AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಮತ್ತೆ ಕೊರೊನಾ ಪರಿಸ್ಥಿತಿ ಆತಂಕ; ಬೆಂಗಳೂರಿನಲ್ಲಿ ಮಕ್ಕಳಲ್ಲಿ ಹೆಚ್ಚಾದ ಡೆಂಗ್ಯೂ, ಆರೋಗ್ಯ ಇಲಾಖೆಯಿಂದ ಪೋಷಕರಿಗೆ ಗೈಡ್ ಲೈನ್ಸ್

ಕೇರಳದಲ್ಲಿ ನಿಫಾ ವೈರಸ್ ಕಾಟ ಶುರುವಾಗಿದೆ. ಅಸ್ಸಾಂ, ಒಡಿಶಾ, ರಾಜಸ್ಥಾನ, ತಮಿಳುನಾಡಿನ ಕೆಲ ಭಾಗದಲ್ಲಿ ಸ್ಕ್ರಬ್ ಟೈಫಸ್ ಹಾವಳಿ ಜೋರಾಗಿದೆ. ಇನ್ನು ಬೆಂಗಳೂರಿನ ಮಕ್ಕಳಲ್ಲಿ ಡೆಂಗ್ಯೂ ಹಾವಳಿ ಶುರುವಾಗಿದೆ. ಈ ಹಿನ್ನಲೆ ಶಾಲೆಗಳು ಹಾಗೂ ಮಕ್ಕಳಿಗೆ ಎಚ್ಚರಿಕೆಯಿಂದಿರಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಮಕ್ಕಳ ಆರೋಗ್ಯದ ಬಗ್ಗೆ ಕೇರ್ ತಗೆದುಕೊಳ್ಳುವಂತೆ ಪೋಷಕರಿಗೆ ಸೂಚನೆ ನೀಡಲಾಗಿದೆ.

ದೇಶದಲ್ಲಿ ಮತ್ತೆ ಕೊರೊನಾ ಪರಿಸ್ಥಿತಿ ಆತಂಕ; ಬೆಂಗಳೂರಿನಲ್ಲಿ ಮಕ್ಕಳಲ್ಲಿ ಹೆಚ್ಚಾದ ಡೆಂಗ್ಯೂ, ಆರೋಗ್ಯ ಇಲಾಖೆಯಿಂದ ಪೋಷಕರಿಗೆ ಗೈಡ್ ಲೈನ್ಸ್
ಡೆಂಗ್ಯೂ
Vinay Kashappanavar
| Edited By: |

Updated on: Sep 18, 2023 | 8:29 AM

Share

ಬೆಂಗಳೂರು, ಸೆ.18: ದೇಶದಲ್ಲಿ ಕೊರೊನಾ(Coronavirus) ವೈರಸ್​ನಂತಹ ಪರಿಸ್ಥಿತಿ ಮತ್ತೆ ನಿರ್ಮಾಣವಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಏಕೆಂದರೆ ವೈರಸ್​ಗಳ ಭೀತಿ ಶುರುವಾಗಿದೆ. ಕೇರಳದಲ್ಲಿ ನಿಫಾ ವೈರಸ್(Nipah Virus) ಕಾಟ ಹೆಚ್ಚಾಗಿದ್ದು, ಅಸ್ಸಾಂ, ಒಡಿಶಾ, ರಾಜಸ್ಥಾನ, ತಮಿಳುನಾಡಿನಲ್ಲಿ ಸ್ಕ್ರಬ್ ಟೈಫಸ್(Scrub Typhus) ಹಾವಳಿ ಜೋರಾಗಿದೆ. ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರ(Dengue Fever) ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನಗರದಲ್ಲಿ ಕಳೆದ 17 ದಿನಗಳಲ್ಲಿ ದಾಖಲೆ ಮಟ್ಟದಲ್ಲಿ ಅಂದರೆ 3,018 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಕಳೆದ ಒಂದು ತಿಂಗಳಿನಿಂದ ಬೆಂಗಳೂರು ನಗರದಲ್ಲಿ ಗರಿಷ್ಠ ಡೆಂಗ್ಯೂ ದಾಖಲಾಗಿದ್ದು ಕಳೆದ ಮೂರು ವರ್ಷಗಳಲ್ಲಿಯೇ ದಾಖಲೆ ಪ್ರಮಾಣದಲ್ಲಿ ಕೇಸ್​ಗಳು ಪತ್ತೆಯಾಗಿವೆ.

ಬೆಂಗಳೂರು ನಗರದಲ್ಲಿ ಈ ವರ್ಷ ಜನವರಿಯಿಂದ ನಿನ್ನೆಯವರೆಗೂ(ಸೆ.17) 5,220 ಡೆಂಗ್ಯೂ ಕೇಸ್​ಗಳು ದಾಖಲಾಗಿವೆ. ರಾಜ್ಯದಲ್ಲಿ 3,965 ಡೆಂಗ್ಯೂ ಕೇಸ್​ಗಳು ದಾಖಲಾಗಿವೆ. ಒಟ್ಟು 9,185 ಡೆಂಗ್ಯೂ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಕಳೆದ ಮೂರು ವರ್ಷಗಳಲ್ಲಿಯೇ ಗರಿಷ್ಠ ಡೆಂಗ್ಯೂ ಕೇಸ್ ವರದಿಯಾಗಿದೆ. ಹೀಗಾಗಿ ಆರೋಗ್ಯ ಇಲಾಖೆಯು ಶಾಲಾ ಮಕ್ಕಳಿಗೆ ಹಾಗೂ ಪೋಷಕರಿಗೆ ಎಚ್ಚರಿಕೆಯಿಂದಿರಲು ಸೂಚಿಸಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಡೆಂಘೀ, ಚಿಕನ್ ಗುನ್ಯಾ ಹಾವಳಿ; ವಾರಕ್ಕೆ 80 ಕೇಸ್ ಪತ್ತೆ

ಮಕ್ಕಳಲ್ಲಿ ಹೆಚ್ಚಾದ ಆರೋಗ್ಯ ಸಮಸ್ಯೆ

ಕೇರಳದಲ್ಲಿ ನಿಫಾ ವೈರಸ್ ಕಾಟ ಶುರುವಾಗಿದೆ. ಅಸ್ಸಾಂ, ಒಡಿಶಾ, ರಾಜಸ್ಥಾನ, ತಮಿಳುನಾಡಿನ ಕೆಲ ಭಾಗದಲ್ಲಿ ಸ್ಕ್ರಬ್ ಟೈಫಸ್ ಹಾವಳಿ ಜೋರಾಗಿದೆ. ಇನ್ನು ಬೆಂಗಳೂರಿನ ಮಕ್ಕಳಲ್ಲಿ ಡೆಂಗ್ಯೂ ಹಾವಳಿ ಶುರುವಾಗಿದೆ. ಈ ಹಿನ್ನಲೆ ಶಾಲೆಗಳು ಹಾಗೂ ಮಕ್ಕಳಿಗೆ ಎಚ್ಚರಿಕೆಯಿಂದಿರಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಮಕ್ಕಳ ಆರೋಗ್ಯದ ಬಗ್ಗೆ ಕೇರ್ ತಗೆದುಕೊಳ್ಳುವಂತೆ ಪೋಷಕರಿಗೆ ಸೂಚನೆ ನೀಡಲಾಗಿದೆ. ಕಳೆದ ಕೆಲವು ದಿನಗಳಿಂದ ರಾಜಧಾನಿ ಬೆಂಗಳೂರಿನ ಮಕ್ಕಳಲ್ಲಿ ಕೆಮ್ಮು, ಹೊಟ್ಟೆ ನೋವು, ಚಳಿ ಜ್ವರ, ವೈರಲ್ ಫೀವರ್, ಮೈ- ಕೈ ನೋವು, ತಲೆನೋವು, ನ್ಯೂಮೋನಿಯಾ ಹೆಚ್ಚಾಗಿ ಕಂಡು ಬರುತ್ತಿದೆ. ಮಕ್ಕಳಲ್ಲಿ ಡೆಂಗ್ಯೂ ಜೊತೆಗೆ ಬೇರೆ ಬೇರೆ ವೈರಸ್​ಗಳ ಕಾಟ ಶುರುವಾಗಿದೆ.

ಮಕ್ಕಳ ಬಗ್ಗೆ ಎಚ್ಚರ ವಹಿಸಲು ಆರೋಗ್ಯ ಇಲಾಖೆ ಸೂಚನೆ

  • ಇನ್ನು ಮಕ್ಕಳಲ್ಲಿ ತೀವ್ರ ಜ್ವರ, ಕೆಮ್ಮು, ನೆಗಡಿ ಇದ್ರೆ ಶಾಲೆಗೆ ಕಳಿಸದಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
  • ಮಕ್ಕಳಿಗೆ ಡೆಂಗ್ಯೂ ನಿಂದ ದೂರ ಇಡಲು ಸೊಳ್ಳೆ ಕಾಟ ತಪ್ಪಿಸುವಂತೆ ಸಲಹೆ ನೀಡಿದೆ.
  • ಶಾಲೆಗೆ ಬರುವ ಮಕ್ಕಳಿಗೆ ಕೆಲ ದಿನಗಳ ವರೆಗೂ ಕೈ ಕಾಲು ಮುಚ್ಚುವ ಬಟ್ಟೆ ಧರಿಸುವಂತೆ ಸೂಚಿಸಲಾಗಿದೆ.
  • ಕೈ ಹಾಗೂ ಕಾಲು ಭಾಗಕ್ಕೆ ಯಾವುದಾದ್ರೂ ಲೋಶನ್ ಕ್ರೀಮ್ ಗಳ ಬಳಕೆ ಮಾಡುವಂತೆ ಸೂಚಿಸಿದೆ
  • ಮಕ್ಕಳಿಗೆ ಸಣ್ಣ ಜ್ವರ ಕಾಣಿಸಿಕೊಂಡ್ರೂ ನಿರ್ಲಕ್ಷ್ಯವಹಿಸದಂತೆ ಆರೋಗ್ಯ ಇಲಾಖೆ ಪೋಷಕರಿಗೆ ಎಚ್ಚರಿಕೆಯಿಂದಿರಲು ತಿಳಿಸಿದೆ.
  • ಡೆಂಗ್ಯೂ ಶಾಕ್ ಗೆ ಮಕ್ಕಳು ಹೋಗದಂತೆ ನೋಡಿಕೊಳ್ಳುವಂತೆ ಎಚ್ಚರಿಕೆ ವಹಿಸಲು ಸೂಚಿಸಿದೆ.
  • ಇತರೆ ವೈರಸ್ ಗಳ ಬಗ್ಗೆ ಕೂಡಾ ಜಾಗೃತಿವಹಿಸುವಂತೆ ಸೂಚನೆ. ಹೀಗೆ ಶಾಲಾ ಮಕ್ಕಳು ಹಾಗೂ ಪೋಷಕರಿಗೆ ಮಕ್ಕಳ ಆರೋಗ್ಯದ ಬಗ್ಗೆ ಸೂಕ್ತ ಎಚ್ಚರಿಕೆಗೆ ಆರೋಗ್ಯ ಇಲಾಖೆ ನಿರ್ದೇಶನ ನೀಡಿದೆ.

    ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!