AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿಗೆ ಬೆಂಗಳೂರಿನಲ್ಲಿ ಅಧಿಕ ಪಟಾಕಿ ಸಿಡಿತ: ವಾಯು ಮಾಲಿನ್ಯ ಏರಿಕೆ

ದೀಪಾವಳಿ ಹಬ್ಬದ ಎರಡನೇ ದಿನ ವಾಯುಮಾಲಿನ್ಯ ಡಬಲ್ ಆಗಿದೆ. ಹಸಿರು ಪಟಾಕಿಯ ಬಗ್ಗೆ ಹೆಚ್ಚು ಒತ್ತು ನೀಡಿದರೂ ಸಿಲಿಕಾನ್ ಸಿಟಿಯಲ್ಲಿ ವಾಯುಗುಣಮಟ್ಟ ಸೂಚ್ಯಂಕ ಗಂಭೀರ ಸ್ಥಿತಿಗೆ ಹೋಗಿದ್ದು, ಆತಂಕಕ್ಕೆ ಕಾರಣವಾಗಿದೆ.

ದೀಪಾವಳಿಗೆ ಬೆಂಗಳೂರಿನಲ್ಲಿ ಅಧಿಕ ಪಟಾಕಿ ಸಿಡಿತ: ವಾಯು ಮಾಲಿನ್ಯ ಏರಿಕೆ
ಸಾಂದರ್ಭಿಕ ಚಿತ್ರ
Poornima Agali Nagaraj
| Edited By: |

Updated on: Nov 14, 2023 | 7:30 AM

Share

ಬೆಂಗಳೂರು ನ.14: ದೀಪಾವಳಿ (Deepavali) ಹಬ್ಬ ಪ್ರಯುಕ್ತ ರಾಜಧಾನಿ ಜನರು ಭರ್ಜರಿಯಾಗಿ ಪಟಾಕಿ ಸಿಡಿಸಿದ ಪರಿಣಾಮ ನಗರದಲ್ಲಿ ವಾಯು ಮಾಲಿನ್ಯ ಹೆಚ್ಚಳವಾಗಿದೆ. ದೀಪಾವಳಿ ಹಬ್ಬದ ಎರಡನೇ ದಿನ ವಾಯುಮಾಲಿನ್ಯ ಡಬಲ್ ಆಗಿದೆ. ಹಸಿರು ಪಟಾಕಿಯ ಬಗ್ಗೆ ಹೆಚ್ಚು ಒತ್ತು ನೀಡಿದರೂ ಸಿಲಿಕಾನ್ ಸಿಟಿಯಲ್ಲಿ (Bengaluru) ವಾಯುಗುಣಮಟ್ಟ ಸೂಚ್ಯಂಕ ಗಂಭೀರ ಸ್ಥಿತಿಗೆ ಹೋಗಿದ್ದು, ಆತಂಕಕ್ಕೆ ಕಾರಣವಾಗಿದೆ. ಈ ವಾಯು ಮಾಲಿನ್ಯದಿಂದ ಆರೋಗ್ಯದ ಮೇಲೆ ಭಾರಿ ಪರಿಣಾಮ ಬೀಳಲಿದೆ. ಉಸಿರಾಟದ ಸಮಸ್ಯೆ, ಅಸ್ತಮ, ಕೆಮ್ಮು ರೋಗಗಳಿಂದ ಬಳಲುತ್ತಿರುವವರಿಗೆ ಮಾಲಿನ್ಯ ವಿಷವಾಗಬಹುದು ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಎಚ್ಚರಿಕೆ ನೀಡಿದೆ.

ಸದ್ಯ ಬೆಂಗಳೂರಿನ ವಾಯು ಗುಣಮಟ್ಟ (ಎಕ್ಯೂಐ) 100 ರ ಗಡಿ ದಾಟಿದೆ. ಹಾಗಾದರೆ ನಗರದ ಯಾವ ಯಾವ ಪ್ರದೇಶದಲ್ಲಿ ಎಷ್ಟು ಹೆಚ್ಚಳವಾಗಿದೆ? ಇಲ್ಲಿದೆ ಅಂಕಿ ಅಂಶ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪಟಾಕಿ ಅವಘಡ, ದೀಪಾವಳಿಯ 2ನೇ ದಿನ ಗಾಯಗೊಂಡವರ ಸಂಖ್ಯೆ 43ಕ್ಕೆ ಏರಿಕೆ

  1. ಹೆಬ್ಬಾಳದಲ್ಲಿ ಸಾಮಾನ್ಯ ದಿನಗಳಲ್ಲಿ 75 ರಷ್ಟು ಮಾಲಿನ್ಯ ಇರುತ್ತಿತ್ತು. ಹಬ್ಬದ ಬಳಿಕ 176 ಅನ್ನು ದಾಟಿದೆ.‌
  2. ಜಯನಗರದಲ್ಲಿ 105 ರಿಂದ 282ಕ್ಕೆ ಏರಿಕೆಯಾಗಿದೆ.
  3. ನಿಮ್ಯಾನ್ಸ್ ಆಸ್ಪತ್ರೆ ಬಳಿ 51 ರಿಂದ 179ಕ್ಕೆ ಜಾಸ್ತಿಯಾಗಿದೆ.
  4. ಸಿಲ್ಕ್ ಬೋರ್ಡ್​​ನಲ್ಲಿ 68 ರಿಂದ 175ಕ್ಕೆ ಏರಿಕೆಯಾಗಿದೆ.
  5. ಮೆಜೆಸ್ಟಿಕ್​ನಲ್ಲಿ 67 ರಿಂದ 101ಕ್ಕೆ ಏರಿಕೆಯಾಗಿದೆ.
  6. ಬಸವೇಶ್ವರ ನಗರದಲ್ಲಿ 39 ರಿಂದ 82ಕ್ಕೆ ಜಾಸ್ತಿಯಾಗಿದೆ.
  7. ಜಿಗಣಿಯಲ್ಲಿ 80 ರಿಂದ 128ಕ್ಕೆ ಏರಿಕೆಯಾಗಿದೆ.
  8. ಕಸ್ತೂರಿನಗರದಲ್ಲಿ 57 ರಿಂದ 77ಕ್ಕೆ ಏರಿಕೆಯಾಗಿದೆ.
  9. ಪೀಣ್ಯದಲ್ಲಿ 80 ರಿಂದ 108ಕ್ಕೆ ತಲುಪಿದೆ.
  10. ಮೈಲಸಂದ್ರದಲ್ಲಿ 78 ರಿಂದ 187 ಕ್ಕೆ ಏರಿಕೆಯಾಗಿದೆ.

ಈ ಕಾರಣದಿಂದಾ ಗಾಳಿಯ ಗುಣಮಟ್ಟ ಕುಸಿದಿದ್ದು, ಮಕ್ಕಳು ಹಾಗೂ ವಯಸ್ಕರು ಎಚ್ಚರಿಕೆಯಿಂದ ಇರಬೇಕಿದೆ. ಕೆಆರ್​ಪುರಂನಲ್ಲೂ ಮಾಲಿನ್ಯ ಹೆಚ್ಚಳವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ