆಗೆ ಪೂಜೆ ನೆರವೇರಿಸಲಾಯಿತು. ಪೂಜೆಯಲ್ಲಿ ಭಾಗಿಯಾಗುವುದಕ್ಕಾಗಿ ಶೂ ಬಿಚ್ಚಿದ್ದ ಡಿಕೆ ಶಿವಕುಮಾರ್​ಗೆ, ಪೂಜೆ ಮುಗಿಸಿ ಕಾರ್ ಬಳಿ ತೆರಳಿದಾಗ ಅಚ್ಚರಿ ಕಾದಿತ್ತು. ಕೆಲಕಾಲ ಶೂಗಾಗಿ ಹುಡುಕಾಡಿದ ಅವರು ನಂತರ ಕಾರಿನಲ್ಲಿದ್ದ ಬೇರೆ ಶೂ ಧರಿಸಿ ಹೊರಟರು. ರಾಜಧಾನಿಯ ರಸ್ತೆಗಳಿಗೆ ವೈಟ್ ಟಾಪಿಂಗ್ ಟಚ್ ನೀಡಲು ಬಿಬಿಎಂಪಿ ಮುಂದಾಗಿದ್ದು, ಸುಮಾರು 150 ಕಿಮೀ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಯಲಿದೆ. ಇದೀಗ ನಾಲ್ಕು ಕಡೆ ಕಾಮಗಾರಿಗೆ ಚಾಲನೆ ನೀಡಲಾಗಿದೆ.

1700 ಕೋಟಿ ರೂ. ವೆಚ್ಚದ ಕಾಮಗಾರಿ

ವೈಟ್ ಟಾಪಿಂಗ್ ಕಾಮಗಾರಿ 1700 ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಯಲಿದ್ದು, ಆರಂಭದಲ್ಲಿ 16.62 ಕಿಮೀ ಉದ್ದದ ರಸ್ತೆಗೆ ವೈಟ್ ಟಾಪಿಂಗ್ ಮಾಡಲಾಗುತ್ತಿದೆ. ಮೊದಲಹಂತದಲ್ಲಿ ಬಿಬಿಎಂಪಿ ಪಶ್ಚಿಮ ವಲಯದಲ್ಲಿ 198 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ನಡೆಯಲಿದೆ.

ಇದನ್ನೂ ಓದಿ: ಬೆಂಗಳೂರು ವೈಟ್ ಟಾಪಿಂಗ್ ಕಾಮಗಾರಿ, ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

ಬ್ರಾಂಡ್ ಬೆಂಗಳೂರು-ಸುಗಮ ಸಂಚಾರ ಬೆಂಗಳೂರು ಅಡಿ ವೈಟ್ ಟಾಪಿಂಗ್ ಕಾಮಗಾರಿ ಯೋಜನೆ ಹಮ್ಮಿಕೊಳ್ಳಲಾಗಿದ್ದು, ಮಹಾಲಕ್ಷ್ಮೀಪುರ, ಮಲ್ಲೇಶ್ವರ, ಗಾಂಧಿನಗರ, ಚಾಮರಾಜಪೇಟೆ, ಮಕ್ಕಳ ಕೂಟದಲ್ಲಿ ಚಾಲನೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:58 am, Mon, 15 July 24

Follow Us
Shanthamurthy
Shanthamurthy
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ