AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

49th GST Meeting: ಕರ್ನಾಟಕ ಚುನಾವಣೆ ದೃಷ್ಟಿಯಲ್ಲಿ ಮಹತ್ವ ಪಡೆದ ಫೆ.18ರಂದು ದೆಹಲಿಯಲ್ಲಿ ನಡೆಯಲಿರುವ 49ನೇ ಜಿಎಸ್​ಟಿ ಸಭೆ

49ನೇ GST ಸಭೆ ದೆಹಲಿಯಲ್ಲಿ ಫೆಬ್ರವರಿ 18ರಂದು ನಡೆಯಲಿದೆ. ಈ ಸಭೆಯಲ್ಲಿ ಭಾಗಿಯಾಗುವ ನಿಟ್ಟಿನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂದು ಬೆಳಗ್ಗೆ ದೆಹಲಿಗೆ ತೆರಳಲಿದ್ದು, ರಾಜ್ಯಕ್ಕೆ ಬರಬೇಕಿರುವ ಮೊತ್ತದ ಬಗ್ಗೆ ಪ್ರಸ್ತಾಪಿಸುವ ಸಾಧ್ಯತೆ ಇದೆ.

49th GST Meeting: ಕರ್ನಾಟಕ ಚುನಾವಣೆ ದೃಷ್ಟಿಯಲ್ಲಿ ಮಹತ್ವ ಪಡೆದ ಫೆ.18ರಂದು ದೆಹಲಿಯಲ್ಲಿ ನಡೆಯಲಿರುವ 49ನೇ ಜಿಎಸ್​ಟಿ ಸಭೆ
ನಿರ್ಮಲ ಸೀತಾರಾಮನ್ ಮತ್ತು ಬಸವರಾಜ ಬೊಮ್ಮಾಯಿ
TV9 Web
| Edited By: |

Updated on: Feb 14, 2023 | 6:07 PM

Share

ಬೆಂಗಳೂರು: ದೆಹಲಿಯಲ್ಲಿ ಫೆಬ್ರವರಿ 18ರಂದು 49ನೇ GST ಸಭೆ (49th GST Meeting) ನಡೆಯಲಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ನೇತೃತ್ವದಲ್ಲಿ ನಡೆಯುವ ಈ ಸಭೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಸೇರಿದಂತೆ ವಿವಿಧ ರಾಜ್ಯದಗಳ ಮುಖ್ಯಮಂತ್ರಿಗಳು ಭಾಗಿಯಾಗಲಿದ್ದಾರೆ. ರಾಜ್ಯದಲ್ಲಿ ಬಜೆಟ್ ಮಂಡಿಸಿದ ಮರುದಿನವೇ (ಫೆ.18) ದೆಹಲಿಗೆ ಪ್ರಯಾಣ ಬೆಳೆಸಲಿರುವ ಸಿಎಂ ಬೊಮ್ಮಾಯಿ, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ ಬಾಕಿ ಜಿಎಸ್​ಟಿ ಹಣವನ್ನು ಬಿಡುಗಡೆ ಮಾಡುವಂತೆ ಬೇಡಿಕೆ ಇಡುವ ಸಾಧ್ಯತೆ ಇದೆ. ಕೇಂದ್ರದಿಂದ ಕರ್ನಾಟಕಕ್ಕೆ 12,101 ಕೋಟಿ ಜಿಎಸ್​ಟಿ ಬಾಕಿ ಹಣ ಕರ್ನಾಟಕಕ್ಕೆ ಬರಬೇಕಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ರಾಜ್ಯ ರಾಜಕಾರಣದ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್​ ಪಕ್ಷಗಳು ನಿರಂತರ ಬಸ್ ಯಾತ್ರೆ, ಜನಸಂಕಲ್ಪ ಯಾತ್ರೆ, ಪಂಚರತ್ನ ಯಾತ್ರೆ ಅಂತ ರಾಜ್ಯ ಪರ್ಯಟಣೆ ನಡೆಸುತ್ತಿವೆ. ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೇರಲು ಹವಣಿಸುತ್ತಿದೆ. ಇನ್ನೊಂದೆಡೆ ಸಮ್ಮಿಶ್ರ ಸರ್ಕಾರ ಕೆಡವಿ ಅಧಿಕಾರಕ್ಕೆ ಏರಿದ ಬಿಜೆಪಿ ಇದೀಗ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಲು ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಈ ನಿಟ್ಟಿನಲ್ಲಿ ಜಿಎಸ್​ಟಿ ಸಭೆಯನ್ನೂ ಬಿಜೆಪಿ ವರದಾನವನ್ನಾಗಿ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: Budget Time: ಫೆ. 17 ಬೆಳಗ್ಗೆ 10:15ಕ್ಕೆ ಬಜೆಟ್ ಮಂಡನೆ; ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್ ನಿರೀಕ್ಷೆಗಳೇನು?

ಸಿಎಂ ಬೊಮ್ಮಾಯಿ ಅವರು ಮುಂದಿನ ವಿಧಾನಸಭೆ ಚುನಾವಣೆ ಇರುವುದನ್ನು ನಿರ್ಮಲಾ ಸೀತಾರಾಮನ್ ಅವರ ಗಮನಕ್ಕೆ ತಂದು ಹೆಚ್ಚು ಜಿಎಸ್​ಟಿ ಹಣಕ್ಕೆ ಬೇಡಿಕೆ ಇಡುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ಮತ್ತೆ ಕಮಲ ಅರಳಿಸಲು ಕೇಂದ್ರದ ನಾಯಕರು ರಾಜ್ಯಕ್ಕೆ ಮೇಲಿಂದ ಮೇಲೆ ಬರುತ್ತಿದ್ದು, ಚುನಾವಣೆ ದೃಷ್ಟಿಯಿಂದ ಕರ್ನಾಟಕ ಹೆಚ್ಚಿನ ಜಿಎಸ್​ಟಿ ಹಣ ಬಿಡುಗಡೆ ಮಾಡುವ ಸಾಧ್ಯತೆಗಳಿವೆ. ಹಾಗಾಗಿ ಮುಖ್ಯಮಂತ್ರಿಯವರ ಈ ಭೇಟಿ ಮಹತ್ವ ಮಡೆದುಕೊಂಡಿದ್ದು, ಎಷ್ಟು ಜಿಎಸ್​ಟಿ ಹಣ ಕರ್ನಾಟಕಕ್ಕೆ ಬರಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ