AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಡೆಂಘೀ, ಚಿಕನ್ ಗುನ್ಯಾ ಹಾವಳಿ; ವಾರಕ್ಕೆ 80 ಕೇಸ್ ಪತ್ತೆ

ರಾಜ್ಯದಲ್ಲಿ ಕೊರೊನಾಕ್ಕಿಂತ ಹೆಚ್ಚು ಡೆಂಘಿ ಜ್ವರ ಹಾಗೂ ಚಿಕನ್ ಗುನ್ಯಾ ಹಾವಳಿ ಇಡುತ್ತಿದ್ದು, ಮಾರ್ಚ್ ನಿಂದ ನಿರಂತರವಾಗಿ ರಾಜ್ಯದಲ್ಲಿ ಢೇಂಘಿ ಜ್ವರ ಏರಿಕೆಯಾಗ್ತಿದೆ.

ಬೆಂಗಳೂರಿನಲ್ಲಿ ಡೆಂಘೀ, ಚಿಕನ್ ಗುನ್ಯಾ ಹಾವಳಿ; ವಾರಕ್ಕೆ 80 ಕೇಸ್ ಪತ್ತೆ
ಡೆಂಘಿ
ಆಯೇಷಾ ಬಾನು
|

Updated on:Apr 29, 2023 | 10:20 AM

Share

ಬೆಂಗಳೂರು: ನಗರದಲ್ಲಿ ಎಲೆಕ್ಷನ್ ರಣಕಣ ರಂಗೇರಿದೆ. ಮತ್ತೊಂದೆಡೆ ಕೊರೊನಾ ಕೇಸ್ ಏರಿಕೆಯ ಆತಂಕದ ನಡುವೆ ಈಗ ರಾಜ್ಯದಲ್ಲಿ ಡೆಂಘೀ ಜ್ವರ ಹೆಚ್ಚಾಗಿದ್ದು ಬಿಸಿಲಿನ ತಾಪಮಾನದ ನಡುವೆ ಡೆಂಘಿ ಜ್ವರ ಸದ್ದಿಲ್ಲದೆ ಜನರ ಜೀವ ಹಿಂಡಲು ಮುಂದಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ತಾಪಮಾನದಲ್ಲಿ ಬದಲಾವಣೆ ಎದುರಾಗಿದೆ. ತಾಪಮಾನ ಎರಿಕೆಯ ನಡುವೆ ಕೊರೊನಾ ಹಾಗೂ ಡೆಂಘೀ ಜ್ವರ ಹೆಚ್ಚಾಗಿದೆ.

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕಳೆದೊಂದು ತಿಂಗಳಿನಿಂದ ನಿರಂತರವಾಗಿ ಡೆಂಘಿ ಜ್ವರ ಏರಿಕೆಯಾಗ್ತಿದೆ. ಸದ್ಯ ರಾಜ್ಯದಲ್ಲಿ ಕೊರೊನಾಕ್ಕಿಂತ ಹೆಚ್ಚು ಡೆಂಘಿ ಜ್ವರ ಹಾಗೂ ಚಿಕನ್ ಗುನ್ಯಾ ಹಾವಳಿ ಇಡುತ್ತಿದ್ದು, ಮಾರ್ಚ್ ನಿಂದ ನಿರಂತರವಾಗಿ ರಾಜ್ಯದಲ್ಲಿ ಢೇಂಘಿ ಜ್ವರ ಏರಿಕೆಯಾಗ್ತಿದೆ. ಜ್ವರ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ತಲೆಕೆಡಿಸಿಕೊಂಡಿದೆ ಬಿಬಿಎಂಪಿ ಹಾಗೂ ರಾಜ್ಯದಲ್ಲಿ ಕಳೆದ 20 ದಿನಗಳಲ್ಲಿ 246 ಡೆಂಘಿ ಕೇಸ್ ಪತ್ತೆಯಾಗಿದ್ದು 15% ರಿಂದ 20% ರಷ್ಟು ಡೆಂಘಿ ಕೇಸ್​ಗಳ ಸಂಖ್ಯೆಯಲ್ಲಿ ರಾಜ್ಯದಲ್ಲಿ ಏರಿಕೆ ಕಂಡಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಮೆಕ್ಯಾನಿಕಲ್ ವಿದ್ಯಾರ್ಥಿಯ ಬರ್ಬರ ಹತ್ಯೆ

ಕಳೆದ ಒಂದು ವಾರದಲ್ಲಿ ಅಂದ್ರೆ ಎಪ್ರಿಲ್ 17-23ರವರೆಗೆ ಒಟ್ಟು 82 ಡೆಂಘಿ ಕೇಸ್ ಪತ್ತೆಯಾಗಿದ್ರೆ ಇದರಲ್ಲಿ ಸಿಂಹಪಾಲು ಬೆಂಗಳೂರಿನಲ್ಲಿ 49 ಕೇಸ್ ಪತ್ತೆಯಾಗಿದೆ. ಇನ್ನು ಎಪ್ರಿಲ್ 10 ರಿಂದ 16 ರವೆರೆಗೆ ರಾಜ್ಯದಲ್ಲಿ 94 ಕೇಸ್ ಪತ್ತೆಯಾಗಿದ್ರೆ ಎಪ್ರಿಲ್ 3 ರಿಂದ 9 ರವರೆಗೆ 80 ಕೇಸ್ ಪತ್ತೆಯಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಡೆಂಘಿ ಜ್ವರ ಕಾಣಿಸಿಕೊಳ್ಳುತ್ತಿದ್ದು ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ಒಂದೆಡೆ ರಾಜ್ಯದಲ್ಲಿ ನಿರಂತರವಾಗಿ ಕೊರೊನಾ ಕೇಸ್ ಏರಿಕೆಯಾಗ್ತಿದ್ದು ಇದರ ನಡುವೆ ಕಳೆದೊಂದು ತಿಂಗಳಿನಿಂದ ಡೇಂಜರ್ ಡೆಂಘೀ ಸವಾರಿ ಕೇಸ್ ಏರಿಕೆಯಾಗಿದೆ. ಇದು ಆರೋಗ್ಯ ಇಲಾಖೆಗೆ ಟೆನ್ಷನ್ ತಂದಿದೆ.

ಇನ್ನು ಸಿಲಿಕಾನ್ ಸಿಟಿಯಲ್ಲಿ ಡೆಂಘೀ ಕೇಸ್ ಹೆಚ್ಚುತ್ತಿದ್ದು ಹೊರ ರೋಗಿಗಳ ವಿಭಾಗದಲ್ಲಿ ಶೇ 15-20 % ರಷ್ಟು ಏರಿಕೆ ಕಂಡಿದೆ. ಈ ಹಿನ್ನಲೆ ವೈದ್ಯರು ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದ್ದು ಗುಣಲಕ್ಷಣಗಳಿರುವರಿಗೆ ಟೆಸ್ಟಿಂಗ್ ಮಾಡಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಸಾರ್ವಜನಿಕರು ಆದಷ್ಟು ಶುಚಿತ್ವ ಕಾಪಾಡಿಕೊಳ್ಳುವ ಅಗತ್ಯವಿದೆ.

ವರದಿ: ವಿನಯಕುಮಾರ್ ಕಾಶಪ್ಪನವರ್, ಟಿವಿ9 ಬೆಂಗಳೂರು

ಬೆಂಗಳೂರಿನ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:09 am, Sat, 29 April 23

Follow Us
ಅಪಾರ್ಟ್​ಮೆಂಟ್ ನಿವಾಸಿಗಳ ಮೇಲೆ ಕಾರು ಹತ್ತಿಸಿದ ವ್ಯಕ್ತಿ, ಮಹಿಳೆ ಸಾವು
ಅಪಾರ್ಟ್​ಮೆಂಟ್ ನಿವಾಸಿಗಳ ಮೇಲೆ ಕಾರು ಹತ್ತಿಸಿದ ವ್ಯಕ್ತಿ, ಮಹಿಳೆ ಸಾವು
ಶ್ರೀರಾಮನವಮಿಯನ್ನು ಹೇಗೆ ಆಚರಿಸಬೇಕು? ಇಲ್ಲಿದೆ ಮಾಹಿತಿ
ಶ್ರೀರಾಮನವಮಿಯನ್ನು ಹೇಗೆ ಆಚರಿಸಬೇಕು? ಇಲ್ಲಿದೆ ಮಾಹಿತಿ
ಇಂದು ಈ ರಾಶಿಯವರು ತಮ್ಮ ಖರ್ಚುಗಳ ಬಗ್ಗೆ ಎಚ್ಚರ ವಹಿಸಿ!
ಇಂದು ಈ ರಾಶಿಯವರು ತಮ್ಮ ಖರ್ಚುಗಳ ಬಗ್ಗೆ ಎಚ್ಚರ ವಹಿಸಿ!
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!