AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸಿಎಂ ಮಹತ್ವದ ಸಭೆ: ಕಂದಾಯ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಭರ್ತಿ, ಬಡ್ತಿ ಪ್ರಕ್ರಿಯೆ ಚುರುಕು

ವೈರಲ್ ಸೋಂಕಿನಿಂದ ಬಳಲುತ್ತಿದ್ದ ಡಿಸಿಎಂ ಡಾ.ಪರಮೇಶ್ವರ್​ ಒಂದು ವಾರದ ಬಳಿಕ ಕಾಣಿಸಿಕೊಂಡರು. ವಿಧಾನಸೌಧದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ಮಾಡಿ, ಮಹತ್ವದ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಇಲಾಖೆಯ ಕಾರ್ಯಕ್ಷಮತೆ ಹೆಚ್ಚಿಸಲು ಸೂಚಿಸಿದ್ದು, ಜೊತೆಗೆ ಜನಸಾಮಾನ್ಯರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಅಧಿಕಾರಿಗಳು ನಿರ್ದೇಶಿಸಿದ್ದಾರೆ.

ಡಿಸಿಎಂ ಮಹತ್ವದ ಸಭೆ: ಕಂದಾಯ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಭರ್ತಿ, ಬಡ್ತಿ ಪ್ರಕ್ರಿಯೆ ಚುರುಕು
ಡಿಸಿಎಂ ಜಿ ಪರಮೇಶ್ವರ್Image Credit source: tv9 kannada
ಗಂಗಾಧರ​ ಬ. ಸಾಬೋಜಿ
|

Updated on:Jun 22, 2026 | 4:55 PM

Share

ಬೆಂಗಳೂರು, ಜೂನ್​ 22: ಡಿಸಿಎಂ ಜಿ. ಪರಮೇಶ್ವರ್ (G Parameshwara)​​​ ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿದ್ದರು. ವೈರಲ್ ಸೋಂಕಿನಿಂದ ಬಳಲಿದ್ದ ಅವರು, ವೈದ್ಯರ ಸಲಹೆಯಂತೆ ವಿಶ್ರಾಂತಿಯಲ್ಲಿದ್ದರು. ಅನಾರೋಗ್ಯದ ಮಧ್ಯೆ ವಿಧಾನಪರಿಷತ್​​ ಚುನಾವಣೆಯಲ್ಲಿ ಮತ ಕೂಡ ಚಲಾಯಿಸಿದ್ದರು. ಇದೀಗ ಒಂದು ವಾರದ ನಂತರ ಕಾಣಿಸಿಕೊಂಡರು. ಇಲಾಖೆಯ ಕೆಲಸ ನಿಮಿತ್ತ ವಿಧಾನಸೌಧಕ್ಕೆ ಬಂದಿದ್ದ ಪರಮೇಶ್ವರ್​​, ಇದೇ ವೇಳೆ ಕಂದಾಯ ಇಲಾಖೆಯ ಹಿರಿಯ ಅಧಿಕಾರಗಳೊಂದಿಗೆ ಸಭೆ ಮಾಡಿ ಸಲಹೆ, ಸೂಚನೆಗಳನ್ನು ನೀಡಿದ್ದಾರೆ.

ಮುಖ್ಯಾಂಶಗಳು

  • ಒಂದು ವಾರದ ನಂತರ ಕಾಣಿಸಿಕೊಂಡ ಡಿಸಿಎಂ ಡಾ.ಪರಮೇಶ್ವರ್​
  • ಕಂದಾಯ ಇಲಾಖೆಯ ಹಿರಿಯ ಅಧಿಕಾರಗಳೊಂದಿಗೆ ಸಭೆ
  • ಖಾಲಿ ಹುದ್ದೆಗಳ ಭರ್ತಿಗೆ ಸೂಚನೆ

ಅಧಿಕಾರಿಗಳಿಗೆ ಪರಮೇಶ್ವರ್ ನೀಡಿದ ಸೂಚನೆ ಏನು?

ವಿಧಾನಸೌಧದಲ್ಲಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ಮಾಡಿ ಡಿಸಿಎಂ ಜಿ. ಪರಮೇಶ್ವರ್​​​, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಜನಸಾಮಾನ್ಯರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು. ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಚುರಕುಗೊಳಿಸಬೇಕು. ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಬಡ್ತಿ ನೀಡುವ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ವಿಳಂಬ ಉಂಟಾಗಬಾರದು. ಜೇಷ್ಠತಾ ಪಟ್ಟಿಯನ್ನು ಶೀಘ್ರ ಪ್ರಕಟಿಸಿ, ನಿಯಮಾನುಸಾರ ಪಾರದರ್ಶಕವಾಗಿ ಬಡ್ತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.

ಇದನ್ನೂ ಓದಿ: ಪರಿಷತ್​​ ಚುನಾವಣೆಯಲ್ಲಿ ಕ್ರಾಸ್​​ ವೋಟಿಂಗ್​: ಆಣೆ ಪ್ರಮಾಣಕ್ಕೆ ಮುಂದಾದ ಬಿಜೆಪಿಗರಿಗೆ ಹೆಚ್​​.ಡಿ. ಕುಮಾರಸ್ವಾಮಿ ಕಿವಿಮಾತು

ಕಂದಾಯ ಇಲಾಖೆಯ ಕಾರ್ಯಕ್ಷಮತೆ ಹೆಚ್ಚಿಸಲು ಸಹಾಯಕ ಆಯುಕ್ತರಿಗೆ (AC) ಹೆಚ್ಚಿನ ಜವಾಬ್ದಾರಿ ನೀಡಬೇಕು. ಬಾಕಿ ಉಳಿದಿರುವ ಕಡತಗಳನ್ನು ಶೀಘ್ರ ವಿಲೇವಾರಿ ಮಾಡಿದೆ. ಪರವಾನಗಿ ಭೂಮಾಪಕರ ಸಮಸ್ಯೆಗಳ ಕುರಿತು ಗಮನ ಹರಿಸಬೇಕು. ಭೂಮಾಪಕರ ಸಭೆಯನ್ನು ಕರೆದು ಅವರ ಅಹವಾಲುಗಳು ಹಾಗೂ ಬೇಡಿಕೆಗಳನ್ನು ಆಲಿಸಬೇಕು. ಭೂಮಾಪಕರ ಸೇವಾ ಹಾಗೂ ವೃತ್ತಿಪರ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಂಡು, ತ್ವರಿತವಾಗಿ ಇತ್ಯರ್ಥಪಡಿಸಬೇಕು ಎಂದರು.

ದಕ್ಷತೆ ಮತ್ತು ಪಾರದರ್ಶಕತೆ 

ಇ-ಪೌತಿ ಖಾತೆ ಸೇರಿದಂತೆ ಇಲಾಖೆಯ ಎಲ್ಲಾ ಆನ್‌ಲೈನ್ ಮತ್ತು ಸಾರ್ವಜನಿಕ ಸೇವೆಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ನಾಗರಿಕರು ಕಚೇರಿಗಳಿಗೆ ಅನಗತ್ಯವಾಗಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗದಂತೆ ಸೇವೆಗಳ ವಿತರಣೆಯಲ್ಲಿ ದಕ್ಷತೆ ಮತ್ತು ಪಾರದರ್ಶಕತೆ ಕಾಪಾಡಬೇಕು. ಭೂ ದಾಖಲೆ, ಖಾತೆ ಬದಲಾವಣೆ, ಸರ್ವೇ ಕಾರ್ಯ, ಮ್ಯುಟೇಷನ್ ಹಾಗೂ ಇತರೆ ಕಂದಾಯ ಸೇವೆಗಳ ವಿಲೇವಾರಿಯಲ್ಲಿ ವಿಳಂಬ ಕಡಿಮೆ ಮಾಡುವ ನಿಟ್ಟಿನಲ್ಲಿ ನಿರಂತರ ಮೇಲ್ವಿಚಾರಣೆ ನಡೆಸುವಂತೆ ನಿರ್ದೇಶಿಸಿದರು.

ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಿಂದ ನೀಟ್​​ ಪರಿಕ್ಷಾರ್ಥಿಗಳಿಗೆ ಸಮಸ್ಯೆ: ತೇಜಸ್ವಿ ಆರೋಪಕ್ಕೆ ಪ್ರಿಯಾಂಕ್​​ ಕೌಂಟರ್​​

ಇಲಾಖೆಯ ಎಲ್ಲಾ ಕಾರ್ಯಗಳ ಪ್ರಗತಿಯನ್ನು ನಿಯಮಿತವಾಗಿ ಪರಿಶೀಲಿಸಿ, ಗುರಿ ಸಾಧನೆಯತ್ತ ಗಮನ ಹರಿಸಬೇಕು. ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವ ಉದ್ದೇಶದಿಂದ ಆಡಳಿತಾತ್ಮಕ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡುವಂತೆ ಅಧಿಕಾರಿಗಳಿಗೆ ಡಿಸಿಎಂ ಜಿ. ಪರಮೇಶ್ವರ್​​​ ಸೂಚನೆ ನೀಡಿದರು.

ವರದಿ: ಈರಣ್ಣ ಬಸವ 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:27 pm, Mon, 22 June 26

Follow Us
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ