AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆಂಗ್ಯೂ ಹೆಚ್ಚಳ ಪರಿಣಾಮ; ಬೆಂಗಳೂರಿನಲ್ಲಿ ಪ್ಲೇಟ್​​ಲೆಟ್​​ಗೆ ಹೆಚ್ಚಿದ ಬೇಡಿಕೆ

ಬೆಂಗಳೂರಿನಲ್ಲಿ ಡೆಂಗ್ಯೂ ಹಾವಳಿ ಅತಿಯಾಗಿದೆ. ಗಲ್ಲಿ-ಗಲ್ಲಿಯಲ್ಲೂ ಜನರಲ್ಲಿ ಕಾಣಿಸಿಕೊಳ್ಳುತ್ತಿರುವ ಸೋಂಕು ಮೂವರನ್ನ ಬಲಿ ಪಡೆದಿದೆ. ಇದರ ನಡುವೆ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿದ್ದಂತೆ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಬ್ಲಡ್ ಬ್ಯಾಂಕ್​​​ಗಳಲ್ಲಿ ಪ್ಲೇಟ್​​ಲೆಟ್​​​ಗಳಿಗೆ ಬೇಡಿಕೆ ಹೆಚ್ಚಾಗಿದೆ. ರಾಜ್ಯದಲ್ಲಿ ಹೇಗಿದೆ ಡೆಂಗ್ಯೂ ಪರಿಸ್ಥಿತಿ, ಬೆಂಗಳೂರಿನ ಪ್ಲೇಟ್​​​ಲೆಟ್ ಲಭ್ಯತೆ ಹೇಗಿದೆ? ಇಲ್ಲಿದೆ ವಿವರ.

ಡೆಂಗ್ಯೂ ಹೆಚ್ಚಳ ಪರಿಣಾಮ; ಬೆಂಗಳೂರಿನಲ್ಲಿ ಪ್ಲೇಟ್​​ಲೆಟ್​​ಗೆ ಹೆಚ್ಚಿದ ಬೇಡಿಕೆ
ಡೆಂಗ್ಯೂ ಹೆಚ್ಚಳ ಪರಿಣಾಮ; ಬೆಂಗಳೂರಿನಲ್ಲಿ ಪ್ಲೇಟ್​​ಲೆಟ್​​ಗೆ ಹೆಚ್ಚಿದ ಬೇಡಿಕೆ
Poornima Agali Nagaraj
| Edited By: |

Updated on: Jul 03, 2024 | 6:57 AM

Share

ಬೆಂಗಳೂರು, ಜುಲೈ 3: ಮುಂಗಾರು ಮಳೆಗಾಲ ಆರಂಭವಾಗುತ್ತಿದ್ದಂತೆ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಡೆಂಗ್ಯೂ ಹರಡುವಿಕೆ ಹೆಚ್ಚಾಗಿದೆ. ಡೆಂಗ್ಯೂ ಆರ್ಭಟಕ್ಕೆ ಸಿಲಿಕಾನ್ ಸಿಟಿ ಮಂದಿ ಕಂಗಾಲಾಗಿದ್ದಾರೆ. ಆಸ್ಪತ್ರೆ ಕದತಟ್ಟುವರ ಸಂಖ್ಯೆಯೂ ಏರಿಕೆಯಾಗಿದೆ. ಡೆಂಗ್ಯೂ ಕೇಸ್ ಏರಿಕೆ ಬೆನ್ನಲ್ಲೇ ಪ್ಲೇಟ್‌ಲೆಟ್​​ಗಳಿಗೆ ಬೇಡಿಕೆ ಹೆಚ್ಚಾಗುತ್ತಿದ್ದು, ಕೊರತೆ ಎದುರಾಗಿದೆ.

ಹೌದು, ಯಾವುದಾದರೂ ವ್ಯಕ್ತಿಗೆ ಡೆಂಗ್ಯೂ ಬಂದರೆ ಅದು ನೇರವಾಗಿ ಆ ವ್ಯಕ್ತಿಯ ದೇಹದ ರಕ್ತದಲ್ಲಿನ ಪ್ಲೇಟ್ಲೆಟ್ ಹಾಗೂ ಬಿಳಿ ರಕ್ತ ಕಣಗಳನ್ನು ಕಡಿಮೆ ಮಾಡುತ್ತದೆ. ಡೆಂಗ್ಯೂವಿನಿಂದ ಪಾರಾಗಬೇಕಾದರೆ, ನಮ್ಮ ದೇಹದ ರೋಗ ನಿರೋಧಕ ಶಕ್ತಿಯ ಸ್ವರೂಪವಾಗಿರುವ ಬಿಳಿ ರಕ್ತ ಕಣಗಳು ಮತ್ತು ಪ್ಲೇಟ್​​ಲೆಟ್​​ಗಳ ಸಂಖ್ಯೆಯನ್ನು ಹೆಚ್ಚು ಮಾಡಿಕೊಳ್ಳಬೇಕು. ಹೀಗಾಗಿ ಡೆಂಗ್ಯೂ ಪ್ರಕರಣ ಹೆಚ್ಚಾದ ಬೆನ್ನಲ್ಲೇ ಪ್ಲೇಟ್​​​ಲೆಟ್​​ಗಳಿಗೆ ಡಿಮ್ಯಾಂಡ್ ಹೆಚ್ಚಾಗಿದೆ. ಅಂದಹಾಗೆ, ಕಳೆದ ತಿಂಗಳು ಪ್ರತಿ ಬ್ಲಡ್ ಬ್ಯಾಂಕ್ ನಲ್ಲಿ ನಿತ್ಯ 5-10 ಯುನಿಟ್ ಪ್ಲೇಟ್​​ಲೆಟ್​​ಗಳಿಗೆ ಬೇಡಿಕೆಯಿತ್ತು. ಆದರೆ ಈಗ 50-60 ಯುನಿಟ್​​ನಷ್ಟು ರ್ಯಾಂಡಮ್ ಡೋನರ್ ಪ್ಲೇಟ್ಲೆಟ್​​​ಗಳಿಗೆ ಬೇಡಿಕೆ ಇದೆ.

ಪ್ಲೇಟ್‌ಲೆಟ್ ಕೊರತೆ ನೀಗಿಸಲು ಹಲವು ಕಡೆ ರಕ್ತದಾನ ಶಿಬಿರಗಳನ್ನು ಆಯೋಜನೆ ಮಾಡಲಾಗುತ್ತಿದ್ದು, ಹಲವರಿಂದ ಪ್ಲೇಟ್​​ಲೆಟ್ ಪಡೆಯಲಾಗುತ್ತಿದೆ ಎಂದು ರೆಡ್ ಕ್ರಾಸ್ ಘಟಕದ ಅಶೋಕ್ ತಿಳಿಸಿದ್ದಾರೆ.

ಸಾಕಷ್ಟು ಜನರು ಪ್ಲೇಟ್​ಲೆಟ್ ಸಲುವಾಗಿ ಕರೆಮಾಡುತ್ತಿರುವ ಕಾರಣ ರಕ್ತದಾನಿಗಳು ತಾವಾಗಿಯೇ ಮುಂದೆ ಬಂದು ಪ್ಲೇಟ್​​​​ಲೆಟ್ ಕೊಡಲು ಮುಂದಾಗುತ್ತಿದ್ದಾರೆ.

ರಕ್ತದಾನ ಮಹಾದಾನ ಎನ್ನುತ್ತಾರೆ. ರಕ್ತದಾನ ಮಾಡುವುದರಿಂದ ನಮ್ಮ ಆರೋಗ್ಯಕ್ಕೂ ಒಳ್ಳೆಯದು‌. ನನಗೆ ಒಂದು 8 ವರ್ಷದ ಮಗುವಿಗೆ ಪ್ಲೇಟ್​​ಲೆಟ್ ಬೇಕು ಅಂತ ಕರೆ ಮಾಡಿದರು. ಹಾಗಾಗಿ ಪ್ಲೇಟ್​​ಲೆಟ್ ನೀಡುತ್ತಿದ್ದೇನೆ ಎಂದು ರಕ್ತದಾನಿ ಸಚಿನ್ ಶಿಂದೆ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟಿದೆ ಡೆಂಗ್ಯೂ ಪ್ರಕರಣ

ಜಿಲ್ಲೆ ಪ್ರಕರಣಗಳು
ಬೆಂಗಳೂರು 1563
ಚಿಕ್ಕಮಗಳೂರು 491
ಮೈಸೂರು 479
ಹಾವೇರಿ 451
ಚಿತ್ರದುರ್ಗ 265
ದಕ್ಷಿಣ ಕನ್ನಡ 233

ಸಾವಿನ ಸಂಖ್ಯೆ

ಜಿಲ್ಲೆ ಸಾವಿನ ಸಂಖ್ಯೆ
ಹಾಸನ 2
ಶಿವಮೊಗ್ಗ 1
ಹಾವೇರಿ 1
ಧಾರವಾಡ 1
ಬೆಂಗಳೂರು 1

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೆಚ್ಚಿದ ಡೆಂಗ್ಯೂ ಅಬ್ಬರ; ಸಿಲಿಕಾನ್ ಸಿಟಿಗೆ ಕಾದಿದ್ಯಾ ಸೆಪ್ಟೆಂಬರ್ ಗಂಡಾಂತರ..?

2023ರಲ್ಲಿ ಜನವರಿಯಿಂದ ಜೂನ್ ವರೆಗೆ 732 ಡೆಂಗ್ಯೂ ಪ್ರಕರಣ ವರದಿಯಾಗಿದ್ದವು. ಆದರೆ ಈಬಾರಿ 1530 ಕೇಸ್ ದಾಖಲಾಗಿ ಆತಂಕ ಹುಟ್ಟಿಸಿದೆ. ಬಿಬಿಎಂಪಿಯೂ ಎಚ್ಚೆತ್ತುಕೊಂಡಿದ್ದು, ಸೋಂಕು ಹರಡುವಿಕೆ ತಡೆಗೆ ಹಲವಾರು ಕ್ರಮಗಳನ್ನು ಕೈಗೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ