AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲಿನ ದರ ಐದು ರೂ. ಹೆಚ್ಚಳಕ್ಕೆ ಹೆಚ್ಚಿದ ಒತ್ತಡ: ಶೀಘ್ರದಲ್ಲೇ ದರ ಏರಿಕೆ ಎಂದ ಸಚಿವ ವೆಂಕಟೇಶ್

ಹಾಲಿನ ದರ ಏರಿಸುವಂತೆ ಒತ್ತಡ ಹೆಚ್ಚಾಗಿದೆ ಎಂದು ಸಚಿವ ಕೆ ವೆಂಕಟೇಶ್ ಹೇಳಿದ್ದಾರೆ. ಅಲ್ಲದೆ, ಈ ಬಗ್ಗೆ ಮುಖ್ಯಮಂತ್ರಿ ಅವರ ಜೊತೆ ಚರ್ಚೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಹಾಲಿನ ದರ ಐದು ರೂ. ಹೆಚ್ಚಳಕ್ಕೆ ಹೆಚ್ಚಿದ ಒತ್ತಡ: ಶೀಘ್ರದಲ್ಲೇ ದರ ಏರಿಕೆ ಎಂದ ಸಚಿವ ವೆಂಕಟೇಶ್
ನಂದಿನ ಹಾಲಿನ ದರ ಶೀಘ್ರದಲ್ಲೇ ಏರಿಕೆ ಎಂದ ಸಚಿವ ಕೆ ವೆಂಕಟೇಶ್ (ಸಾಂದರ್ಭಿಕ ಚಿತ್ರ)Image Credit source: IANS Photo
Sunil MH
| Edited By: Rakesh Nayak Manchi|

Updated on: Jul 13, 2023 | 3:35 PM

Share

ಬೆಂಗಳೂರು: ಇತ್ತೀಚೆಗಷ್ಟೇ ಚರ್ಚೆಗೆ ಕಾರಣವಾಗಿದ್ದ ಹಾಲಿನ ದರ (Milk Price) ಏರಿಕೆ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ದರ ಏರಿಕೆಗೆ ರೈತರು ಹಾಗೂ ಹಾಲು ಒಕ್ಕೂಟಗಳಿಂದ ಒತ್ತಡ ಹೆಚ್ಚಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳಲಿದೆ. ಈ ಬಗ್ಗೆ ವಿಧಾನಸೌಧದಲ್ಲಿ ಟಿವಿ9ಗೆ ಮಾಹಿತಿ ನೀಡಿದ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ವಿಜ್ಞಾನ ಸಚಿವ ಕೆ ವೆಂಕಟೇಶ್ (K Venkatesh), ಪ್ರಮುಖವಾಗಿ ರೈತರಿಗೆ ಅನುಕೂಲವಾಗಬೇಕು. ಆದ್ದರಿಂದ ಹಾಲಿನ ದರ ಏರಿಕೆ ಮಾಡುತ್ತೇವೆ ಎಂದರು.

ವಿಧಾನಸೌಧದ ಮುಂದೆ ಮಾತನಾಡಿದ ಸಚಿವ ವೆಂಕಟೇಶ್, ಹಾಲಿನ ದರ ಏರಿಸುವಂತೆ ರೈತರು ಮತ್ತು ಒಕ್ಕೂಟದಿಂದ ಸಾಕಷ್ಟು ಒತ್ತಾಯ ಬರುತ್ತಿದೆ. ಹಾಲಿನ ದರ 5 ರೂ.ಗೆ ಹೆಚ್ಚಿಸುವಂತೆ ರೈತರು ಬೇಡಿಕೆ ಮುಂದಿಟ್ಟಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ಮಾಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.

ಇದನ್ನೂ ಓದಿ: ಕೋಲಾರ: ಏಷ್ಯಾದ ಎರಡನೇ ಅತಿದೊಡ್ಡ ಟೊಮ್ಯಾಟೊ ಮಾರುಕಟ್ಟೆಗೆ ಪೊಲೀಸ್ ಭದ್ರತೆ

ಹಾಲಿನ ದರದ ಏರಿಕೆ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದೇನೆ. ಶೀಘ್ರದಲ್ಲೇ ಹಾಲಿನ ದರ ಏರಿಕೆ ಮಾಡುತ್ತೇವೆ. ಪ್ರಮುಖವಾಗಿ ರೈತರಿಗೆ ಅನುಕೂಲವಾಗಬೇಕು. ಆದ್ದರಿಂದ ಹಾಲಿನ ದರ ಏರಿಕೆ ಮಾಡುತ್ತೇವೆ. 5 ರೂ. ಏರಿಕೆ ಮಾಡಿದರೆ ಒಳ್ಳೆಯದು ಅಂತ ಹೇಳುತ್ತಿದ್ದಾರೆ. ಮತ್ತೊಮ್ಮೆ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಅಂತಿಮ ನಿರ್ಧಾರ ಮಾಡುತ್ತೇವೆ ಎಂದರು.

ಕಾಂಗ್ರೆಸ್‌ ಸರ್ಕಾರ ಆಡಳಿತಕ್ಕೆ ಬರುತ್ತಿದ್ದಂತೆ ದಿಢೀರನೇ ವಿದ್ಯುತ್‌ ದರ ಏರಿಕೆ ಮಾಡಿ ಗ್ರಾಹಕರಿಗೆ ಶಾಕ್ ನೀಡಿತ್ತು. ಇದೀಗ ಗ್ರಾಹಕರಿಗೆ ಹಾಲಿದ ದರ ಏರಿಕೆಯ ಬಿಸಿ ತಟ್ಟಲಿದೆ. ನಷ್ಟದ ಕಾರಣ ಹಾಲು ಒಕ್ಕೂಟಗಳು ಎರಡು ತಿಂಗಳಿಂದ ರೈತರಿಗೆ ನೀಡುತ್ತಿದ್ದ ಸಹಾಯಧನವನ್ನು ಕಡಿತಗೊಳಿಸಲು ಮುಂದಾಗಿದ್ದವು. ಆದರೆ ಪ್ರೋತ್ಸಾಹ ಧನ ಕಡಿಮೆ ಮಾಡದಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದರು. ಇದೇ ಕಾರಣಕ್ಕೆ ಹಾಲಿನ ದರವನ್ನು ಐದು ರೂಪಾಯಿ ಏರಿಕೆಯ ಪ್ರಸ್ತಾವನೆವನ್ನು ಒಕ್ಕೂಟಗಳು ಸರ್ಕಾರದ ಮುಂದಿಟ್ಟಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ