Bengaluru Crime: 40 ಸೆಕೆಂಡ್​ನಲ್ಲಿ 26 ಬಾರಿ ಕೊಚ್ಚಿ ರೌಡಿಶೀಟರ್​ ಬರ್ಬರ ಕೊಲೆ, ಸಿಸಿಟಿವಿಯಲ್ಲಿ ಸೆರೆಯಾಯ್ತು ಸಹಚರರ ಕೃತ್ಯ

ರೇಣುಕುಮಾರ್  ಸಹಚರರಾದ ಶ್ರೀಕಾಂತ್ ಹಾಗೂ ಪ್ರಶಾಂತ್ ಇಬ್ಬರು ಸೇರಿಕೊಂಡು ಹತ್ಯೆ ಮಾಡಿದ್ದರು. 40 ಸೆಕೆಂಡ್​ನಲ್ಲಿ 26 ಬಾರಿ ಕೊಚ್ಚಿ ರೌಡಿಶೀಟರ್​ ಬರ್ಬರ ಕೊಲೆ ಮಾಡಿದ್ದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

Bengaluru Crime: 40 ಸೆಕೆಂಡ್​ನಲ್ಲಿ 26 ಬಾರಿ ಕೊಚ್ಚಿ ರೌಡಿಶೀಟರ್​ ಬರ್ಬರ ಕೊಲೆ, ಸಿಸಿಟಿವಿಯಲ್ಲಿ ಸೆರೆಯಾಯ್ತು ಸಹಚರರ ಕೃತ್ಯ
(ಎಡ ಚಿತ್ರದಲ್ಲಿ) ಶ್ರೀಕಾಂತ್, (ಎಡದಿಂದ ಬಲಕ್ಕೆ) ಪ್ರಶಾಂತ್, (ಕೊನೆಗೆ) ಕೊಲೆಯಾದ ರೇಣುಕುಮಾರ್
Follow us
|

Updated on:Jun 06, 2023 | 1:16 PM

ಬೆಂಗಳೂರು: ನಗರದ ಮಹದೇವಪುರದಲ್ಲಿ ಮೇ 25ರಂದು ಬರ್ಬರವಾಗಿ ಕೊಲೆಯಾದ ರೌಡಿಶೀಟರ್ ರೇಣುಕುಮಾರ್ ಹತ್ಯೆಯ ದೃಶ್ಯ ವೈರಲ್​ ಆಗುತ್ತಿದೆ(Murder). ಸಿಸಿಟಿವಿಯಲ್ಲಿ ರೆಕಾರ್ಡ್​ ಆದ ಹತ್ಯೆಯ ದೃಶ್ಯಗಳು ಎಂತವರನ್ನೂ ಬೆಚ್ಚಿಬೀಳಿಸುವಂತಿವೆ. ರೇಣುಕುಮಾರ್(​Rowdy Sheeter Renukumar)  ಸಹಚರರಾದ ಶ್ರೀಕಾಂತ್ ಹಾಗೂ ಪ್ರಶಾಂತ್ ಇಬ್ಬರು ಸೇರಿಕೊಂಡು ಹತ್ಯೆ ಮಾಡಿದ್ದರು. 40 ಸೆಕೆಂಡ್​ನಲ್ಲಿ 26 ಬಾರಿ ಕೊಚ್ಚಿ ರೌಡಿಶೀಟರ್​ ಬರ್ಬರ ಕೊಲೆ ಮಾಡಿದ್ದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಧಮ್ಕಿ ಹಾಕಿದ ಎಂಬ ಕಾರಣಕ್ಕೆ ಕೊಲೆ

ಈ ಹಿಂದೆ ಜೈಲಿನಿಂದ ಹೊರಬಂದ ರೇಣುಕುಮಾರ್​​ ತನ್ನ ಸಹಚರರಿಗೆ ಧಮ್ಕಿ ಹಾಕಿದ್ದ. ನಾನು ಜೈಲಿನಲ್ಲಿದ್ದಾಗ ಏರಿಯಾದಲ್ಲಿ ನಿಮ್ಮ ಹವಾ ಜಾಸ್ತಿಯಾಗಿದೆ. ನೀವು ನನ್ನ ಶಿಷ್ಯಂದಿರು, ಇನ್ಮುಂದೆ ಏನು ಮಾಡಬೇಕಾದರೂ ನನ್ನ ಪರ್ಮಿಷನ್​ ತೆಗೆದುಕೊಳ್ಳಬೇಕೆಂದು ಪ್ರಶಾಂತ್, ಶ್ರೀಕಾಂತ್​ಗೆ ಧಮ್ಕಿ ಹಾಕಿದ್ದ. ಇದರಿಂದ ಸಿಟ್ಟಿಗೆದ್ದ ಸಹಕರರು ಪ್ಲಾನ್ ಮಾಡಿ ಅಟ್ಯಾಕ್ ಮಾಡಿದ್ದಾರೆ. ಕೇವಲ 40 ಸೆಕೆಂಡ್​ನಲ್ಲಿ 26 ಬಾರಿ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.

ಇದನ್ನೂ ಓದಿ: Bengaluru News: ಪ್ರಿಯಕರನಿಂದ ಪ್ರಿಯತಮೆಯ ಕೊಲೆ,‌ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನ

ಇನ್ನು ಕೊಲೆಯಾದ ರೇಣುಕುಮಾರ್ ಕೆಲ ದಿನಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ. ಕೊಲೆ, ಕೊಲೆ ಯತ್ನ, ದರೋಡೆ ಸೇರಿದಂತೆ 7ಕ್ಕೂ ಹೆಚ್ಚು ಪ್ರಕರಣಗಳು ಮೃತ ರೇಣುಕುಮಾರ್ ಮೇಲಿತ್ತು. ವಿವಿಧ ಕೇಸ್​ಗಳಲ್ಲಿ ಜೈಲುಪಾಲಾಗಿದ್ದ ರೌಡಿಶೀಟರ್​ ಜೈಲಿನಿಂದ ಹೊರಬಂದು ಸಹಚರರಿಗೆ ಧಮ್ಮಿ ಹಾಕಿ ಈಗ ಕೊಲೆಯಾಗಿದ್ದಾನೆ. ಸದ್ಯ ಮಹದೇವಪುರ ಪೊಲೀಸರು ಪ್ರಶಾಂತ್, ಶ್ರೀಕಾಂತ್, ವಸಂತ್​ನ್ನು​ ಬಂಧಿಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:04 pm, Tue, 6 June 23