AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಹೆಚ್ಚಾದ ಡೆಂಗ್ಯೂ ಪ್ರಕರಣಗಳು; ಆರೋಗ್ಯ ಇಲಾಖೆಯಿಂದ ಗೈಡ್​​ಲೈನ್ಸ್ ಬಿಡುಗಡೆ

ಕೇಂದ್ರದ ಮಾರ್ಗಸೂಚಿ ಅನ್ವಯ ಡೆಂಗ್ಯೂ ನಿಯಂತ್ರಣ ಸಂಬಂಧ ರಾಜ್ಯ ಆರೋಗ್ಯ ಇಲಾಕೆ ಗೈಡ್​​ಲೈನ್ಸ್​ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ವರ್ಷ ಸೆಪ್ಟೆಂಬರ್ 15 ರವರೆಗೆ ಬೆಂಗಳೂರಿನಲ್ಲಿ 9,147 ಡೆಂಗ್ಯೂ ಪ್ರಕರಣಗಳು ಕಂಡುಬಂದಿವೆ.

ರಾಜ್ಯದಲ್ಲಿ ಹೆಚ್ಚಾದ ಡೆಂಗ್ಯೂ ಪ್ರಕರಣಗಳು; ಆರೋಗ್ಯ ಇಲಾಖೆಯಿಂದ ಗೈಡ್​​ಲೈನ್ಸ್ ಬಿಡುಗಡೆ
ಡೆಂಗ್ಯೂ
ಆಯೇಷಾ ಬಾನು
ಆಯೇಷಾ ಬಾನು|

Updated on: Sep 20, 2023 | 1:39 PM

Share

ಬೆಂಗಳೂರು, ಸೆ.29: ರಾಜ್ಯದಲ್ಲಿ ನಿರಂತರ ಡೆಂಗ್ಯೂ(Dengue) ಜ್ವರ ಪ್ರಕರಣಗಳು ಏರಿಕೆಯಾಗುತ್ತಿವೆ. ಈ ಹಿನ್ನೆಲೆ ರಾಜ್ಯ ಆರೋಗ್ಯ ಇಲಾಖೆ ಗೈಡ್​​ಲೈನ್ಸ್ ಬಿಡುಗಡೆ ಮಾಡಿದೆ. ಕೇಂದ್ರದ ಮಾರ್ಗಸೂಚಿ ಅನ್ವಯ ಡೆಂಗ್ಯೂ ನಿಯಂತ್ರಣ ಸಂಬಂಧ ರಾಜ್ಯ ಆರೋಗ್ಯ ಇಲಾಖೆ(Karnataka Health Department) ಗೈಡ್​​ಲೈನ್ಸ್​ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ವರ್ಷ ಸೆಪ್ಟೆಂಬರ್ 15 ರವರೆಗೆ ಬೆಂಗಳೂರಿನಲ್ಲಿ 9,147 ಡೆಂಗ್ಯೂ ಪ್ರಕರಣಗಳು ಕಂಡುಬಂದಿವೆ.

ಡೆಂಗ್ಯೂ ಲಕ್ಷಣಗಳು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಾರ ಡೆಂಗ್ಯೂ ಈಡಿಸ್ ಎಂಬ ಸೊಳ್ಳೆ ಕಚ್ಚುವುದರಿಂದ ಬರುತ್ತದೆ. ಮತ್ತು ವ್ಯಕ್ತಿಯಿಂದ ವ್ಯಕ್ತಿಗೆ ಸೋಂಕು ತಗುಲುತ್ತದೆ. ಸೊಳ್ಳೆ ಕಚ್ಚಿದ 5-7 ದಿನಗಳಲ್ಲಿ ರೋಗಲಕ್ಷಣಗಳು ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತವೆ. ಡೆಂಗ್ಯೂಗೆ  ಔಷಧಿ ಇಲ್ಲವಾದರೂ  ರೋಗಲಕ್ಷಣಗಳನ್ನು ಗಮನಿಸಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತದೆ.

ರೋಗ ಲಕ್ಷಣಗಳು ಹೀಗಿವೆ

ಡೆಂಗ್ಯೂ ತಡೆಗೆ ಏನು ಮಾಡಬೇಕು?

  • ಮೇಲ್ಛಾವಣಿಯ ಟ್ಯಾಂಕ್‌ಗಳು ಸೇರಿದಂತೆ ಎಲ್ಲಾ ನೀರಿನ ಪಾತ್ರೆಗಳನ್ನು ವಾರಕ್ಕೊಮ್ಮೆಯಾದರೂ ಖಾಲಿ ಮಾಡಬೇಕು ಮತ್ತು ಚನ್ನಾಗಿ  ತೊಳೆದು, ಒಣಗಿಸಿ ಬಳಸಬೇಕು
  • ಮನೆಗಳ ಸುತ್ತಮುತ್ತಲಿನ ತ್ಯಾಜ್ಯ ಟಿನ್‌ಗಳು, ಟೈರ್‌ಗಳು ಮತ್ತು ಬಾಟಲಿಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರಿಕೆ ವಹಿಸಬೇಕು.
  • ಏರ್ ಕೂಲರ್‌ಗಳಲ್ಲಿನ ನೀರನ್ನು ವಾರಕ್ಕೊಮ್ಮೆಯಾದರೂ ಬದಲಾಯಿಸಬೇಕು
  • ಕೈ ಮತ್ತು ಕಾಲುಗಳನ್ನು ಮುಚ್ಚುವ ಪೂರ್ಣ ಉಡುಪುಗಳನ್ನು ಧರಿಸಬೇಕು
  • ಹಗಲಿನಲ್ಲಿ ಮಲಗುವ / ವಿಶ್ರಾಂತಿ ಪಡೆಯುವ ಗರ್ಭಿಣಿಯರು, ಮಕ್ಕಳು ಮತ್ತು ವೃದ್ಧರು ಸೊಳ್ಳೆ ಪರದೆಯನ್ನು ಬಳಸಬೇಕು.
  • ಡೆಂಗ್ಯೂ ಪೀಡಿತರು ತಪ್ಪದೇ ಸೊಳ್ಳೆ ಪರದೆ ಬಳಸಬೇಕು
  • ಡೆಂಗ್ಯೂ ಇರುವವರು ಸಾಕಷ್ಟು ನೀರಿನ ಅಂಶವಿರುವಗ ಪದಾರ್ಥಗಳನ್ನು ಸೇವಿಸಬೇಕು ಮತ್ತು ಗರಿಷ್ಠ ವಿಶ್ರಾಂತಿ ತೆಗೆದುಕೊಳ್ಳಬೇಕು
  • ಮನೆಯ ಕಿಟಕಿ ಬಾಗಿಲುಗಳಿಗೆ ಸೊಳ್ಳೆ ಪರದೆಗಳನ್ನು ಅಳವಡಿಸಬೇಕು.

ಏನನ್ನು ಮಾಡಬಾರದು?

  • ಡೆಂಗ್ಯೂ ರೋಗಲಕ್ಷಣಗಳು ಕಂಡು ಬಂದರೆ  ಸ್ವಯಂ-ಔಷಧಿಗಳನ್ನು ತೆಗೆದುಕೊಳ್ಳುವ ಬದಲಿಗೆ ಆಸ್ಪತ್ರೆಗೆ ಭೇಟಿ ನೀಡಿ
  • ಡೆಂಗ್ಯೂ ಇರುವವರು ಯಾವುದೇ ಕಾರಣಕ್ಕೂ ಪೇನ್ ಕಿಲ್ಲರ್ ಮಾತ್ರಗಳನ್ನು ಬಳಸಬೇಡಿ.

     ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!