AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಜನರೇ ಎಚ್ಚರ ಎಚ್ಚರ! ನಗರದಲ್ಲಿ ಹೆಚ್ಚಾಗುತ್ತಿದೆ ಡೆಂಘೀ ಸೋಂಕಿತರ ಸಂಖ್ಯೆ

ಬೊಮ್ಮನಹಳ್ಳಿ ವಲಯ 104 ಕೇಸ್ಗಳು ಪತ್ತೆಯಾದರೆ, ದಾಸರಹಳ್ಳಿ ವಲಯದಲ್ಲಿ 38, ಮಹದೇವಪುರ ವಲಯದಲ್ಲಿ 342, ಆರ್.ಆರ್ ನಗರ ವಲಯದಲ್ಲಿ 122, ಯಲಹಂಕ ವಲಯದಲ್ಲಿ 202 ಡೆಂಘೀ ಪ್ರಕರಣಗಳು ಪತ್ತೆಯಾಗಿವೆ.

ಬೆಂಗಳೂರು ಜನರೇ ಎಚ್ಚರ ಎಚ್ಚರ! ನಗರದಲ್ಲಿ ಹೆಚ್ಚಾಗುತ್ತಿದೆ ಡೆಂಘೀ ಸೋಂಕಿತರ ಸಂಖ್ಯೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:May 11, 2022 | 4:02 PM

Share

ಬೆಂಗಳೂರು: ಕೊರೊನಾ ಸೋಂಕಿನ (Coronavirus) ಆತಂಕದ ನಡುವೆ ಇದೀಗ ಡೆಂಗ್ಯೂ (Dengue) ಆತಂಕವೂ ಶುರುವಾಗಿದೆ. ನಗರದಲ್ಲಿ ಡೆಂಘೀ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ನಗರದಾದ್ಯಂತ ಸುಮಾರು ಎರಡು ಸಾವಿರ ಡೆಂಘೀ ಕೇಸ್ಗಳು ದಾಖಲಾಗಿವೆ. ಕಳೆದ ವರ್ಷ ಸುಮಾರು 1,800 ಪ್ರಕರಣ ದಾಖಲಾಗಿದ್ದವು. ಈ ಬಾರಿ ವಲಯ ಮಟ್ಟದಲ್ಲಿ 2 ತಿಂಗಳಿನಿಂದ ಕೇಸ್​ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಬೆಂಗಳೂರು ಪೂರ್ವ ವಲಯದಲ್ಲಿ ಒಟ್ಟು 653 ಕೇಸ್ ಪತ್ತೆಯಾಗಿದೆ. ಬಿಬಿಎಂಪಿ 8 ವಲಯಗಳ ಶಾಲಾ ಕಾಲೇಜುಗಳ ಬಳಿ ನಿಗಾ ವಹಿಸಲಾಗಿದೆ.

ಬೊಮ್ಮನಹಳ್ಳಿ ವಲಯ 104 ಕೇಸ್ಗಳು ಪತ್ತೆಯಾದರೆ, ದಾಸರಹಳ್ಳಿ ವಲಯದಲ್ಲಿ 38, ಮಹದೇವಪುರ ವಲಯದಲ್ಲಿ 342, ಆರ್.ಆರ್ ನಗರ ವಲಯದಲ್ಲಿ 122, ಯಲಹಂಕ ವಲಯದಲ್ಲಿ 202 ಡೆಂಘೀ ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರು ದಕ್ಷಿಣ ವಲಯದಲ್ಲಿ ಒಟ್ಟು 170 ಕೇಸ್, ಬೆಂಗಳೂರು ಪಶ್ಚಿಮ ವಲಯದಲ್ಲಿ 162 ಪ್ರಕರಣಗಳು ದಾಖಲಾಗಿವೆ. ಮುಂದಿನ ದಿನಗಳಲ್ಲಿ ಕೇಸ್ಗಳು ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ.

ಹೀಗಾಗಿ ಡೆಂಘೀ ತಡೆಗಟ್ಟುವ ಸಲುವಾಗಿ ಬಿಬಿಎಂಪಿ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಶಾಲಾ ಕಾಲೇಜುಗಳ ಬಳಿ ತೀವ್ರ ನಿಗಾ ಇಡುತ್ತಿರುವ ಬಿಬಿಎಂಪಿ, ಶಾಲೆಗಳ ಬಳಿ ಲಾರ್ವಿಸೈಡ್, ಫಾಗ್ ಸಿಂಪಡಿಸಲು ಸೂಚನೆ ನೀಡಿದೆ. ಜೊತೆಗೆ ವಲಯ ಮಟ್ಟದಲ್ಲಿ ಡೋರ್ ಟು ಡೋರ್ ಸಮೀಕ್ಷೆಗೆ ಸೂಚನೆ ನೀಡಿದೆ. ಸೊಳ್ಳೆ ಕಡಿತದಿಂದ ಅನಾರೋಗ್ಯದ ಸಮಸ್ಯೆಯಾದರೆ ಆಸ್ಪತ್ರೆಗೆ ದಾಖಲಾಗಿ ವೈದ್ಯರ ಬಳಿ ತೋರಿಸಿಕೊಳ್ಳುವಂತೆ ಸೂಚನೆ ಕೊಟ್ಟಿದೆ.

ಈ ಲಕ್ಷಣ ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ: 1. ಅತಿಯಾದ ಜ್ವರ, ತಲೆನೋವು, ಮಾಂಸಖಂಡ, ಎಲುಬು ಮತ್ತು ಕೀಲು ನೋವು 2. ವಾಕರಿಕೆ, ವಾಂತಿ, ಕಣ್ಣುಗಳ ಹಿಂದೆ ಅತಿಯಾದ ನೋವು 3. ಗ್ರಂಥಿಗಳು ಊದಿಕೊಳ್ಳುವುದು, ಮೈಮೇಲೆ ಕೆಂಪು ದದ್ದಿ 4. ಅತಿಯಾದ ಹೊಟ್ಟೆನೋವು, ನಿರಂತರ ವಾಂತಿ 5. ದಂತದಲ್ಲಿ, ಮೂಗಿನಲ್ಲಿ ರಕ್ತಸ್ರಾವ 6. ಮೂತ್ರದಲ್ಲಿ, ಮಲ ಮತ್ತು ವಾಂತಿಯಲ್ಲಿ ರಕ್ತ ಹೋಗುತ್ತದೆ (ಇದೆಲ್ಲ ಡೆಂಗ್ಯೂದ ಗಂಭೀರ ಸ್ವರೂಪಗಳು.) 7. ಉಸಿರಾಟದಲ್ಲಿ ತೀವ್ರ ತೊಂದರೆ, ಆಯಾಸ, ಕಿರಿಕಿರಿ.

ಇದನ್ನೂ ಓದಿ

‘ಕೆಜಿಎಫ್ 2’ ಬಳಿಕ ಮಹತ್ವದ ಬದಲಾವಣೆ ಮಾಡಿಕೊಂಡ ಪ್ರಶಾಂತ್ ನೀಲ್​; ಏನದು?

IPL 2022 playoffs scenarios: ಪ್ಲೇಆಫ್ ಪ್ರವೇಶಿಸಲು ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು?

Published On - 3:54 pm, Wed, 11 May 22

Follow Us
Web contact
Web contact

TV9 Kannada

Read More
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ