AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆಂಗ್ಯೂ ಪ್ರಕರಣ ಹೆಚ್ಚಾದರು ಅಧಿಕಾರಿಗಳ ನಿರ್ಲಕ್ಷ್ಯ: ಬೆಂಗಳೂರಿನ ಪ್ರತಿಷ್ಠಿತ ಏರಿಯಾ ಜನರ ಗೋಳು ಕೇಳೋರಿಲ್ಲ

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಕ್ಷಯ ನಗರದಲ್ಲಿ ಅವ್ಯವಸ್ಥೆ ಮನೆ ಮಾಡಿದ್ದು, ಡ್ರೈನೇಜ್ ಕೊಳಚೆ ನೀರಿನಲ್ಲೇ ನಿತ್ಯ ಓಡಾಟ ನಡೆಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಜನರು ಡೆಂಗ್ಯೂ ಕಾಯಿಲೆಗೆ ತುತ್ತಾಗುವ ಆತಂಕ ಎದುರಾಗಿದೆ.ನೂರಾರು ಬಾರಿ ಸಮಸ್ಯೆ ಬಗ್ಗೆ ಪತ್ರ ಬರೆದರು ಯಾವುದೇ ಕ್ರಮವಾಗಿಲ್ಲ ಎಂದು ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡೆಂಗ್ಯೂ ಪ್ರಕರಣ ಹೆಚ್ಚಾದರು ಅಧಿಕಾರಿಗಳ ನಿರ್ಲಕ್ಷ್ಯ: ಬೆಂಗಳೂರಿನ ಪ್ರತಿಷ್ಠಿತ ಏರಿಯಾ ಜನರ ಗೋಳು ಕೇಳೋರಿಲ್ಲ
ಪ್ರಾತಿನಿಧಿಕ ಚಿತ್ರ
ರಾಮು, ಆನೇಕಲ್​
| Edited By: |

Updated on:Sep 08, 2023 | 7:42 PM

Share

ಆನೇಕಲ್​, ಸೆಪ್ಟೆಂಬರ್​ 8: ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು (Dengue cases) ಹೆಚ್ಚಾದ್ದರು ಅಧಿಕಾರಿಗಳು ಮಾತ್ರ ನಿರ್ಲಕ್ಷ್ಯ ವಹಿಸಿದ್ದಾರೆ. ಯಾವುದೇ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ ಎಂದು ಬೆಂಗಳೂರಿನ ಪ್ರತಿಷ್ಠಿತ ಏರಿಯಾ ಜನರು ತಮ್ಮ ಗೋಳು ತೋಡಿಕೊಂಡಿದ್ದಾರೆ. ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಕ್ಷಯ ನಗರದಲ್ಲಿ ಅವ್ಯವಸ್ಥೆ ಮನೆ ಮಾಡಿದ್ದು, ಡ್ರೈನೇಜ್ ಕೊಳಚೆ ನೀರಿನಲ್ಲೇ ನಿತ್ಯ ಓಡಾಟ ನಡೆಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಜನರು ಡೆಂಗ್ಯೂ ಕಾಯಿಲೆಗೆ ತುತ್ತಾಗುವ ಆತಂಕ ಎದುರಾಗಿದೆ. ರಸ್ತೆಯಲ್ಲಿ ನೀರು ತುಂಬಿದ್ದರು ಬಿಬಿಎಂಪಿ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ನೂರಾರು ಬಾರಿ ಸಮಸ್ಯೆ ಬಗ್ಗೆ ಪತ್ರ ಬರೆದರು ಯಾವುದೇ ಕ್ರಮವಾಗಿಲ್ಲ ಎಂದು ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೇಗೂರಿನಿಂದ ಹುಳಿಮಾವಿಗೆ ಸಂಪರ್ಕ ರಸ್ತೆಯಲ್ಲಿರುವ ಅಕ್ಷಯ ನಗರದ ಮಹಾವೀರ್ ರಸ್ತೆಯಲ್ಲಿನ ಜನರ ಗೋಳು ಕೇಳೋರಿಲ್ಲದಂತ್ತಾಗಿದೆ. ಆರೋಗ್ಯ ಸಚಿವರ ಹೇಳಿಕೆ ಬರಿ ಹೇಳಿಕೆಗಷ್ಟೇ ಸಿಮೀತ. ಸಚಿವರು ನಿನ್ನೇಯಷ್ಟೇ ಅಧಿಕಾರಿಗಳ ಹಾಗೂ ವೈದ್ಯರ ಸಭೆ ಕರೆದಿದ್ದರು. ಡೆಂಗ್ಯೂ ಪ್ರಕರಣ ಹೆಚ್ಚಳವಾಗದಂತೆ ಸೂಚನೆ ನೀಡಿದ್ದರು. ಆದರೆ ಸಮಸ್ಯೆ ಬಗೆಹರಿಸದೆ ಬಿಬಿಎಂಪಿ ಹಾಗೂ ಬಿಡಬ್ಲ್ಯೂಎಸ್ಎಸ್ಪಿ ಅಧಿಕಾರಿಗಳು ಕಣ್ಮುಚ್ಚಿ ಕುಳಿತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಉಲ್ಬಣಗೊಂಡ ಡೆಂಗ್ಯೂ ರೋಗ, 7 ಜನ ಸಾವು

ಎರಡು-ಮೂರು ವರ್ಷಗಳಿಂದ ಒಳಚರಂಡಿ ಉಕ್ಕಿ ಹರಿಯುತ್ತಿದೆ. ಎರಡು ಕಡೆ ಮ್ಯಾನ್ ಹೋಲ್ ತುಂಬಿ ರಸ್ತೆಯಲ್ಲಿ ಕೊಳಚೆ ನೀರು ಹರಿಯುತ್ತಿದೆ. ಪ್ರತಿಷ್ಠಿತ ಡಿಎಲ್ಎಫ್ ಬಡಾವಣೆ ಬಳಿ ಪ್ರತಿದಿನ ಶಾಲೆಗೆ ಹೋಗುವ ಮಕ್ಕಳು ಕೊಳಚೆ ನೀರಿನಲ್ಲಿಯೇ ನಡೆದು ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಡೆಂಘೀ ಕಾಯಿಲೆಗೆ ತುತ್ತಾಗಿರುವ ಸ್ಥಳೀಯರು ಈಗಾಗಲೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಸ್ತೆಯಲ್ಲಿ ನೀರು ತುಂಬಿ ಹರಿಯುತ್ತಿದ್ದರು, ಬಿಬಿಎಂಪಿ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ. ನೂರಾರು ಬಾರಿ ಸಮಸ್ಯೆ ಬಗ್ಗೆ ಪತ್ರ ಬರೆದರು ಯಾವುದೇ ಕ್ರಮವಾಗಿಲ್ಲ. ಸಮಸ್ಯೆ ಬಗೆಹರಿಸಿ ಕೊಡಿ ಎಂದು ನಿವಾಸಿಗಳು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಡೆಂಗ್ಯೂ ರೋಗ ಪ್ರಕರಣ ಸಂಖ್ಯೆಯಲ್ಲಿ ಏರಿಕೆ; ಬೆಂಗಳೂರಿನಲ್ಲಿ ಅಧಿಕ ಬಾಧಿತರು

ಡೆಂಗ್ಯೂ ಬೆಂಗಳೂರನ್ನೇ ಭಯಪಡಿಯುತ್ತಿರುವ ಮಾರಕ ರೋಗ. ಇದೇ ಖಾಯಿಲೆ ದಿನದಿಂದ ದಿನಕ್ಕೆ ಸಿಲಿಕಾನ್‌ ಸಿಟಿಯನ್ನೇ ಆವರಿಸುತ್ತಿದೆ. ಅದರಲ್ಲಿಯೂ ಕಳೆದ ಮೂರು ತಿಂಗಳಿನಿಂದ ಅಬ್ಬರಿಸುತ್ತಿದ್ದು, 7 ಜನರ ಪೈಕಿ ಮೂವರು ಮಾತ್ರ ಡೆಂಗ್ಯೂಯಿಂದಲೇ ಸತ್ತಿರುವುದು ಎಂದು ಗೊತ್ತಾಗಿದೆ. ಇನ್ನೂ ನಾಲ್ವರ ಸಾವಿನ ವರದಿ ಬರಬೇಕಿದೆ. ಇದರ ನಡುವೆ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:33 pm, Fri, 8 September 23

Follow Us
Ramu Ram
Ramu Ram

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ