AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಆಟೋ ಹಿಂದೆ ಮಾರಕಾಸ್ತ್ರ! ಚಾಲಕನ ವಿರುದ್ಧ ಕ್ರಮಕ್ಕೆ ನೆಟ್ಟಿಗರ ಒತ್ತಾಯ

ಆಟೋ ಹಿಂದೆ ಪ್ರೀತಿ ಸಂದೇಶ, ನೆಚ್ಚಿನ ನಟ-ನಟಿಯರ ಫೋಟೋ, ಕವನ ಇತ್ಯಾದಿಗಳು ಕಾಣುತ್ತಿದ್ದವು. ಆದರೆ ಈಗ ಬೆಂಗಳೂರಿನ ಆಟೋವೊಂದರ ಹಿಂಬದಿ ಮಾರಕಾಸ್ತ್ರವನ್ನು ಅಳವಡಿಸಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಚಾಲಕನ ವಿರುದ್ಧ ಕ್ರಮಕ್ಕೆ ನೆಟ್ಟಿಗರು ಒತ್ತಾಯಿಸುತ್ತಿದ್ದಾರೆ.

ಬೆಂಗಳೂರು: ಆಟೋ ಹಿಂದೆ ಮಾರಕಾಸ್ತ್ರ! ಚಾಲಕನ ವಿರುದ್ಧ ಕ್ರಮಕ್ಕೆ ನೆಟ್ಟಿಗರ ಒತ್ತಾಯ
ಬೆಂಗಳೂರಿನಲ್ಲಿ ಆಟೋವೊಂದರ ಹಿಂದೆ ಕಾಣಿಸಿಕೊಂಡ ಮಾರಕಾಸ್ತ್ರ (Photo Credit: 3rdEyeDude)
Rakesh Nayak Manchi
|

Updated on: Aug 12, 2023 | 5:30 PM

Share

ಬೆಂಗಳೂರು, ಆಗಸ್ಟ್ 12: ಆಟೋ ಹಿಂದೆ ಪ್ರೀತಿಯ ಸಂದೇಶ, ತಂದೆ-ತಾಯಿ ಆಶೀರ್ವಾದ, ಕವನ, ಮಕ್ಕಳ ಹೆಸರು, ನಟ-ನಟಿಯರ ಫೋಟೋ ಇತ್ಯಾದಿಗಳನ್ನು ಹಾಕಲಾಗುತ್ತದೆ. ಆದರೆ ಬೆಂಗಳೂರಿನ (Bengaluru) ವ್ಯಕ್ತಿಯೊಬ್ಬ ತನ್ನ ಆಟೋ ರಿಕ್ಷಾದ ಹಿಂಬದಿ ಮಾರಕಾಸ್ತ್ರವನ್ನು ಅಳವಡಿಸಿ ಸಂಚರಿಸುತ್ತಿದ್ದಾನೆ. ಇದರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಚಾಲಕನ ವಿರುದ್ಧ ಕ್ರಮಕ್ಕೆ ನೆಟ್ಟಿಗರು ಒತ್ತಾಯಿಸುತ್ತಿದ್ದಾರೆ.

ಆಟೋರಿಕ್ಷಾವೊಂದರ ಹಿಂಬದಿಯಲ್ಲಿ ಮಾರಕಾಸ್ತ್ರ ನೋಡಿ ನೆಟ್ಟಿಗರು ಬೆಚ್ಚಿ ಬಿದ್ದಿದ್ದಾರೆ. ಇದರ ಫೋಟೋವನ್ನು ಥರ್ಡ್‌ಐ ಎಂಬ ಟ್ವಿಟರ್ ಖಾತೆಯಲ್ಲಿ ಶುಕ್ರವಾರ ಹಂಚಿಕೊಳ್ಳಲಾಗಿದೆ. ಫೋಟೋದೊಂದಿಗೆ ಇದು ನಕಲಿಯೇ ಅಥವಾ ಅಸಲಿಯೇ ಎಂದು ಬರೆಯಲಾಗಿದೆ. ಸದ್ಯ ಈ ಫೋಟೋ ಸಾವಿರಾರು ಮಂದಿ ನೆಟ್ಟಿಗರ ಕಣ್ಣಿಗೆ ಬಿದ್ದಿದೆ.

ಇದನ್ನೂ ಓದಿ: ಬೆಂಗಳೂರು: ಆಗಸ್ಟ್ 15 ರಂದು ಮೆಟ್ರೋ ಪ್ರಯಾಣ ದರ 30 ರೂ. ನಿಗದಿ ಮಾಡಿದ ಬಿಎಂಆರ್​ಸಿಎಲ್

ಹೊಸಬಸವನಪುರದ ಭಟ್ಟರಹಳ್ಳಿಯಲ್ಲಿ ಈ ಫೋಟೋವನ್ನು ಸೆರೆಹಿಡಿಯಲಾಗಿದೆ ಎಂದು ಹೇಳಲಾಗುತ್ತಿದೆ. ಈ ಫೋಟೋ ನೋಡಿದ ನೆಟಿಜನ್‌ಗರು ಚಾಲಕನ ಉದ್ದೇಶವಾದರೂ ಏನು ಎಂಬುದನ್ನು ಪ್ರಶ್ನಿಸಿದ್ದಾರೆ. ಇಂತಹ ವಸ್ತುಗಳನ್ನು ಹಾಕುವುದರ ಅರ್ಥವೇನು? ಎಂದು ಟಾರ್ಕ್​ ನೈಟ್ ಖಾತೆದಾರ ಪ್ರಶ್ನಿಸಿದ್ದಾನೆ.

ಆಟೋರಿಕ್ಷಾ ಚಾಲಕನ ಬಗ್ಗೆ ಪೊಲೀಸರಿಗೆ ದೂರು ನೀಡಬೇಕು ಎಂದು ವರ್ಲ್ಡ್ ವಾಚ್ ಹೇಳಿದೆ. “ಅಷ್ಟು ದೊಡ್ಡ ಮಾರಕಾಸ್ತ್ರವನ್ನು ಸಾಗಿಸುವುದು ಕಾನೂನುಬಾಹಿರವಾಗಿದೆ” ಎಂದು ಅದು ಹೇಳಿದೆ. ವಿನೋದ್ ಬಾಬು ಎಂಬವರು ಫೋಟೋಗೆ ಪ್ರತಿಕ್ರಿಯಿಸಿ, “ಇದು ಟಿಪ್ಪುವಿನ ಅನುಯಾಯಿಗಳ ಕತ್ತಿ ಎಂದು ಹೇಳಲಾಗುತ್ತದೆ” ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ