Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿಗೆ ಬೆಂಗಳೂರಿನಲ್ಲಿ ಅಧಿಕ ಪಟಾಕಿ ಸಿಡಿತ: ವಾಯು ಮಾಲಿನ್ಯ ಏರಿಕೆ

ದೀಪಾವಳಿ ಹಬ್ಬದ ಎರಡನೇ ದಿನ ವಾಯುಮಾಲಿನ್ಯ ಡಬಲ್ ಆಗಿದೆ. ಹಸಿರು ಪಟಾಕಿಯ ಬಗ್ಗೆ ಹೆಚ್ಚು ಒತ್ತು ನೀಡಿದರೂ ಸಿಲಿಕಾನ್ ಸಿಟಿಯಲ್ಲಿ ವಾಯುಗುಣಮಟ್ಟ ಸೂಚ್ಯಂಕ ಗಂಭೀರ ಸ್ಥಿತಿಗೆ ಹೋಗಿದ್ದು, ಆತಂಕಕ್ಕೆ ಕಾರಣವಾಗಿದೆ.

ದೀಪಾವಳಿಗೆ ಬೆಂಗಳೂರಿನಲ್ಲಿ ಅಧಿಕ ಪಟಾಕಿ ಸಿಡಿತ: ವಾಯು ಮಾಲಿನ್ಯ ಏರಿಕೆ
ಸಾಂದರ್ಭಿಕ ಚಿತ್ರ
Follow us
Poornima Agali Nagaraj
| Updated By: ವಿವೇಕ ಬಿರಾದಾರ

Updated on: Nov 14, 2023 | 7:30 AM

ಬೆಂಗಳೂರು ನ.14: ದೀಪಾವಳಿ (Deepavali) ಹಬ್ಬ ಪ್ರಯುಕ್ತ ರಾಜಧಾನಿ ಜನರು ಭರ್ಜರಿಯಾಗಿ ಪಟಾಕಿ ಸಿಡಿಸಿದ ಪರಿಣಾಮ ನಗರದಲ್ಲಿ ವಾಯು ಮಾಲಿನ್ಯ ಹೆಚ್ಚಳವಾಗಿದೆ. ದೀಪಾವಳಿ ಹಬ್ಬದ ಎರಡನೇ ದಿನ ವಾಯುಮಾಲಿನ್ಯ ಡಬಲ್ ಆಗಿದೆ. ಹಸಿರು ಪಟಾಕಿಯ ಬಗ್ಗೆ ಹೆಚ್ಚು ಒತ್ತು ನೀಡಿದರೂ ಸಿಲಿಕಾನ್ ಸಿಟಿಯಲ್ಲಿ (Bengaluru) ವಾಯುಗುಣಮಟ್ಟ ಸೂಚ್ಯಂಕ ಗಂಭೀರ ಸ್ಥಿತಿಗೆ ಹೋಗಿದ್ದು, ಆತಂಕಕ್ಕೆ ಕಾರಣವಾಗಿದೆ. ಈ ವಾಯು ಮಾಲಿನ್ಯದಿಂದ ಆರೋಗ್ಯದ ಮೇಲೆ ಭಾರಿ ಪರಿಣಾಮ ಬೀಳಲಿದೆ. ಉಸಿರಾಟದ ಸಮಸ್ಯೆ, ಅಸ್ತಮ, ಕೆಮ್ಮು ರೋಗಗಳಿಂದ ಬಳಲುತ್ತಿರುವವರಿಗೆ ಮಾಲಿನ್ಯ ವಿಷವಾಗಬಹುದು ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಎಚ್ಚರಿಕೆ ನೀಡಿದೆ.

ಸದ್ಯ ಬೆಂಗಳೂರಿನ ವಾಯು ಗುಣಮಟ್ಟ (ಎಕ್ಯೂಐ) 100 ರ ಗಡಿ ದಾಟಿದೆ. ಹಾಗಾದರೆ ನಗರದ ಯಾವ ಯಾವ ಪ್ರದೇಶದಲ್ಲಿ ಎಷ್ಟು ಹೆಚ್ಚಳವಾಗಿದೆ? ಇಲ್ಲಿದೆ ಅಂಕಿ ಅಂಶ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪಟಾಕಿ ಅವಘಡ, ದೀಪಾವಳಿಯ 2ನೇ ದಿನ ಗಾಯಗೊಂಡವರ ಸಂಖ್ಯೆ 43ಕ್ಕೆ ಏರಿಕೆ

  1. ಹೆಬ್ಬಾಳದಲ್ಲಿ ಸಾಮಾನ್ಯ ದಿನಗಳಲ್ಲಿ 75 ರಷ್ಟು ಮಾಲಿನ್ಯ ಇರುತ್ತಿತ್ತು. ಹಬ್ಬದ ಬಳಿಕ 176 ಅನ್ನು ದಾಟಿದೆ.‌
  2. ಜಯನಗರದಲ್ಲಿ 105 ರಿಂದ 282ಕ್ಕೆ ಏರಿಕೆಯಾಗಿದೆ.
  3. ನಿಮ್ಯಾನ್ಸ್ ಆಸ್ಪತ್ರೆ ಬಳಿ 51 ರಿಂದ 179ಕ್ಕೆ ಜಾಸ್ತಿಯಾಗಿದೆ.
  4. ಸಿಲ್ಕ್ ಬೋರ್ಡ್​​ನಲ್ಲಿ 68 ರಿಂದ 175ಕ್ಕೆ ಏರಿಕೆಯಾಗಿದೆ.
  5. ಮೆಜೆಸ್ಟಿಕ್​ನಲ್ಲಿ 67 ರಿಂದ 101ಕ್ಕೆ ಏರಿಕೆಯಾಗಿದೆ.
  6. ಬಸವೇಶ್ವರ ನಗರದಲ್ಲಿ 39 ರಿಂದ 82ಕ್ಕೆ ಜಾಸ್ತಿಯಾಗಿದೆ.
  7. ಜಿಗಣಿಯಲ್ಲಿ 80 ರಿಂದ 128ಕ್ಕೆ ಏರಿಕೆಯಾಗಿದೆ.
  8. ಕಸ್ತೂರಿನಗರದಲ್ಲಿ 57 ರಿಂದ 77ಕ್ಕೆ ಏರಿಕೆಯಾಗಿದೆ.
  9. ಪೀಣ್ಯದಲ್ಲಿ 80 ರಿಂದ 108ಕ್ಕೆ ತಲುಪಿದೆ.
  10. ಮೈಲಸಂದ್ರದಲ್ಲಿ 78 ರಿಂದ 187 ಕ್ಕೆ ಏರಿಕೆಯಾಗಿದೆ.

ಈ ಕಾರಣದಿಂದಾ ಗಾಳಿಯ ಗುಣಮಟ್ಟ ಕುಸಿದಿದ್ದು, ಮಕ್ಕಳು ಹಾಗೂ ವಯಸ್ಕರು ಎಚ್ಚರಿಕೆಯಿಂದ ಇರಬೇಕಿದೆ. ಕೆಆರ್​ಪುರಂನಲ್ಲೂ ಮಾಲಿನ್ಯ ಹೆಚ್ಚಳವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ