
ಬೆಂಗಳೂರು, ಸೆಪ್ಟೆಂಬರ್ 19: ಪಿಂಕ್ ಲೈನ್ ಮೆಟ್ರೋ ಮಾರ್ಗ ಶೀಘ್ರದಲ್ಲಿ ಓಪನ್ ಆಗಲಿದೆ. ಇಂತಹ ಸಂದರ್ಭದಲ್ಲಿ ಮೆಟ್ರೋ ಸ್ಟೇಷನ್ಗಳ ಹೆಸರು ಬದಲಿಸುವಂತೆ ಸಚಿವರು ಸೇರಿದಂತೆ ಸ್ಥಳೀಯ ನಿವಾಸಿಗಳು ಆಗ್ರಹಿಸುತ್ತಿದ್ದಾರೆ. ಇದೀಗ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಳೇನಅಗ್ರಹಾರದಿಂದ ನಾಗವಾರ ಮಾರ್ಗದ ಪಿಂಕ್ ಲೈನ್ನಲ್ಲಿ ಬರುವ ಐಐಎಂಬಿ ಮೆಟ್ರೋ ನಿಲ್ದಾಣದ ಹೆಸರನ್ನು ‘ಬಿಳೇಕಹಳ್ಳಿ ಐಐಎಂಬಿ ಮೆಟ್ರೋ ನಿಲ್ದಾಣ’ ಎಂದು ಬದಲಿಸುವಂತೆ ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆಯಲಾಗಿದೆ.
ಈಗಾಗಲೇ ಪಿಂಕ್ಲೈನ್ ಮಾರ್ಗದ ಮೂರು ಮೆಟ್ರೋ ನಿಲ್ದಾಣಗಳ ಹೆಸರುಗಳನ್ನು ಬದಲಾಯಿಸುವಂತೆ ಬಿಟಿಎಂ ಲೇಔಟ್ ಶಾಸಕ ಹಾಗೂ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರು ಪತ್ರ ಬರೆದಿದ್ದಾರೆ.
ಇದನ್ನೂ ಓದಿ: ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯ ನಿವಾಸಿಗಳ ಬಿಗಿಪಟ್ಟು
ಇದೀಗ ನಾಲ್ಕನೇ ನಿಲ್ದಾಣ ಐಐಎಂಬಿ ಮೆಟ್ರೋ ಸ್ಟೇಷನ್ ಹೆಸರು ಬದಲಿಸುವಂತೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಬಿಎಂಆರ್ಸಿಎಲ್ಗೆ ಪತ್ರ ಬರೆದಿದ್ದಾರೆ.
ಐಐಎಂಬಿ ಮೆಟ್ರೋ ನಿಲ್ದಾಣದ ಹೆಸರನ್ನು ‘ಬಿಳೇಕಹಳ್ಳಿ ಐಐಎಂಬಿ’ ಎಂದು ಬದಲಾಯಿಸಬೇಕೆಂದು ಆಗ್ರಹಿಸಿ ಬಿಳೇಕಹಳ್ಳಿ ನಿವಾಸಿಗಳು ನಿಲ್ದಾಣದ ಮುಂಭಾಗ ಪ್ರತಿಭಟಿಸಿದರು. ಒಂದು ವೇಳೆ ಹೆಸರನ್ನು ಬದಲಾಯಿಸದಿದ್ದರೆ ಬನ್ನೇರುಘಟ್ಟ ರಸ್ತೆಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಹಾಗೂ ಸಾವಿರಾರು ಜನರು ಸೇರಿ ಬಿಎಂಆರ್ಸಿಎಲ್ ಮುಖ್ಯ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಸ್ಥಳೀಯ ಮುಖಂಡರು ಮತ್ತು ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ.
ಇನ್ನು ಐಐಎಂಬಿ ಮೆಟ್ರೋ ನಿಲ್ದಾಣದ ಹೆಸರು ಬದಲಾಯಿಸುವಂತೆ ಆನೇಕಲ್ ಶಾಸಕ ಬಿ. ಶಿವಣ್ಣ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಅವರಿಗೆ ಪತ್ರ ಬರೆದಿದ್ದರು. ಈ ಮನವಿಯನ್ನು ಪರಿಶೀಲನೆ ನಡೆಸುವಂತೆ ಸಚಿವ ಕೃಷ್ಣಬೈರೇಗೌಡ ಬಿಎಂಆರ್ಸಿಎಲ್ ಎಂಡಿಗೆ ಪತ್ರ ಬರೆದು ಸೂಚಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.