
ಬೆಂಗಳೂರು, (ಅಕ್ಟೋಬರ್ 22): ದೀಪಾವಳಿ ಹಬ್ಬಕ್ಕೆ (deepavali Festival) ಪಟಾಕಿ ಸಿಡಿಸುವ ಸಂಭ್ರಮದ ವೇಳೆ ಬೆಂಗಳೂರಿನಲ್ಲಿಮಕ್ಕಳು ಸೇರಿದಂತೆ 90ಕ್ಕೂ ಹೆಚ್ಚು ಮಂದಿ ಕಣ್ಣಿಗೆ ಗಾಯಗಳಾಗಿ ನಗರದ ವಿವಿಧ ಕಣ್ಣಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಪಟಾಕಿ (fire crackers) ) ಸಿಡಿಸುವವರಿಗಿಂತ ನೋಡುತ್ತಾ ನಿಂತವರು ಮತ್ತು ದಾರಿ ಹೋಕರೆ ಪಟಾಕಿಯಿಂದ ಹೆಚ್ಚು ಗಾಯಗೊಂಡಿದ್ದಾರೆ.
ನಾರಾಯಣ ನೇತ್ರಾಲಯದಲ್ಲಿ 51 ಜನರಿಗೆ ಚಿಕಿತ್ಸೆ ನೀಡಲಾಗಿದ್ದು, ಅದರಲ್ಲಿ 27 ಮಕ್ಕಳಿದ್ದಾರೆ. ಆರು ಜನರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ. ಉಳಿದವರು ಹೊರ ರೋಗಿಗಳಾಗಿ ಮತ್ತು ಒಳ ರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ. 51 ಜನರಲ್ಲಿ 38 ಜನರು ತಾವೇ ಪಟಾಕಿ ಸಿಡಿಸುವಾಗ ಗಾಯಗೊಂಡಿದ್ದಾರೆ. ಉಳಿದವರು ಬೇರೆಯವರು ಸಿಡಿಸಿದ ಪಟಾಕಿ ಕಿಡಿ ಸಿಡಿದು ಗಾಯಗೊಂಡಿದ್ದಾರೆ. ನಾರಾಯಣ ನೇತ್ರಾಲಯದಲ್ಲಿ 43 ಜನ್ರಿಗೆ ಚಿಕಿತ್ಸೆ ನೀಡಲಾಗಿದ್ದು, ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ 13 ಮಂದಿ ಚಿಕಿತ್ಸೆ ಪಡೆದಿದ್ದಾರೆ. ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ 13 ಪ್ರಕರಣ ದಾಖಲಾಗಿದ್ರೆ, ಪ್ರಭಾ ಕಣ್ಣಿನ ಆಸ್ಪತ್ರೆಯಲ್ಲಿ 6 ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದ್ದು. ಅಗರ್ವಾಲ್ ಕಣ್ಣಿನ ಆಸ್ಪತ್ರೆಯಲ್ಲಿ ಮೂವರು ಟ್ರೀಟ್ಮೆಂಟ್ ಪಡೆದಿದ್ದಾರೆ.
ಪಟಾಕಿ ಸಿಡಿತದಿಂದ 90ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ನಿಜ. ಆದ್ರೆ ಕೆಲವರು ಕಣ್ಣನ್ನೇ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಪಟಾಕಿ ಸಿಡಿತದಿಂದ 20 ವರ್ಷದ ಯುವಕ ಶಾಶ್ವತ ದೃಷ್ಠಿ ಸಮಸ್ಯೆಗೆ ತುತ್ತಾಗಿದ್ದಾನೆ. ಪಟಾಕಿ ಸಿಡಿದು ಕಣ್ಣಿನ ದೃಷ್ಠಿ ಸಂಪೂರ್ಣ ಹಾನಿ ಆಗಿದೆ. ಬಿಹಾರ ಮೂಲದ ಯುವಕ ಬೆಂಗಳೂರಿನ ಅಕ್ಕಿಪೇಟೆಯಲ್ಲಿ ವಾಸವಾಗಿದ್ದು, ಇಡೀ ಕುಟುಂಬ ಈತನ ದುಡಿಮೆ ಮೇಲೆ ಅವಲಂಬನೆ ಆಗಿದೆ. ಸದ್ಯ ಮಿಂಟೋ ಆಸ್ಪತ್ರೆಯಲ್ಲಿ ಯುವಕನಿಗೆ ಚಿಕಿತ್ಸೆ ನೀಡಲಾಗ್ತಿದೆ.
ರಸ್ತೆಯಲ್ಲಿ ನಡೆದಕೊಂಡು ಹೋಗುತ್ತಿದ್ದ 67 ವರ್ಷದ ವಿದೇಶಿ ವ್ಯಕ್ತಿಯ ಕಣ್ಣಿಗೆ ಪಟಾಕಿಯ ಕಿಡಿ ಕಣ್ಣಿಗೆ ತಾಗಿ ಗಾಯಗೊಂಡಿದ್ದಾರೆ. ಅವರ ಕಣ್ಣಿನ ರೆಟಿನಾ ಪರೀಕ್ಷೆ ನಡೆಸಲು ಸೂಚಿಸಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಹತ್ತು ವರ್ಷದ ಬಾಲಕ ಪಟಾಕಿ ಹಚ್ಚುವಾಗ ಕಿಡಿ ಸಿಡಿತದಿಂದ ಅವರ ಕಣ್ಣಿನ ರೆಪ್ಪೆ, ಕೂದಲು ಸುಟ್ಟಿದ್ದು, ಕಾರ್ನಿಯಾಗೆ ಪಟಾಕಿ ಕಣಗಳು ಸೇರಿ ಹಾನಿಯಾಗಿದೆ.
ಪಟಾಕಿ ಸಿಡಿದು 13 ವರ್ಷದ ಬಾಲಕನ ಕಣ್ಣಿಗೆ ತೀವ್ರ ಗಾಯ ಆಗಿದೆ. ಬಾಲಕನಿಗೆ ಶೇಕಡಾ 70 ರಷ್ಟು ವಿಷನ್ ಸಮಸ್ಯೆ ಆಗಿದ್ದು, ಬಾಲಕನ ಕಣ್ಣಿಗೆ ಸರ್ಜರಿ ಅಗತ್ಯ ಎಂದು ವೈದ್ಯರು ಹೇಳಿದ್ದಾರೆ. 6ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ, ಸದ್ಯ ಪ್ರಭಾ ಕಣ್ಣಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.
ಪಟಾಕಿ ಸಿಡಿಸುವಾಗ ಹಲವರ ಕಣ್ಣಿಗೆ ಗಾಯವಾಗಿದ್ದು, ಇಂತಹ ಪ್ರಕರಣ ಆದಾಗ ಏನೂ ಮಾಡುವುದಕ್ಕೆ ಆಗಲ್ಲ. ಹೀಗಾಗಿ ಪಟಾಕಿ ಹೊಡೆಯುವಾಗ ಜನರು ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಲಕ್ಷ ಲಕ್ಷ ವಾಹನಗಳು ಹೊರಸೂಸೋ ಹೊಗೆಯಿಂದ ಬೆಂಗಳೂರಿನ ಪರಿಸರ ಹದಗೆಟ್ಟಿದೆ. ಇದರ ನಡುವೆ ದೀಪಾವಳಿ ಪಟಾಕಿಯಿಂದಾಗಿ ಮತ್ತಷ್ಟು ಹದಗೆಟ್ಟಿದೆ. BWSSB ಕಾಡುಬೀಸನಹಳ್ಳಿಯಲ್ಲಿ AQI ಅಂದ್ರೆ ಏರ್ ಕ್ವಾಲಿಟಿ ಇಂಡೆಕ್ಸ್ ಅರ್ಥಾತ್ ಗಾಳಿಯ ಗುಣಮಟ್ಟ 140 ಆಗಿದೆ. ಅಂದ್ರೆ ಇಲ್ಲೇ ಹೆಚ್ಚು ಮಾಲಿನ್ಯ ಆಗಿರುವುದು ಕಂಡುಬಂದಿದೆ. ಮೆಜೆಸ್ಟಿಕ್ ಭಾಗದಲ್ಲಿ ವಾಯು ಗುಣಮಟ್ಟ 116 ಆಗಿದ್ರೆ, BTM ಲೇಔಟ್ 90 ಆಗಿದೆ. ಬಾಪೂಜಿ ನಗರದಲ್ಲಿ 88 ಇದ್ದು, ಜಯನಗರದಲ್ಲಿ 80 AQI ದಾಖಲಾಗಿದೆ. ಇತರೆ ಏರಿಯಾಗಳಿಗೆ ಹೋಲಿಸಿದ್ರೆ ಹೆಬ್ಬಾಳ ಕಡಿಮೆ ವಾಯು ಮಾಲಿನ್ಯ ಆಗಿದ್ದು, ಇಲ್ಲಿ 79 AQI ದಾಖಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.