KRIDLನ ಅಕ್ರಮದ ಕುರಿತು ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಕಾಂಟ್ರ್ಯಾಕ್ಟರ್ ಗೆ ಕೊಲೆ ಬೆದರಿಕೆ

ಎ1 ಕ್ಲಾಸ್ ಕಾಂಟ್ರ್ಯಾಕ್ಟರ್ ಆಗಿರುವ ಮೋಹನ್ ಎಂಬುವವರು KRIDL ಮಾಡಿದ ಅಕ್ರಮದ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರು ನೀಡಿದ ಬಳಿಕ ಮೋಹನ್ ಅವರಿಗೆ ಜೀವ ಬೇದರಿಕೆ ಕರೆಗಳು ಬರುತ್ತಿವೆ ಎಂಬ ಆರೋಪ ಕೇಳಿ ಬಂದಿದೆ. ಅನ್ನಪೋರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ಇಲಾಖೆಯ ಏಳು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

KRIDLನ ಅಕ್ರಮದ ಕುರಿತು ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಕಾಂಟ್ರ್ಯಾಕ್ಟರ್ ಗೆ ಕೊಲೆ ಬೆದರಿಕೆ
ಸಾಂದರ್ಭಿಕ ಚಿತ್ರ
Edited By: ಆಯೇಷಾ ಬಾನು

Updated on: Jan 16, 2024 | 1:07 PM

ಬೆಂಗಳೂರು, ಜ.16: ಅಧಿಕಾರಿಗಳ ಅಕ್ರಮ ಕಾಮಗಾರಿ ಸಂಬಂಧ ಲೋಕಾಯುಕ್ತಕ್ಕೆ (Lokayukta) ದೂರು ನೀಡಿದ್ದಕ್ಕೆ ಗುತ್ತಿಗೆದಾರೊಬ್ಬರಿಗೆ (Contractor) ಅಧಿಕಾರಿಗಳು ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಎ1 ಕ್ಲಾಸ್ ಕಾಂಟ್ರ್ಯಾಕ್ಟರ್ ಆಗಿರುವ ಮೋಹನ್ ಎಂಬುವವರು KRIDL ಮಾಡಿದ ಅಕ್ರಮದ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರು ನೀಡಿದ ಬಳಿಕ ಮೋಹನ್ ಅವರಿಗೆ ಜೀವ ಬೇದರಿಕೆ ಕರೆಗಳು ಬರುತ್ತಿವೆ ಎಂಬ ಆರೋಪ ಕೇಳಿ ಬಂದಿದೆ.

ಕರ್ನಾಟಕ ಇನ್ಫ್ರಾಸ್ಟ್ರಕ್ಚರ್‌ ರೂರಲ್ ಡವಲಪ್ಮೆಂಟ್ ಇಲಾಖೆಯಲ್ಲಿ ಅಕ್ರಮ ಕಾಮಗಾರಿ ನಡೆದಿದೆ ಅಂತಾ ಗುತ್ತಿಗೆದಾರ ಮೋಹನ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ವಿಚಾರ ತಿಳಿದ ಅಧಿಕಾರಿಗಳು ಮೋಹನ್ ಅವರಿಗೆ ಜೀವಬೆದರಿಕೆ ಹಾಕಿದ್ದಾರೆ ಎನ್ನಲಾಗುತ್ತಿದೆ. ಈ ಸಂಬಂಧ ಮೋಹನ್ ಕೋರ್ಟ್​ನಲ್ಲಿ ಪಿಸಿಆರ್ ದಾಖಲಿಸಿದ್ದಾರೆ. ಕೋರ್ಟ್ ಸೂಚನೆ ಮೇರೆಗೆ ನಗರದ ಅನ್ನಪೋರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ಇಲಾಖೆಯ ಏಳು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಇದನ್ನೂ ಓದಿ: ಯೂಟ್ಯೂಬ್ ನೋಡಿ ಮೆಡಿಕಲ್ ಶಾಪ್​ನಲ್ಲಿ ಚಿಕಿತ್ಸೆ, ರೋಗಿಗಳಿಂದ ದುಪ್ಪಟ್ಟು ಹಣ ಪಡೆಯುತ್ತಿದ್ದ ನಕಲಿ ವೈದ್ಯನಿಗೆ ಸ್ಥಳೀಯರಿಂದ ತರಾಟೆ

ಅಧಿಕಾರಿಗಳು ಗುತ್ತಿಗೆದಾರರಿಗೆ ಹಣ ನೀಡದೆ ಸತಾಯಿಸುವುದು, ದಬ್ಬಾಳಿಕೆ, ಕಿರುಕುಳ ನೀಡುವಂತಹ ಅನೇಕ ಸುದ್ದಿಗಳು ವರದಿ ಆಗಿವೆ. ಕೆಲ ಕಡೆ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೂಡ ನಡೆದಿದೆ. ಹೀಗಾಗಿ ಈ ಹಿಂದೆ ಇದ್ದ ಬಸವರಾಜ ಬೊಮ್ಮಾಯಿ ಸರ್ಕಾರ ಕೆಲ ನಿರ್ಧಾರಗಳನ್ನು ತೆಗೆದುಕೊಂಡಿತ್ತು. ಯಾವುದೇ ವಿಷಯದಲ್ಲಿ ನಿರ್ದಿಷ್ಟವಾದ ವಿವರಗಳಿದ್ದಲ್ಲಿ ಗುತ್ತಿಗೆದಾರರು ಲೋಕಾಯುಕ್ತಕ್ಕೆ ದೂರು ಸಲ್ಲಿಸಬಹುದು. ಪುರಾವೆಗಳಿಲ್ಲದ ಆಧಾರರಹಿತವಾದ ಹೇಳಿಕೆಗಳು ಉದ್ದೇಶಪೂರ್ವಕ ಹೇಳಿಕೆಗಳಾಗುತ್ತವೆ ಎಂದು ಬಸವರಾಜ ಬೊಮ್ಮಾಯಿಯವರು ಸಿಎಂ ಆಗಿದ್ದಾರೆ ಹೇಳಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Loading...
Unable to load recommendations.
Follow Us