AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls 2023: ಬೆಂಗಳೂರು ನಗರದಿಂದ 45 ರೌಡಿ ರೌಡಿಶೀಟರ್​ಗಳನ್ನ ಗಡಿಪಾರು ಮಾಡಲು ನಿರ್ಧಾರ

ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವು ದಿನಗಳು ಬಾಕಿ ಉಳಿದಿದ್ದು, ಅದರಂತೆ ಚುನಾವಣೆ ಸಮಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಬೆಂಗಳೂರು ನಗರದಿಂದ 45 ರೌಡಿ ರೌಡಿಶೀಟರ್​ಗಳನ್ನ ಗಡಿಪಾರು ಮಾಡಲು ನಿರ್ಧಾರ ಮಾಡಲಾಗಿದೆ.

Karnataka Assembly Polls 2023: ಬೆಂಗಳೂರು ನಗರದಿಂದ 45 ರೌಡಿ ರೌಡಿಶೀಟರ್​ಗಳನ್ನ ಗಡಿಪಾರು ಮಾಡಲು ನಿರ್ಧಾರ
ರೌಡಿಶೀಟರ್ಸ್​
ಕಿರಣ್ ಹನುಮಂತ್​ ಮಾದಾರ್
|

Updated on: Apr 18, 2023 | 7:19 AM

Share

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ(Karnataka Assembly Election)ಗೆ ಇನ್ನೇನು ಕೆಲವು ದಿನಗಳು ಬಾಕಿ ಉಳಿದಿದ್ದು, ಅದರಂತೆ ಚುನಾವಣೆ ಸಮಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಈಗಾಗಲೇ ಸೂಕ್ತ ಕ್ರಮ‌ಕೈಗೊಳ್ಳಲಾಗಿದೆ. ಈ ಹಿನ್ನೆಲೆ ನಗರದ ಸುಮಾರು 45 ಪ್ರಮುಖ ರೌಡಿಗಳನ್ನು ಗಡಿಪಾರು ಮಾಡಲು ನಿರ್ಧರಿಸಲಾಗಿದ್ದು, ಈಗಾಗಲೇ 12 ರೌಡಿಗಳನ್ನ ಗಡಿಪಾರು ಮಾಡಲು ಆಯಾ ವಿಭಾಗದ ಡಿಸಿಪಿಗಳು ಆದೇಶ ಹೊರಡಿಸಿದ್ದಾರೆ. ಉಳಿದಂತೆ 33 ರೌಡಿಗಳ ಗಡಿಪಾರಿಗೆ ಸಿದ್ದತೆ ನಡಿತಾಯಿದ್ದು, ಕೌನ್ಸಿಲಿಂಗ್ ಆಗುತ್ತಿದೆಯಂತೆ. ಇನ್ನೊಂದು ವಾರದ ಒಳಗೆ ನಗರ ಪೊಲೀಸರು ಗಡಿಪಾರು ಮಾಡಲಿದ್ದಾರೆ.

ಹಾಗಾದ್ರೆ ಯಾವ ಯಾವ ಡಿವಿಷನ್​ನಲ್ಲಿ ಎಷ್ಟೇಷ್ಟು ರೌಡಿಗಳ ಗಡಿಪಾರು!

ಪೂರ್ವ ವಿಭಾಗ 12, ಪಶ್ಚಿಮ ವಿಭಾಗ 6, ಆಗ್ನೇಯ ವಿಭಾಗ 5, ಕೇಂದ್ರ ವಿಭಾಗ 4, ಈಶಾನ್ಯ ವಿಭಾಗ 4, ವೈಟ್ ಫೀಲ್ಡ್ ವಿಭಾಗ 5, ಉತ್ತರ ವಿಭಾಗ 5, ದಕ್ಷಿಣ ವಿಭಾಗ 4 ರೌಡಿಗಳನ್ನ ಗಡಿಪಾರು ಮಾಡಲಿದ್ದಾರೆ.

ಇದನ್ನೂ ಓದಿ:Karnataka Assembly Polls 2023: ದಾವಣಗೆರೆ ಜಿಲ್ಲೆಯಿಂದ 13 ರೌಡಿಶೀಟರ್​ಗಳ ಗಡಿಪಾರು

ಸದ್ಯ ಗಡಿಪಾರು ಆಗಿರುವ ಕುಖ್ಯಾತ ರೌಡಿಗಳು

1)ವಿಲ್ಸನ್ ಗಾರ್ಡನ್ ನಾಗ ( ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆ) ಇತನ ಮೇಲೆ ಒಟ್ಟು 22 ಕೇಸ್​ಗಳು ಇವೆ. ಏಳು ಕೊಲೆ ಪ್ರಕರಣಗಳಲ್ಲಿ ವಿಲ್ಸನ್ ಗಾರ್ಡನ್ ನಾಗ ಎ1 ಆರೋಪಿ ಆಗಿದ್ದಾನೆ. 2) ಕಾಡುಬೀಸನಹಳ್ಳಿ ರೋಹಿತ್ ( ಮಾರತ್ ಹಳ್ಳಿ ರೌಡಿಶೀಟರ್) ರೋಹಿತ್ ಮೇಲೆ 14 ಕೇಸ್​ಗಳು ಇದ್ದು, ಸುಮಾರು 6 ಕ್ಕೂ ಹೆಚ್ಚು ಕೊಲೆ ಯತ್ನ ಕೇಸ್​ಗಳು ಹಾಗೂ 5 ಕಳ್ಳತನ ಹಾಗೂ ಸುಲಿಗೆ ಕೇಸ್​ಗಳು ಇದೆ. 3) ಕ್ಯಾಟ್​ ಮಂಜ ( ಸಂಪಿಗೆಹಳ್ಳಿ ರೌಡಿಶೀಟರ್) ಈತನ ಮೇಲೆ 16ಕ್ಕೂ ಹೆಚ್ಚು ಕೊಲೆ, ಕೊಲೆಯತ್ನ, ದರೋಡೆ ಕೇಸ್​ಗಳಿವೆ. 4) ಮುನಿಕೃಷ್ಣ ( ಅಮೃತಹಳ್ಳಿ ರೌಡಿಶೀಟರ್) ಮುನಿಕೃಷ್ಣ ಮೇಲೆ 3 ಕೊಲೆ ಹಾಗೂ 4 ಕೊಲೆಯತ್ನ ಕೇಸ್​ಗಳು ದಾಖಲಾಗಿವೆ. ಸದ್ಯ ಗಡಿಪಾರು ಆದೇಶದ ಹಿನ್ನಲೆ ನಗರ ಬಿಟ್ಟಿದ್ದಾನೆ.

5) ಮಂಜುನಾಥ್ ಅಲಿಯಾಸ್ ಮೋಲ(ಅಮೃತಹಳ್ಳಿ ಠಾಣೆಯ ರೌಡಿಶೀಟರ್) ಇತನ ಮೇಲೆ 2 ಕೊಲೆ ಹಾಗೂ 5 ಕೊಲೆಯತ್ನ ಕೇಸ್ ಸೇರಿ 15 ಕೇಸ್ ಗಳು ಇದೆ, ಕಳೆದ ಮೇ ತಿಂಗಳಲ್ಲಿ ಇತನನ್ನ ಗಡಿಪಾರು ಮಾಡಲಾಗಿತ್ತು.  ಆದ್ರೆ ಗಡಿಪಾರು ಆದೇಶ ಉಲ್ಲಂಘನೆ ಮಾಡಿ ಮತ್ತೆ ಕ್ರೈಂ ನಲ್ಲಿ ಭಾಗಿಯಾಗಿದ್ದ, ಈ ಕಾರಣಕ್ಕೆ ಗೂಂಡಾ ಆಕ್ಟ್ ಹಾಕಲು ಪೊಲೀಸರು ಸಿದ್ದತೆ ನಡೆಸಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ