AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಲ್ಲಿ ಶವಗಳು ಕೊಳೆತ ಪ್ರಕರಣ: ಇಎಸ್​ಐ ಡೀನ್ ತಲೆದಂಡ

ಹೊಸ ಡೀನ್ ನೇಮಿಸಿ ಕೇಂದ್ರ ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ.

ಆಸ್ಪತ್ರೆಯಲ್ಲಿ ಶವಗಳು ಕೊಳೆತ ಪ್ರಕರಣ: ಇಎಸ್​ಐ ಡೀನ್ ತಲೆದಂಡ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 01, 2021 | 9:52 PM

Share

ಬೆಂಗಳೂರು: ಸಕಾಲಕ್ಕೆ ಸಂಸ್ಕಾರ ನೆರವೇರದೆ ಆಸ್ಪತ್ರೆಯಲ್ಲಿ ಶವಗಳು ಕೊಳೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಎಸ್​ಐ ಆಸ್ಪತ್ರೆಯ ಡೀನ್ ಜಿತೇಂದ್ರ ಕುಮಾರ್ ಅವರ ವಿರುದ್ಧ ಸರ್ಕಾರ ಶಿಸ್ತುಕ್ರಮ ಜರುಗಿಸಿದೆ. ರಾಜಾಜಿನಗರ ಇಎಸ್​ಐ ಆಸ್ಪತ್ರೆಯ ಡೀನ್ ಜಿತೇಂದ್ರ ಕುಮಾರ್ ಜಾಗಕ್ಕೆ ಡಾ.ರೇಣುಕಾ ರಾಮಯ್ಯ ಅವರನ್ನು ನೇಮಿಸಲಾಗಿದೆ. ಹೊಸ ಡೀನ್ ನೇಮಿಸಿ ಕೇಂದ್ರ ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ. ಆಸ್ಪತ್ರೆಯಲ್ಲಿ ಇಬ್ಬರು 15 ತಿಂಗಳ ಮೃತಪಟ್ಟಿದ್ದರೂ ಶವಗಳ ಅಂತ್ಯಕ್ರಿಯೆ ನಡೆದಿರಲಿಲ್ಲ. ಶವ ಪತ್ತೆಯಾದ ಬಗ್ಗೆ ಟಿವಿ9 ಕನ್ನಡ ವಾಹಿನಿ ನಿರಂತರವಾಗಿ ಸುದ್ದಿ ಪ್ರಸಾರ ಮಾಡಿತ್ತು.

15 ತಿಂಗಳ ಬಳಿಕ ಶವಗಳನ್ನು ಹೊರ ತೆಗೆದ ಆಸ್ಪತ್ರೆ ಸಿಬ್ಬಂದಿ ಕೊರೊನಾ ಪಿಡುಗು ರಾಜ್ಯದಲ್ಲಿ ವ್ಯಾಪಿಸಿದ್ದ ಸಮಯದಲ್ಲಿ ಹಲವು ಶವಗಳನ್ನು ಆಸ್ಪತ್ರೆ ಸಿಬ್ಬಂದಿಯೇ ದಫನ್ ಮಾಡಿದ್ದರು. ಆದರೆ ಕೋವಿಡ್​ನಿಂದ ಮೃತಪಟ್ಟವರ ಇಬ್ಬರ ಶವಗಳಿಗೆ 15 ತಿಂಗಳಾದರೂ ಅಂತ್ಯಸಂಸ್ಕಾರ ನಡೆಸದ ಘಟನೆ ಬೆಂಗಳೂರು ರಾಜಾಜಿನಗರ ಇಎಸ್​ಐ ಆಸ್ಪತ್ರೆಯಲ್ಲಿ ನಡೆದಿತ್ತು. ಜುಲೈ 2020ರಲ್ಲಿ ಆಸ್ಪತ್ರೆ ಶವಾಗಾರದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಶವಗಳನ್ನು ಇರಿಸಿದ್ದ ಸಿಬ್ಬಂದಿ ಮರೆತುಬಿಟ್ಟಿದ್ದರು. ಚಾಮರಾಜಪೇಟೆಯ ದುರ್ಗಾ (40) ಮತ್ತು ಕೆ.ಪಿ.ಅಗ್ರಹಾರದ ಮುನಿರಾಜು (35) ಮೃತರು. ಮರಣೋತ್ತರ ಪರೀಕ್ಷೆಗಾಗಿ ಎರಡು ಮೃತದೇಹಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಹಿಂದೆ ಬಿಬಿಎಂಪಿಯೇ ಕೋವಿಡ್ ಶವಗಳನ್ನ ಅಂತ್ಯಸಂಸ್ಕಾರ ಮಾಡುತ್ತಿದ್ದ ಕಾರಣ ಮೃತದೇಹಗಳ ಬಗ್ಗೆ ಕುಟುಂಬಸ್ಥರು ಕೂಡ ತಲೆಕೆಡಿಸಿಕೊಂಡಿಲ್ಲ. ಆದರೆ ಹೊಸ ಶವಾಗಾರ‌ ನಿರ್ಮಾಣದ ಬಳಿಕ ಹಳೆ ಶವಾಗಾರದ ಬಳಕೆ ನಿಲ್ಲಿಸಿದ್ದ ಸಿಬ್ಬಂದಿ ಹಳೆ ಕಟ್ಟಡದಲ್ಲಿ ಎರಡು ಶವಗಳನ್ನು ಇರಿಸಿರುವುದನ್ನೇ ಮರೆತಿದ್ದರು. ಕೆಲ ಸಿಬ್ಬಂದಿ ಹಳೇ ಶವಾಗಾರದ ಸ್ವಚ್ಛತೆಗೆ ಹೋದಾಗ ವಾಸನೆ ಬಂದಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಶವಗಳಿಗೆ ಸಂಸ್ಕಾರ ನೆರವೇರಿಲ್ಲ ಎಂಬ ವಿಷಯ ತಿಳಿದ ಮೃತರ ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ. ಅವರು ಕೋವಿಡ್​ನಿಂದ ಮೃತಪಟ್ಟಿದ್ದಾರೆ ಎಂದು ನಮಗೆ ಆಗಲೇ ಕರೆ ಬಂದಿತ್ತು. ಆದರೆ ಮುಖ ನೋಡಲು ಅವಕಾಶವಿಲ್ಲ ಎಂದಿದ್ದರು. ನೀವೇ ಅಂತ್ಯಸಂಸ್ಕಾರ ಮಾಡಿ ಎಂದು ನಾವು ಮನವಿ ಮಾಡಿದ್ದೆವು. ಬಳಿಕ ಅಂತ್ಯಸಂಸ್ಕಾರ ಮಾಡಿದ್ದೇವೆ ಎಂದು ಡೆಟ್ ಸರ್ಟಿಫಿಕೇಟ್ ಕೂಡಾ ಕೊಟ್ಟಿದ್ದರು. ಆದರೆ ಈಗ ಪೊಲೀಸರು ಶವಗಳನ್ನು ಗುರುತಿಸುವಂತೆ ಕರೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ.

ಘಟನೆ ಸಂಬಂಧ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್​ಗೆ ಪತ್ರ ಬರೆದಿರುವ ರಾಜಾಜಿನಗರ ಶಾಸಕ ಸುರೇಶ್ ಕುಮಾರ್, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಅರಿವಿಗೆ ಬರುವ ಮೊದಲೇ ಹರಡಿದ ಒಮಿಕ್ರಾನ್: 20 ದೇಶಗಳಲ್ಲಿ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ, ಕಾದಿದೆಯೇ ಸಂಕಷ್ಟ ಇದನ್ನೂ ಓದಿ: ಕೊರೊನಾ ವೈರಸ್ 13ನೇ ರೂಪಾಂತರಿಗೆ ಒಮಿಕ್ರಾನ್ ಹೆಸರು ಯಾಕೆ ಬಂತು, ಅದರ ಹಿನ್ನೆಲೆ ಏನು ಅಂತ ಗೊತ್ತಾ?

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್