ಸಿಲಿಕಾನ್ ಸಿಟಿಯಲ್ಲಿ ಡೆಡ್ಲಿ ವ್ಹೀಲಿಂಗ್, ವಿಡಿಯೋ ಶೇರ್ ಮಾಡಿಕೊಂಡು ಸಿಕ್ಕಿಬಿದ್ದ

ಸಿಲಿಕಾನ್​ ಸಿಟಿಯಲ್ಲಿ ನಿಲ್ಲದ ಪುಂಡರ ಡೆಡ್ಲಿ ವ್ಹೀಲಿಂಗ್ ಹಾವಳಿ, ನಗರದ ಎರಡು ಪ್ರಮುಖ ರಸ್ತೆಗಳಲ್ಲಿ ತಮ್ಮ ಪಟಾಲಂನೊಂದಿಗೆ ವ್ಹೀಲಿಂಗ್ ಮಾಡುತ್ತಿದ್ದ ಪುಂಡರನ್ನ ಇದೀಗ ಪೊಲೀಸರು ಬಂಧಿಸಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ ಡೆಡ್ಲಿ ವ್ಹೀಲಿಂಗ್, ವಿಡಿಯೋ ಶೇರ್ ಮಾಡಿಕೊಂಡು ಸಿಕ್ಕಿಬಿದ್ದ
ಪುಂಡರ ಡೆಡ್ಲಿ ವ್ಹೀಲಿಂಗ್
Follow us
|

Updated on:Mar 26, 2023 | 10:00 AM

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ನಿಲ್ಲದ ಪುಂಡರ ಡೆಡ್ಲಿ ವ್ಹೀಲಿಂಗ್ ಹಾವಳಿ, ನಗರದ ಎರಡು ಪ್ರಮುಖ ರಸ್ತೆಗಳಲ್ಲಿ ತಮ್ಮ ಪಟಾಲಂನೊಂದಿಗೆ ವ್ಹೀಲಿಂಗ್ ಮಾಡುತ್ತಿದ್ದ ಪುಂಡರನ್ನ ಇದೀಗ ಪೊಲೀಸರು ಬಂಧಿಸಿದ್ದಾರೆ. ಕೆಐಎಎಲ್ ಏರ್ಪೋರ್ಟ್ ರಸ್ತೆ ಹಾಗೂ ಹೊಸೂರು ರಸ್ತೆಯಲ್ಲಿ ಈ ಘಟನೆ ನಡೆದಿದೆ. ವಾಹನ ದಟ್ಟಣೆ ನಡುವೆಯೂ ಡೆಡ್ಲಿ ವ್ಹೀಲಿಂಗ್ ಮಾಡುತ್ತಾ, ವಿಡಿಯೋ  ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿ ಸೆಲೆಬ್ರೆಷನ್ ಮಾಡುತ್ತಿದ್ದರು. ಏರ್ಪೋರ್ಟ್ ರಸ್ತೆಯಲ್ಲಿ ರಾತ್ರಿಯಾದ್ರೆ ಇವರ ಹಾವಳಿ ತಾಳಲಾರದೇ ಸ್ಥಳೀಯರು ವೀಲ್ಹಿಂಗ್ ಬಗ್ಗೆ ಚಿಕ್ಕಜಾಲ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದೀಗ ವ್ಹೀಲಿಂಗ್ ಮಾಡಿದ ವ್ಯಕ್ತಿಯನ್ನ ಪೊಲೀಸರು ಪತ್ತೆ ಹಚ್ಚಿ ಬೈಕ್​ನ್ನ ಜಪ್ತಿ ಮಾಡಿದ್ದಾರೆ.

ಹೊಸೂರು ರಸ್ತೆಯಲ್ಲಿ ಯುವಕರ ಡೆಡ್ಲಿ ಆಟ

ಹೌದು ಇದೇ ರೀತಿ ಮತ್ತೊಂದು ಘಟನೆ ಹೊಸೂರು ರಸ್ತೆಯಲ್ಲಿ ನಡೆದಿದೆ. ಸುಮಾರು ಎರಡು ಕಿ.ಮೀ ವರೆಗೆ ಪುಂಡರು ವ್ಹೀಲಿಂಗ್ ಮಾಡಿದ್ದಾರೆ. ಪುಂಡರ ಈ ಕೃತ್ಯವನ್ನ ರಸ್ತೆಯಲ್ಲಿ ಹೋಗುತ್ತಿದ್ದ ವಾಹನ ಸವಾರರು ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ. ಇನ್ನು ಡೇಂಜರಸ್ ಆಗಿ ಬೈಕ್ ಮೇಲೆ ಸ್ಟಂಟ್ ಮಾಡಿದ ಕಿಡಿಗೇಡಿ ಯುವಕರ ವರ್ತನೆಯಿಂದ ಹೈರಾಣಾದ ವಾಹನ ಸವಾರರು, ವ್ಹೀಲಿಂಗ್ ಮತ್ತು ಸ್ಟಂಟ್ ಬಗ್ಗೆ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸರಿಗೆ ದೂರು ನೀಡಿದ್ದಾರೆ. ಈ ವ್ಹೀಲಿಂಗ್ ಮಾಡಿದ ಪುಂಡರಿಗಾಗಿ ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ:Viral Video: ಬೆಂಗಳೂರಿನಲ್ಲಿ ಹಿಂಬದಿಯಿಂದ ಬಂದು ಪಾದಚಾರಿಗಳನ್ನು ಭಯಗೊಳಿಸುವ ಬೈಕ್ ಸವಾರರು! ಇಬ್ಬರು ಅರೆಸ್ಟ್

ಕೆಲ ದಿನಗಳ ಹಿಂದೆ ಪಾದಚಾರಿಗಳನ್ನು ಭಯಗೊಳಿಸುತ್ತಿದ್ದ ಪುಂಡರನ್ನ ಅರೆಸ್ಟ್ ಮಾಡಿದ್ದ ಪೊಲೀಸ್​

ಇನ್ನು ಕೆಲದಿನಗಳ ಹಿಂದೆಯಷ್ಟೇ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಬ್ಬರು ಬೈಕ್ ಸವಾರರು, ಇನ್ನೊಬ್ಬರನ್ನು ಭಯಗೊಳಿಸಿ ವಿಕೃತ ಆನಂದ ಪಡೆಯುತ್ತಿದ್ದರು. ಬೈಕ್ ಚಲಾಯಿಸುತ್ತಾ ಮುಂದೆ ನಡೆದುಕೊಂಡು ಹೋಗುತ್ತಿದ್ದ ಸಾರ್ವಜನಿಕರ ಪಕ್ಕಕ್ಕೆ ಹೋಗಿ ಕರ್ಕಶವಾಗಿ ಕಿರುಚುವ ಮೂಲಕ ಭಯ ಹುಟ್ಟಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು, ಬಳಿಕ ಎಚ್ಚೆತ್ತ ಜಯನಗರ ಠಾಣಾ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:56 am, Sun, 26 March 23

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು