AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

50 ಹೊಸ ತಾಲೂಕುಗಳ ರಚನೆ ಜಾರಿಯಲ್ಲಿ ವಿಳಂಬ; ಸರ್ಕಾರದ ನಡೆಗೆ ಅಸಮಾಧಾನ, ಹೊಸ ಪ್ರಮಾಣಪತ್ರ ಸಲ್ಲಿಸಲು ಸೂಚನೆ

2018ರಲ್ಲಿ ರಚನೆಯಾದ ತಾಲೂಕುಗಳಲ್ಲಿ ಸೌಕರ್ಯ ಕಲ್ಪಿಸಿಲ್ಲ. ತಾಲೂಕು ಕಚೇರಿಗಳನ್ನು ಸ್ಥಾಪಿಸಿಲ್ಲವೆಂದು ಗುರುನಾಥ ವಡ್ಡೆ ಎಂಬುವವರು ಸಲ್ಲಿಸಿದ್ದ ಪಿಐಎಲ್ ವಿಚಾರಣೆ ಇಂದು ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ನಡೆದಿದೆ. ವಿಚಾರಣೆ ವೇಳೆ ಸರ್ಕಾರದ ವಿಳಂಬ ನೀತಿಗೆ ಹೈಕೋರ್ಟ್ ಅಸಮಾಧಾನ ಹೊರ ಹಾಕಿದೆ.

50 ಹೊಸ ತಾಲೂಕುಗಳ ರಚನೆ ಜಾರಿಯಲ್ಲಿ ವಿಳಂಬ; ಸರ್ಕಾರದ ನಡೆಗೆ ಅಸಮಾಧಾನ, ಹೊಸ ಪ್ರಮಾಣಪತ್ರ ಸಲ್ಲಿಸಲು ಸೂಚನೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Nov 30, 2021 | 1:52 PM

Share

ಬೆಂಗಳೂರು: 50 ಹೊಸ ತಾಲೂಕುಗಳ ರಚನೆ ಜಾರಿಯಲ್ಲಿ ವಿಳಂಬ ಹಿನ್ನೆಲೆ‌ಯಲ್ಲಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಕೈಗೆತ್ತಿಕೊಂಡಿದ್ದು ಪಿಐಎಲ್ ವಿಚಾರಣೆ ನಡೆಸಿದೆ. ರಾಜ್ಯ ಸರ್ಕಾರದ ಮೇಲೆ ಹೈಕೋರ್ಟ್ ವಿಭಾಗೀಯ ಪೀಠ ಅಸಮಾಧಾನ ಹೊರ ಹಾಕಿದ್ದು ಹೊಸ ಪ್ರಮಾಣಪತ್ರ ಸಲ್ಲಿಸಲು ಸರ್ಕಾರಕ್ಕೆ ಸೂಚಿಸಿದೆ.

2018ರಲ್ಲಿ ರಚನೆಯಾದ ತಾಲೂಕುಗಳಲ್ಲಿ ಸೌಕರ್ಯ ಕಲ್ಪಿಸಿಲ್ಲ. ತಾಲೂಕು ಕಚೇರಿಗಳನ್ನು ಸ್ಥಾಪಿಸಿಲ್ಲವೆಂದು ಗುರುನಾಥ ವಡ್ಡೆ ಎಂಬುವವರು ಸಲ್ಲಿಸಿದ್ದ ಪಿಐಎಲ್ ವಿಚಾರಣೆ ಇಂದು ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ನಡೆದಿದೆ. ವಿಚಾರಣೆ ವೇಳೆ ಸರ್ಕಾರದ ವಿಳಂಬ ನೀತಿಗೆ ಹೈಕೋರ್ಟ್ ಅಸಮಾಧಾನ ಹೊರ ಹಾಕಿದೆ. ಸದ್ಯ ಇದಕ್ಕೆ ಹಣಕಾಸಿನ ಕೊರತೆಯ ಕಾರಣ ಹೇಳಿ ರಾಜ್ಯ ಸರ್ಕಾರ ತಪ್ಪಿಸಿಕೊಳ್ಳಲು ಮುಂದಾಗಿದ್ದು ಸರ್ಕಾರದ ನಿಲುವನ್ನು ಹೈಕೋರ್ಟ್ ವಿಭಾಗೀಯ ಪೀಠ ತಳ್ಳಿ ಹಾಕಿದೆ.

ಹೊಸ ಪ್ರಮಾಣಪತ್ರ ಸಲ್ಲಿಸಲು ಸರ್ಕಾರಕ್ಕೆ ಸೂಚನೆ ನೀಡಿದೆ. ಸರ್ಕಾರ ಶೀಘ್ರ ಮೂಲ ಸೌಕರ್ಯ ಕಲ್ಪಿಸಬೇಕು. ಇಲ್ಲವಾದರೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಜರಾಗಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ.

ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ರಾಜ್ಯದಲ್ಲಿ ಹೊಸ ತಾಲೂಕುಗಳನ್ನು ರಚಿಸಲು, ದಶಕಗಳಿಂದ ಇದ್ದ ಬೇಡಿಕೆ ಈಡೇರಿಸಲು ರಾಜ್ಯ ಸರ್ಕಾರ 50 ಹೊಸ ತಾಲೂಕುಗಳನ್ನು ರಚನೆ ಮಾಡಿತ್ತು. 2018ರ ಜನವರಿಯಲ್ಲಿ ನೂತನ ತಾಲೂಕು ಕೇಂದ್ರಗಳಲ್ಲಿ ತಾಲೂಕು ಕಚೇರಿಗಳನ್ನು ತೆರೆದು ಕಾರ್ಯಾರಂಭ ಮಾಡಲು ಆದೇಶ ಹೊರಡಿಲಾಗಿತ್ತು. ಆದ್ರೆ ಎಲ್ಲಾ ಹೊಸ ತಾಲೂಕುಗಳಲ್ಲಿ ವಿವಿಧ ಇಲಾಖೆಗಳ ಕಚೇರಿಗಳು ಅಧಿಕೃತವಾಗಿ ಆರಂಭವಾಗಿರಲಿಲ್ಲ. ಹೀಗಾಗಿ ಗುರುನಾಥ ವಡ್ಡೆ 2018ರಲ್ಲಿ ರಚನೆಯಾದ ತಾಲೂಕುಗಳಲ್ಲಿ ಸೌಕರ್ಯ ಕಲ್ಪಿಸಿಲ್ಲ. ತಾಲೂಕು ಕಚೇರಿಗಳನ್ನು ಸ್ಥಾಪಿಸಿಲ್ಲವೆಂದು ಪಿಐಎಲ್ ಸಲ್ಲಿಸಿದ್ದರು.

ಇದನ್ನೂ ಓದಿ: ಆರೋಪಿ ಕೋರಿಕೆಯಂತೆ ಎಸ್ಐಟಿ ರಚನೆ- ಯುವತಿ ವಕೀಲೆ ಆಕ್ಷೇಪ; ನಾವು ಯಾರಿಗೂ ಕೇರ್ ಮಾಡೊಲ್ಲ ಎಂದ ಹೈಕೋರ್ಟ್ ಸಿಜೆ

Published On - 1:51 pm, Tue, 30 November 21

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್