AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿಗೆ ಬೆಂಗಳೂರಿನಲ್ಲಿ ಅಧಿಕ ಪಟಾಕಿ ಸಿಡಿತ: ವಾಯು ಮಾಲಿನ್ಯ ಏರಿಕೆ

ದೀಪಾವಳಿ ಹಬ್ಬದ ಎರಡನೇ ದಿನ ವಾಯುಮಾಲಿನ್ಯ ಡಬಲ್ ಆಗಿದೆ. ಹಸಿರು ಪಟಾಕಿಯ ಬಗ್ಗೆ ಹೆಚ್ಚು ಒತ್ತು ನೀಡಿದರೂ ಸಿಲಿಕಾನ್ ಸಿಟಿಯಲ್ಲಿ ವಾಯುಗುಣಮಟ್ಟ ಸೂಚ್ಯಂಕ ಗಂಭೀರ ಸ್ಥಿತಿಗೆ ಹೋಗಿದ್ದು, ಆತಂಕಕ್ಕೆ ಕಾರಣವಾಗಿದೆ.

ದೀಪಾವಳಿಗೆ ಬೆಂಗಳೂರಿನಲ್ಲಿ ಅಧಿಕ ಪಟಾಕಿ ಸಿಡಿತ: ವಾಯು ಮಾಲಿನ್ಯ ಏರಿಕೆ
ಸಾಂದರ್ಭಿಕ ಚಿತ್ರ
Poornima Agali Nagaraj
Poornima Agali Nagaraj| Edited By: ವಿವೇಕ ಬಿರಾದಾರ|

Updated on: Nov 14, 2023 | 7:30 AM

Share

ಬೆಂಗಳೂರು ನ.14: ದೀಪಾವಳಿ (Deepavali) ಹಬ್ಬ ಪ್ರಯುಕ್ತ ರಾಜಧಾನಿ ಜನರು ಭರ್ಜರಿಯಾಗಿ ಪಟಾಕಿ ಸಿಡಿಸಿದ ಪರಿಣಾಮ ನಗರದಲ್ಲಿ ವಾಯು ಮಾಲಿನ್ಯ ಹೆಚ್ಚಳವಾಗಿದೆ. ದೀಪಾವಳಿ ಹಬ್ಬದ ಎರಡನೇ ದಿನ ವಾಯುಮಾಲಿನ್ಯ ಡಬಲ್ ಆಗಿದೆ. ಹಸಿರು ಪಟಾಕಿಯ ಬಗ್ಗೆ ಹೆಚ್ಚು ಒತ್ತು ನೀಡಿದರೂ ಸಿಲಿಕಾನ್ ಸಿಟಿಯಲ್ಲಿ (Bengaluru) ವಾಯುಗುಣಮಟ್ಟ ಸೂಚ್ಯಂಕ ಗಂಭೀರ ಸ್ಥಿತಿಗೆ ಹೋಗಿದ್ದು, ಆತಂಕಕ್ಕೆ ಕಾರಣವಾಗಿದೆ. ಈ ವಾಯು ಮಾಲಿನ್ಯದಿಂದ ಆರೋಗ್ಯದ ಮೇಲೆ ಭಾರಿ ಪರಿಣಾಮ ಬೀಳಲಿದೆ. ಉಸಿರಾಟದ ಸಮಸ್ಯೆ, ಅಸ್ತಮ, ಕೆಮ್ಮು ರೋಗಗಳಿಂದ ಬಳಲುತ್ತಿರುವವರಿಗೆ ಮಾಲಿನ್ಯ ವಿಷವಾಗಬಹುದು ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಎಚ್ಚರಿಕೆ ನೀಡಿದೆ.

ಸದ್ಯ ಬೆಂಗಳೂರಿನ ವಾಯು ಗುಣಮಟ್ಟ (ಎಕ್ಯೂಐ) 100 ರ ಗಡಿ ದಾಟಿದೆ. ಹಾಗಾದರೆ ನಗರದ ಯಾವ ಯಾವ ಪ್ರದೇಶದಲ್ಲಿ ಎಷ್ಟು ಹೆಚ್ಚಳವಾಗಿದೆ? ಇಲ್ಲಿದೆ ಅಂಕಿ ಅಂಶ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪಟಾಕಿ ಅವಘಡ, ದೀಪಾವಳಿಯ 2ನೇ ದಿನ ಗಾಯಗೊಂಡವರ ಸಂಖ್ಯೆ 43ಕ್ಕೆ ಏರಿಕೆ

  1. ಹೆಬ್ಬಾಳದಲ್ಲಿ ಸಾಮಾನ್ಯ ದಿನಗಳಲ್ಲಿ 75 ರಷ್ಟು ಮಾಲಿನ್ಯ ಇರುತ್ತಿತ್ತು. ಹಬ್ಬದ ಬಳಿಕ 176 ಅನ್ನು ದಾಟಿದೆ.‌
  2. ಜಯನಗರದಲ್ಲಿ 105 ರಿಂದ 282ಕ್ಕೆ ಏರಿಕೆಯಾಗಿದೆ.
  3. ನಿಮ್ಯಾನ್ಸ್ ಆಸ್ಪತ್ರೆ ಬಳಿ 51 ರಿಂದ 179ಕ್ಕೆ ಜಾಸ್ತಿಯಾಗಿದೆ.
  4. ಸಿಲ್ಕ್ ಬೋರ್ಡ್​​ನಲ್ಲಿ 68 ರಿಂದ 175ಕ್ಕೆ ಏರಿಕೆಯಾಗಿದೆ.
  5. ಮೆಜೆಸ್ಟಿಕ್​ನಲ್ಲಿ 67 ರಿಂದ 101ಕ್ಕೆ ಏರಿಕೆಯಾಗಿದೆ.
  6. ಬಸವೇಶ್ವರ ನಗರದಲ್ಲಿ 39 ರಿಂದ 82ಕ್ಕೆ ಜಾಸ್ತಿಯಾಗಿದೆ.
  7. ಜಿಗಣಿಯಲ್ಲಿ 80 ರಿಂದ 128ಕ್ಕೆ ಏರಿಕೆಯಾಗಿದೆ.
  8. ಕಸ್ತೂರಿನಗರದಲ್ಲಿ 57 ರಿಂದ 77ಕ್ಕೆ ಏರಿಕೆಯಾಗಿದೆ.
  9. ಪೀಣ್ಯದಲ್ಲಿ 80 ರಿಂದ 108ಕ್ಕೆ ತಲುಪಿದೆ.
  10. ಮೈಲಸಂದ್ರದಲ್ಲಿ 78 ರಿಂದ 187 ಕ್ಕೆ ಏರಿಕೆಯಾಗಿದೆ.

ಈ ಕಾರಣದಿಂದಾ ಗಾಳಿಯ ಗುಣಮಟ್ಟ ಕುಸಿದಿದ್ದು, ಮಕ್ಕಳು ಹಾಗೂ ವಯಸ್ಕರು ಎಚ್ಚರಿಕೆಯಿಂದ ಇರಬೇಕಿದೆ. ಕೆಆರ್​ಪುರಂನಲ್ಲೂ ಮಾಲಿನ್ಯ ಹೆಚ್ಚಳವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Poornima Agali Nagaraj
Poornima Agali Nagaraj
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ