AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KRIDLನ ಅಕ್ರಮದ ಕುರಿತು ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಕಾಂಟ್ರ್ಯಾಕ್ಟರ್ ಗೆ ಕೊಲೆ ಬೆದರಿಕೆ

ಎ1 ಕ್ಲಾಸ್ ಕಾಂಟ್ರ್ಯಾಕ್ಟರ್ ಆಗಿರುವ ಮೋಹನ್ ಎಂಬುವವರು KRIDL ಮಾಡಿದ ಅಕ್ರಮದ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರು ನೀಡಿದ ಬಳಿಕ ಮೋಹನ್ ಅವರಿಗೆ ಜೀವ ಬೇದರಿಕೆ ಕರೆಗಳು ಬರುತ್ತಿವೆ ಎಂಬ ಆರೋಪ ಕೇಳಿ ಬಂದಿದೆ. ಅನ್ನಪೋರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ಇಲಾಖೆಯ ಏಳು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

KRIDLನ ಅಕ್ರಮದ ಕುರಿತು ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಕಾಂಟ್ರ್ಯಾಕ್ಟರ್ ಗೆ ಕೊಲೆ ಬೆದರಿಕೆ
ಸಾಂದರ್ಭಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Jan 16, 2024 | 1:07 PM

Share

ಬೆಂಗಳೂರು, ಜ.16: ಅಧಿಕಾರಿಗಳ ಅಕ್ರಮ ಕಾಮಗಾರಿ ಸಂಬಂಧ ಲೋಕಾಯುಕ್ತಕ್ಕೆ (Lokayukta) ದೂರು ನೀಡಿದ್ದಕ್ಕೆ ಗುತ್ತಿಗೆದಾರೊಬ್ಬರಿಗೆ (Contractor) ಅಧಿಕಾರಿಗಳು ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಎ1 ಕ್ಲಾಸ್ ಕಾಂಟ್ರ್ಯಾಕ್ಟರ್ ಆಗಿರುವ ಮೋಹನ್ ಎಂಬುವವರು KRIDL ಮಾಡಿದ ಅಕ್ರಮದ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರು ನೀಡಿದ ಬಳಿಕ ಮೋಹನ್ ಅವರಿಗೆ ಜೀವ ಬೇದರಿಕೆ ಕರೆಗಳು ಬರುತ್ತಿವೆ ಎಂಬ ಆರೋಪ ಕೇಳಿ ಬಂದಿದೆ.

ಕರ್ನಾಟಕ ಇನ್ಫ್ರಾಸ್ಟ್ರಕ್ಚರ್‌ ರೂರಲ್ ಡವಲಪ್ಮೆಂಟ್ ಇಲಾಖೆಯಲ್ಲಿ ಅಕ್ರಮ ಕಾಮಗಾರಿ ನಡೆದಿದೆ ಅಂತಾ ಗುತ್ತಿಗೆದಾರ ಮೋಹನ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ವಿಚಾರ ತಿಳಿದ ಅಧಿಕಾರಿಗಳು ಮೋಹನ್ ಅವರಿಗೆ ಜೀವಬೆದರಿಕೆ ಹಾಕಿದ್ದಾರೆ ಎನ್ನಲಾಗುತ್ತಿದೆ. ಈ ಸಂಬಂಧ ಮೋಹನ್ ಕೋರ್ಟ್​ನಲ್ಲಿ ಪಿಸಿಆರ್ ದಾಖಲಿಸಿದ್ದಾರೆ. ಕೋರ್ಟ್ ಸೂಚನೆ ಮೇರೆಗೆ ನಗರದ ಅನ್ನಪೋರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ಇಲಾಖೆಯ ಏಳು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಇದನ್ನೂ ಓದಿ: ಯೂಟ್ಯೂಬ್ ನೋಡಿ ಮೆಡಿಕಲ್ ಶಾಪ್​ನಲ್ಲಿ ಚಿಕಿತ್ಸೆ, ರೋಗಿಗಳಿಂದ ದುಪ್ಪಟ್ಟು ಹಣ ಪಡೆಯುತ್ತಿದ್ದ ನಕಲಿ ವೈದ್ಯನಿಗೆ ಸ್ಥಳೀಯರಿಂದ ತರಾಟೆ

ಅಧಿಕಾರಿಗಳು ಗುತ್ತಿಗೆದಾರರಿಗೆ ಹಣ ನೀಡದೆ ಸತಾಯಿಸುವುದು, ದಬ್ಬಾಳಿಕೆ, ಕಿರುಕುಳ ನೀಡುವಂತಹ ಅನೇಕ ಸುದ್ದಿಗಳು ವರದಿ ಆಗಿವೆ. ಕೆಲ ಕಡೆ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೂಡ ನಡೆದಿದೆ. ಹೀಗಾಗಿ ಈ ಹಿಂದೆ ಇದ್ದ ಬಸವರಾಜ ಬೊಮ್ಮಾಯಿ ಸರ್ಕಾರ ಕೆಲ ನಿರ್ಧಾರಗಳನ್ನು ತೆಗೆದುಕೊಂಡಿತ್ತು. ಯಾವುದೇ ವಿಷಯದಲ್ಲಿ ನಿರ್ದಿಷ್ಟವಾದ ವಿವರಗಳಿದ್ದಲ್ಲಿ ಗುತ್ತಿಗೆದಾರರು ಲೋಕಾಯುಕ್ತಕ್ಕೆ ದೂರು ಸಲ್ಲಿಸಬಹುದು. ಪುರಾವೆಗಳಿಲ್ಲದ ಆಧಾರರಹಿತವಾದ ಹೇಳಿಕೆಗಳು ಉದ್ದೇಶಪೂರ್ವಕ ಹೇಳಿಕೆಗಳಾಗುತ್ತವೆ ಎಂದು ಬಸವರಾಜ ಬೊಮ್ಮಾಯಿಯವರು ಸಿಎಂ ಆಗಿದ್ದಾರೆ ಹೇಳಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!
ಇದ್ದಕ್ಕಿದ್ದಂತೆ ಹೈವೇಗೆ ಹಾರಿದ ಹಸು; ಕಾರಿನ ಸ್ಥಿತಿ ಏನಾಯ್ತು ನೋಡಿ!
ಇದ್ದಕ್ಕಿದ್ದಂತೆ ಹೈವೇಗೆ ಹಾರಿದ ಹಸು; ಕಾರಿನ ಸ್ಥಿತಿ ಏನಾಯ್ತು ನೋಡಿ!