AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಹೆಚ್ಚಾದ ಡೆಂಗ್ಯೂ ಪ್ರಕರಣಗಳು; ಆರೋಗ್ಯ ಇಲಾಖೆಯಿಂದ ಗೈಡ್​​ಲೈನ್ಸ್ ಬಿಡುಗಡೆ

ಕೇಂದ್ರದ ಮಾರ್ಗಸೂಚಿ ಅನ್ವಯ ಡೆಂಗ್ಯೂ ನಿಯಂತ್ರಣ ಸಂಬಂಧ ರಾಜ್ಯ ಆರೋಗ್ಯ ಇಲಾಕೆ ಗೈಡ್​​ಲೈನ್ಸ್​ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ವರ್ಷ ಸೆಪ್ಟೆಂಬರ್ 15 ರವರೆಗೆ ಬೆಂಗಳೂರಿನಲ್ಲಿ 9,147 ಡೆಂಗ್ಯೂ ಪ್ರಕರಣಗಳು ಕಂಡುಬಂದಿವೆ.

ರಾಜ್ಯದಲ್ಲಿ ಹೆಚ್ಚಾದ ಡೆಂಗ್ಯೂ ಪ್ರಕರಣಗಳು; ಆರೋಗ್ಯ ಇಲಾಖೆಯಿಂದ ಗೈಡ್​​ಲೈನ್ಸ್ ಬಿಡುಗಡೆ
ಡೆಂಗ್ಯೂ
Follow us
ಆಯೇಷಾ ಬಾನು
|

Updated on: Sep 20, 2023 | 1:39 PM

ಬೆಂಗಳೂರು, ಸೆ.29: ರಾಜ್ಯದಲ್ಲಿ ನಿರಂತರ ಡೆಂಗ್ಯೂ(Dengue) ಜ್ವರ ಪ್ರಕರಣಗಳು ಏರಿಕೆಯಾಗುತ್ತಿವೆ. ಈ ಹಿನ್ನೆಲೆ ರಾಜ್ಯ ಆರೋಗ್ಯ ಇಲಾಖೆ ಗೈಡ್​​ಲೈನ್ಸ್ ಬಿಡುಗಡೆ ಮಾಡಿದೆ. ಕೇಂದ್ರದ ಮಾರ್ಗಸೂಚಿ ಅನ್ವಯ ಡೆಂಗ್ಯೂ ನಿಯಂತ್ರಣ ಸಂಬಂಧ ರಾಜ್ಯ ಆರೋಗ್ಯ ಇಲಾಖೆ(Karnataka Health Department) ಗೈಡ್​​ಲೈನ್ಸ್​ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ವರ್ಷ ಸೆಪ್ಟೆಂಬರ್ 15 ರವರೆಗೆ ಬೆಂಗಳೂರಿನಲ್ಲಿ 9,147 ಡೆಂಗ್ಯೂ ಪ್ರಕರಣಗಳು ಕಂಡುಬಂದಿವೆ.

ಡೆಂಗ್ಯೂ ಲಕ್ಷಣಗಳು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಾರ ಡೆಂಗ್ಯೂ ಈಡಿಸ್ ಎಂಬ ಸೊಳ್ಳೆ ಕಚ್ಚುವುದರಿಂದ ಬರುತ್ತದೆ. ಮತ್ತು ವ್ಯಕ್ತಿಯಿಂದ ವ್ಯಕ್ತಿಗೆ ಸೋಂಕು ತಗುಲುತ್ತದೆ. ಸೊಳ್ಳೆ ಕಚ್ಚಿದ 5-7 ದಿನಗಳಲ್ಲಿ ರೋಗಲಕ್ಷಣಗಳು ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತವೆ. ಡೆಂಗ್ಯೂಗೆ  ಔಷಧಿ ಇಲ್ಲವಾದರೂ  ರೋಗಲಕ್ಷಣಗಳನ್ನು ಗಮನಿಸಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತದೆ.

ರೋಗ ಲಕ್ಷಣಗಳು ಹೀಗಿವೆ

ಡೆಂಗ್ಯೂ ತಡೆಗೆ ಏನು ಮಾಡಬೇಕು?

  • ಮೇಲ್ಛಾವಣಿಯ ಟ್ಯಾಂಕ್‌ಗಳು ಸೇರಿದಂತೆ ಎಲ್ಲಾ ನೀರಿನ ಪಾತ್ರೆಗಳನ್ನು ವಾರಕ್ಕೊಮ್ಮೆಯಾದರೂ ಖಾಲಿ ಮಾಡಬೇಕು ಮತ್ತು ಚನ್ನಾಗಿ  ತೊಳೆದು, ಒಣಗಿಸಿ ಬಳಸಬೇಕು
  • ಮನೆಗಳ ಸುತ್ತಮುತ್ತಲಿನ ತ್ಯಾಜ್ಯ ಟಿನ್‌ಗಳು, ಟೈರ್‌ಗಳು ಮತ್ತು ಬಾಟಲಿಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರಿಕೆ ವಹಿಸಬೇಕು.
  • ಏರ್ ಕೂಲರ್‌ಗಳಲ್ಲಿನ ನೀರನ್ನು ವಾರಕ್ಕೊಮ್ಮೆಯಾದರೂ ಬದಲಾಯಿಸಬೇಕು
  • ಕೈ ಮತ್ತು ಕಾಲುಗಳನ್ನು ಮುಚ್ಚುವ ಪೂರ್ಣ ಉಡುಪುಗಳನ್ನು ಧರಿಸಬೇಕು
  • ಹಗಲಿನಲ್ಲಿ ಮಲಗುವ / ವಿಶ್ರಾಂತಿ ಪಡೆಯುವ ಗರ್ಭಿಣಿಯರು, ಮಕ್ಕಳು ಮತ್ತು ವೃದ್ಧರು ಸೊಳ್ಳೆ ಪರದೆಯನ್ನು ಬಳಸಬೇಕು.
  • ಡೆಂಗ್ಯೂ ಪೀಡಿತರು ತಪ್ಪದೇ ಸೊಳ್ಳೆ ಪರದೆ ಬಳಸಬೇಕು
  • ಡೆಂಗ್ಯೂ ಇರುವವರು ಸಾಕಷ್ಟು ನೀರಿನ ಅಂಶವಿರುವಗ ಪದಾರ್ಥಗಳನ್ನು ಸೇವಿಸಬೇಕು ಮತ್ತು ಗರಿಷ್ಠ ವಿಶ್ರಾಂತಿ ತೆಗೆದುಕೊಳ್ಳಬೇಕು
  • ಮನೆಯ ಕಿಟಕಿ ಬಾಗಿಲುಗಳಿಗೆ ಸೊಳ್ಳೆ ಪರದೆಗಳನ್ನು ಅಳವಡಿಸಬೇಕು.

ಏನನ್ನು ಮಾಡಬಾರದು?

  • ಡೆಂಗ್ಯೂ ರೋಗಲಕ್ಷಣಗಳು ಕಂಡು ಬಂದರೆ  ಸ್ವಯಂ-ಔಷಧಿಗಳನ್ನು ತೆಗೆದುಕೊಳ್ಳುವ ಬದಲಿಗೆ ಆಸ್ಪತ್ರೆಗೆ ಭೇಟಿ ನೀಡಿ
  • ಡೆಂಗ್ಯೂ ಇರುವವರು ಯಾವುದೇ ಕಾರಣಕ್ಕೂ ಪೇನ್ ಕಿಲ್ಲರ್ ಮಾತ್ರಗಳನ್ನು ಬಳಸಬೇಡಿ.

     ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ